ಶವ ಸಂಸ್ಕಾರಕ್ಕೆ ಜಾಗ ಒದಗಿಸಿ
Team Udayavani, Jul 13, 2019, 10:43 AM IST
ಗದಗ: ಹಾತಲಗೇರಿಯಲ್ಲಿ ಸ್ಮಶಾನ ಕೊರತೆಯಿಂದಾಗಿ ಗ್ರಾಪಂ ಕಚೇರಿ ಎದುರು ಶವ ಸಂಸ್ಕಾರಕ್ಕೆ ಮುಂದಾಗುವ ಮೂಲಕ ಗ್ರಾಮಸ್ಥರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಗದಗ: ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಮೃತರ ಕುಟಂಬಸ್ಥರು ತಾಲೂಕಿನ ಹಾತಲಗೇರಿ ಗ್ರಾಪಂ ಕಚೇರಿ ಎದುರು ಶವ ಸಂಸ್ಕಾರಕ್ಕೆ ಮುಂದಾಗುವ ಮೂಲಕ ಶುಕ್ರವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಗ್ರಾಮದ ಅಂಬೇಡ್ಕರ್ ನಗರದ ನಿವಾಸಿ ಚಂದ್ರಪ್ಪ ಡಾವಣೆಗೆರೆ (65) ಎಂಬುವವರು ಗುರುವಾರ ರಾತ್ರಿ ನಿಧನರಾಗಿದ್ದರು. ಆದರೆ, ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ಇಲ್ಲದ ಕಾರಣ ಆಕ್ರೋಶಗೊಂಡ ಮೃತರ ಸಂಬಂಧಿಕರು ಗ್ರಾ.ಪಂ ಎದುರು ಶವ ಸಂಸ್ಕಾರಕ್ಕೆ ಮುಂದಾದರು. ಶವ ಸಂಸ್ಕಾರಕ್ಕಾಗಿ ಕಟ್ಟಿಗೆಗಳನ್ನು ಜೋಡಿಸಿದ್ದರಿಂದ ಗ್ರಾ.ಪಂ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರು ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಗ್ರಾ.ಪಂ ಕಚೇರಿ ಎದುರು ಅಂತ್ಯಕ್ರಿಯೆ ನೆರವೇರಿಸಲು ಅಡ್ಡಿಪಡಿಸುವುದಾದರೆ, ರುದ್ರಭೂಮಿ ತೋರಿಸುವಂತೆ ಸಾರ್ವಜನಿಕರು ಪಟ್ಟು ಹಿಡಿದರು. ಇದರಿಂದಾಗಿ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ಮುಂದುವರಿಯಿತು.
ತಹಶೀಲ್ದಾರ್ಗೆ ಗ್ರಾಮಸ್ಥರ ತರಾಟೆ: ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಕಳೆದ ಎರಡು ತಲೆ ಮಾರುಗಳಿಂದ ಗ್ರಾಮದ ದೇವಪ್ಪ ಮುರ್ಲಾಪುರ ಎಂಬುವವರ ಕುಟುಂಬಸ್ಥರು ತಮ್ಮ 3 ಎಕರೆ ಜಮೀನಿನ ಒಂದಿಷ್ಟು ಭಾಗವನ್ನು ಶವಗಳ ದಹನಕ್ಕೆಂದು ಬಿಟ್ಟುಕೊಟ್ಟಿದ್ದರು. ಇತ್ತೀಚೆಗೆ ಕುಟುಂಬಸ್ಥರು ಪಾಲು ಆಗಿದ್ದರಿಂದ ತಮಗೆ ಜಮೀನು ಸಾಲುತ್ತಿಲ್ಲವೆನ್ನುತ್ತಿದ್ದಾರೆ. ಶವ ಸಂಸ್ಕಾರಕ್ಕೆ ಅವಕಾಶ ನೀಡುತ್ತಿಲ್ಲ. ಇತ್ತ ಗ್ರಾಮದಲ್ಲಿ ರುದ್ರಭೂಮಿಯೂ ಇದೇ, ಮೃತರ ಅಂತ್ಯಕ್ರಿಯೆ ನೆರವೇರಿಸಲು ಪರದಾಡುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಪಂ ಎದುರೇ ಶವ ದಹಿಸುವುದಾಗಿ ಪಟ್ಟು ಹಿಡಿದರು.
ಈ ವೇಳೆ ಮೃತರ ಸಂಬಂಧಿಕರನ್ನು ಸಮಾಧಾನ ಪಡಿಸಿದ ತಹಶೀಲ್ದಾರ್ ಗ್ರಾಮಸ್ಥರ ಅನುಕೂಲಕ್ಕಾಗಿ ಶವ ಸಂಸ್ಕಾರಕ್ಕೆ ಜಮೀನು ಬಿಟ್ಟುಕೊಟ್ಟಿದ್ದ ಹರ್ಲಾಪುರ ಕುಟುಂಬದವರ ಜಮೀನು ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಅವರು ದುಬಾರಿ ಬೆಲೆ ಕಟ್ಟಿದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲ. ಇದೀಗ ಮತ್ತೂಂದು ಜಮೀನು ಗುರುತಿಸಲಾಗಿದ್ದು, ಸದ್ಯದಲ್ಲೇ ಅಂತಿಮಗೊಳ್ಳಲಿದೆ. ಮೂರು ತಿಂಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯಲಿದ್ದು, ಅಲ್ಲಿವರೆಗೆ ಸಹಕರಿಸುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ, ಸಮೀಪದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯುವಂತೆ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆ ಪರಿಹರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು