ಗ್ರಾಮೀಣ ಬ್ಯಾಂಕ್ ನೌಕರರಿಗೆ ಸೌಲಭ್ಯ ಕಲ್ಪಿಸಿ
Team Udayavani, Nov 2, 2018, 4:33 PM IST
ಗದಗ: ವಾಣಿಜ್ಯ ಬ್ಯಾಂಕ್ಗಳ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಗ್ರಾಮೀಣ ಬ್ಯಾಂಕ್ಗಳ ನೌಕಕರಿಗೆ ನೀಡಬೇಕೆಂದು ಒತ್ತಾಯಿಸಿ ಕಳೆದ 15 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ಹೋರಾಟದ ಫಲವಾಗಿ ನಿವೃತ್ತಿ ವೇತನ ಜಾರಿಗೊಂಡಿದೆ. ಇದು ಬ್ಯಾಂಕ್ ನೌಕರರ ಹೋರಾಟಕ್ಕೆ ಸಂದ ಜಯ ಎಂದು ಎನ್ಎಫ್ಆರ್ಆರ್ಬಿಇ ಅಧ್ಯಕ್ಷ ಎಚ್. ನಾಗಭೂಷಣ ರಾವ್ ಹೇಳಿದರು.
ಜಂಟಿ ಕ್ರಿಯಾ ಸಮಿತಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನೌಕಕರ ಹಾಗೂ ಅಧಿಕಾರಿಗಳ ಸಂಘದಿಂದ ನಗರದಲ್ಲಿ ಗುರುವಾರ ನಡೆದ ‘ಪೆನ್ಶನ್ ವಿಜಯೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿವೃತ್ತಿ ವೇತನಕ್ಕಾಗಿ ಕಳೆದ ಒಂದೂವರೆ ದಶಕದಿಂದ ಸಾರ್ವಜನಿಕ ಹಾಗೂ ಕಾನೂನು ಹೋರಾಟದ ಫಲವಾಗಿ ನ್ಯಾಯಾಲಯ ಈ ಆದೇಶ ನೀಡಿದೆ ಎಂದು ತಿಳಿಸಿದರು.
ಗ್ರಾಮೀಣ ಬ್ಯಾಂಕ್ ನೌಕರರ ಇತರೆ ಬೇಡಿಕೆಗಳ ಈಡೇರಿಕೆಗೆ ಸಂಘಟನೆ ಬಲಪಡಿಸಬೇಕು. ಬ್ಯಾಂಕಿಂಗ್ ವಲಯವನ್ನು ಉಳಿಸುವುದರೊಂದಿಗೆ ವೈಯಕ್ತಿಕ ಜೀವನಕ್ಕೆ ಅಗತ್ಯವಿರುವ ಬೇಡಿಕೆಗಳಿಗೆ ಹೋರಾಡಬೇಕು ಎಂದರು. ಎಕೆಜಿಬಿಇಎಫ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಬನ್ನಿಗೋಳ ಮಾತನಾಡಿ, ಸಂಘವು ಉದ್ಯೋಗಿಗಳ ಪರವಾಗಿ ಕೆಲಸ ಮಾಡುತ್ತಿದೆ. ಸರಕಾರದ ಉದ್ಯೋಗಿಗಳ ವಿರುದ್ಧದ ಧೋರಣೆಗಳನ್ನು ನೇರವಾಗಿ ಖಂಡಿಸುತ್ತಿದೆ. ಯುವ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಂಘಟನೆಯೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಎಸ್.ಎನ್. ಸವದತ್ತಿ ಅಧ್ಯಕ್ಷತೆ ವಹಿಸಿದ್ದರು.
ಜಿ.ಎಂ. ವೈದ್ಯ, ಗಣಪತಿ ಹೆಗಡೆ, ಎಲ್. ಎಸ್. ಲೋಕರೆ, ಆರ್.ಡಿ. ಸೂಗೂರ, ಎಚ್.ಎ. ಪಾಟೀಲ, ಸಂತೋಷ ವಡೆಯರ, ರಾಜು ಭಜಂತ್ರಿ, ವಿಶ್ವನಾಥ ರೆಡ್ಡಿ, ಎಸ್.ಜಿ. ಹೊಂಬಳ, ಸಿದ್ರಾಮಯ್ಯ ಹಿರೇಮಠ ಉಪಸ್ಥಿತರಿದ್ದರು. ಸಮಾರಂಭ ಆರಂಭಕ್ಕೂ ಮುನ್ನ ಲಿಂ.ಜ.ತೋಂಟದ ಸಿದ್ಧಲಿಂಗ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು. ಟಿ.ಆರ್. ಹಟ್ಟಿ ಸ್ವಾಗತಿಸಿದರು. ಪ್ರವೀಣ ಅಣ್ಣಿಗೇರಿ ನಿರೂಪಿಸಿದರು. ವಿ.ಎಸ್.ನರೇಗಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.