ರಸ್ತೆ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Nov 22, 2019, 12:16 PM IST
ರೋಣ: ಪಟ್ಟಣದ ಸರ್ಕಾರಿ ಪ.ಪೂ ಕಾಲೇಜಿಗೆ ಹೋಗಲು ವ್ಯವಸ್ಥಿತ ರಸ್ತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ಜೆ.ಟಿ. ಕೊಪ್ಪದ ಅವರಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿನಿ ಹನಮವ್ವ ಕಡಿವಾಲ ಮಾತನಾಡಿ, ಗ್ರಾಮೀಣ ಬಡ ಮಕ್ಕಳ ಅನುಕೂಲಕ್ಕಾಗಿ 1981ರಲ್ಲಿ ರಾಜ್ಯ ಸರ್ಕಾರ ಪ.ಪೂ ಕಾಲೇಜು ಪ್ರಾರಂಭಿಸಿದೆ. ಅಲ್ಲಿಂದ ಸತತ 28 ವರ್ಷಗಳ ಕಾಲ ಸರ್ಕಾರಿ ನಿಯಮಕ್ಕಿಂತ ಹೆಚ್ಚು ಮಕ್ಕಳು ಪ್ರತಿ ವರ್ಷ ಇಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಈ ಕಾಲೇಜಿಗೆ ತೆರಳುವ ರಸ್ತೆ ಮಾರ್ಗವನ್ನು ವಿ.ಎಫ್. ಪಾಟೀಲ ಪ್ರೌಢಶಾಲೆ
ಆಡಳಿತ ಮಂಡಳಿಯವರು ಬೇಲಿ ಹಾಕಿ ಬಂದ್ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ತಿಳಿಸಿದರು.
ಆದ್ದರಿಂದ ಈ ಸಮಸ್ಯೆಯನ್ನು ಶೀಘ್ರವಾಗಿ ಶಿಕ್ಷಣ ಇಲಾಖೆ ಅಧಿ ಕಾರಿಗಳು ಬಗೆಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳೆಲ್ಲ ಸೇರಿ ಅಖೀಲ ಭಾರತ ವಿದ್ಯಾರ್ಥಿ ಪರಿಷತ್ನಿಂದ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ವಿದ್ಯಾರ್ಥಿ ಸಂತೋಷ ಮಲ್ಲಾಪುರ ಮಾತನಾಡಿ, ಕಾಲೇಜಿಗೆ ತೆರಳುವ ರಸ್ತೆ ಗುರುತಿಸಿ ಅನುಕೂಲ ಕಲ್ಪಿಸಬೇಕು. ತಡ ಮಾಡಿದ್ದಲ್ಲಿ ತರಗತಿ ಬಹಿಷ್ಕರಿಸಿ ರಸ್ತೆಗಿಳಿದು ಹೋರಾಟ ಮಾಡುತ್ತೇವೆ. ಅದಕ್ಕಿಂತ ಮೊದಲು ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ನಂತರ ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ಉಪ ತಹಶೀಲ್ದಾರ ಜೆ.ಟಿ. ಕೊಪ್ಪದ , ಮನವಿ ಪತ್ರ ಕೂಡಲೇ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸಿ ರಸ್ತೆ ಕುರಿತು ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ರುಕ್ಮಿಣಿ ಹುಸಲಕೋಪ, ಅಶ್ವಿನಿ ಯರಗೊಪ್ಪ, ಪವಿತ್ರಾ ಸಿದ್ದೊಗಿ, ಕವಿತಾ ಹೊಸಳ್ಳಿ, ಜ್ಯೋತಿ ಬಳಿಗಾರ, ಅಶ್ವಿನಿ ಮಾಳಗಿ, ಹನಮಂತ ದೊಡ್ಡಮನಿ, ಶಿವಾಜಿ ಬಿದರಿ, ಆಸೀಫ್ ಯಲಿಗಾರ, ಸಹಜಾನಂದ ಮುಗಳಿ, ನವೀನ ತಮಿನಾಳ, ರವಿಚಂದ್ರ ಬೇವಿನಕಟ್ಟಿ, ಮಹಾಂತೇಶ ಪೂಜಾರ, ಶಿವು ಮಾದರ, ವಿನಾಯಕ ಜಕ್ಕಲ್ಲಿ, ಚೇತನ ಯಂಡಿಗೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್