![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಎಪಿಎಂಸಿಯಲ್ಲಿ ರೈತರಿಂದ ಪ್ರತಿಭಟನೆ
Team Udayavani, Jan 13, 2020, 12:24 PM IST
![gadaga-tdy-1](https://www.udayavani.com/wp-content/uploads/2020/01/gadaga-tdy-1-9-620x427.jpg)
ಗದಗ: ಒಣ ಮೆಣಸಿನಕಾಯಿ ಇ-ಟೆಂಡರ್ ಮೂಲಕ ಖರೀದಿಸಿದ ಖರೀದಿದಾರರು ಬಳಿಕ ಕಡಿಮೆ ಹಣ ನೀಡಲು ಮುಂದಾಗಿದ್ದರಿಂದ ಆಕ್ರೋಶಗೊಂಡ ರೈತರು ಕೆಲಕಾಲ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಗದಗ ಎಪಿಎಂಸಿಯಲ್ಲಿ ವಾರದಲ್ಲಿ ಎರಡು ದಿನಗಳು ಮಾತ್ರ ಇ-ಟೆಂಡರ್ ಮೂಲಕ ಖರೀದಿಯಾಗುತ್ತಿದೆ. ಅದರಂತೆ ಶನಿವಾರ ನಡೆದ ಇ-ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಖರೀದಿದಾರರು, ಟೆಂಡರ್ನಲ್ಲಿ ನೀಡಿದ ಬೆಲೆಗಿಂತ ಕಡಿಮೆ ಹಣ ನೀಡಲು ಮುಂದಾಗಿದ್ದರಿಂದ ರೈತರು, ಅವರೊಂದಿಗೆ ವಾಗ್ವಾದ ನಡೆಸಿದರು. ಈ ರೀತಿ ರೈತರಿಗೆ ಅನ್ಯಾಯ ಮಾಡುವುದು ಸರಿಯಲ್ಲ. ರೈತರಿಗೆ ವಂಚಿಸಲೆಂದೇ ರಾತ್ರಿ 7 ಗಂಟೆವರೆಗೂ ಕಾಯಿಸಿದ್ದಾರೆ. ಈ ಬಗ್ಗೆ ಎಪಿಎಂಸಿಗೆ ದೂರು ನೀಡುತ್ತೇವೆ ಎಂದರೂ, ಖರೀದಿದಾರರು ಜಗ್ಗದ ಕಾರಣ ಬೀದಿಗಿಳಿದು ಕೆಲಕಾಲ ಪ್ರತಿಭಟನೆ ನಡೆಸಿ, ಧಿಕ್ಕಾರ ಕೂಗಿದರು ಎಂದು ತಿಳಿದು ಬಂದಿದೆ.
ಆ ಪೈಕಿ ನಗರದ ಎಪಿಎಂಸಿ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಶನಿವಾರ ರೈತರು ಒಣ ಮೆಣಸಿನಕಾಯಿ ಮಾರಾಟ ಮಾಡಲು ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದ ರೈತ ಬಸವಲಿಂಗಪ್ಪ ಮೇಟಿ ಆಗಮಿಸಿದ ಸಂದರ್ಭದಲ್ಲಿ ಅವರ ಒಣ ಮೆಣಸಿನಕಾಯಿ ಬೆಳೆಗೆ ಇ-ಟೆಂಡರ್ ನಲ್ಲಿ ಪ್ರತಿ ಕ್ವಿಂಟಲ್ಗೆ 13,175 ರೂ. ಖರೀದಿಯಾಗಿತ್ತು. ಆದರೆ, ವರ್ತಕರು ಪ್ರತಿ ಕ್ವಿಂಟಲ್ಗೆ 12,170 ರೂ. ನೀಡಲು ಮುಂದೆ ಬಂದಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು. ಒಟ್ಟಾರೆ, ರಾಜ್ಯದಲ್ಲಿ ಬ್ಯಾಡಗಿ ಹೊರತುಪಡಿಸಿದರೆ, ಗದಗ ಎಪಿಎಂಸಿ ಮಾರುಕಟ್ಟೆಯಲ್ಲಿ ಇ-ಟೆಂಡರ್ ಮೂಲಕ ಒಣ ಮೆಣಸಿನಕಾಯಿ ಖರೀದಿಸಲಾಗುತ್ತಿದೆ. ಕಳೆದ ಎರಡು ವಾರಗಳಿಂದ ಗದಗಿನಲ್ಲಿ ಈ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದ್ದು, ಪಾರದರ್ಶಕ ವಹಿವಾಟು ಆಗಲಿದೆ ಎಂಬ ನಿರೀಕ್ಷೆಯಿಂದ ಗದಗ, ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಒಣ ಮೆಣಸಿನಕಾಯಿ ಬೆಳೆಗಾರರು ಇದೀಗ ಗದಗ ಮಾರುಕಟ್ಟೆಯತ್ತ ಮುಖ ಮಾಡಿದ್ದಾರೆ.
ಜೊತೆಗೆ ಬ್ಯಾಡಗಿ ಮಾರುಕಟ್ಟೆ ಖರೀದಿದಾರರು ಇ -ಟೆಂಡರ್ನಲ್ಲಿಪಾಲ್ಗೊಳ್ಳುವುದರಿಂದ ರೈತರಿಗೆಉತ್ತಮ ಬೆಲೆ ದೊರೆಯುತ್ತಿತ್ತು. ಆದರೆ, ಸ್ಥಳೀಯ ಖರೀದಿದಾರರು ದುರುದ್ದೇಶದಿಂದ ಬ್ಯಾಡಗಿ ಖರೀದಿದಾರರಿಗೆ ಜೀವ ಬೆದರಿಕೆ ಹಾಕಿ, ಟೆಂಡರ್ನಲ್ಲಿ ಪಾಲ್ಗೊಳ್ಳದಂತೆ ಮಾಡುತ್ತಿದ್ದಾರೆ. ಖರೀದಿದಾರರು ಹಾಗೂ ವರ್ತಕರು ದುರಾಸೆಯಿಂದ ರೈತರ ವಂಚನೆಗಿಳಿದಿರುವುದು ವಿಪರ್ಯಾಸದ ಸಂಗತಿ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.