ಮಳೆ ಕೊಯ್ಲು ಘಟಕ ಇನ್ನು ಕಡ್ಡಾಯ

•ಕಟ್ಟಡ ಪರವಾನಗಿ ಸಲ್ಲಿಸಿದ ಎಲ್ಲರೂ ಘಟಕ ನಿರ್ಮಿಸುವುದು ಕಡ್ಡಾಯ•ತಪ್ಪಿದರೆ ಕ್ರಮ

Team Udayavani, Aug 2, 2019, 10:17 AM IST

gadaga-tdy-02

ನರೇಗಲ್ಲ: ಸರ್ಕಾರ ಆದೇಶದ ಪ್ರತಿ.

ನರೇಗಲ್ಲ: ಭೀಕರ ಬರಗಾಲ ಮೆಟ್ಟಿ ನಿಲ್ಲುವ ನಿಟ್ಟಿನಲ್ಲಿ ನಮ್ಮ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಮಳೆ ಕೊಯ್ಲು ನೀರು ಘಟಕ ಸ್ಥಾಪಿಸುವುದು ಕಡ್ಡಾಯವಾಗಿದೆ. ಸರ್ಕಾರ ಈ ಕುರಿತು ಆದೇಶವೊಂದನ್ನು ಹೊರಡಿಸಿದೆ.

ಪ್ರಸ್ತುತ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಲಭ್ಯತೆಯೂ ಕಡಿಮೆಯಾಗುತ್ತಿದೆ. ಇದರಿಂದ ಜನತೆ ಹನಿ ನೀರಿಗೂ ತತ್ವಾರ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ನೀರೆಂದರೆ ಜೀವಜಲ. ಆಹಾರವಿಲ್ಲದೇ ಬದುಕಬಹುದು, ಆದರೆ ನೀರಿಲ್ಲದೇ ಬದುಕುವುದು ಅಸಾಧ್ಯ. ಹೀಗಾಗಿ ವಾಣಿಜ್ಯ ಮಳಿಗೆಗಳು, ಕಲ್ಯಾಣ ಮಂಟಪಗಳು, ಮಹಡಿ ಕಟ್ಟಡಗಳು, ಹೊಸದಾಗಿ ನಿರ್ಮಿಸುತ್ತಿರುವ ಮನೆಗಳ ಮಾಲಿಕರು ಸೇರಿದಂತೆ ಸರ್ಕಾರಿ ಇಲಾಖೆಗಳು, ಎಲ್ಲಾ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆವರಣದಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸುವುದಕ್ಕೆ ಸೂಚನೆ ನೀಡಿದೆ.

ಮಳೆ ನೀರು ಕೊಯ್ಲು ಅಳವಡಿಸಿ ನಂತರ ಮನೆ ಹಾಗೂ ಸರ್ಕಾರಿ ಕಟ್ಟಡಗಳ ಆವರಣಗಳಲ್ಲಿ ಇಂಗು ಗುಂಡಿ ನಿರ್ಮಿಸಿ ಸಂಗ್ರಹಿಸುವ ವ್ಯವಸ್ಥೆ ಮಾಡಿದರೆ ಗಿಡಗಳಿಗೆ, ಪ್ರಾಣಿ-ಪಕ್ಷಿಗಳಿಗೆ ನೀರುಣಿಸುವುದಕ್ಕೆ ಇದೇ ನೀರು ಮರು ಬಳಸಿಕೊಳ್ಳಬಹುದು. ಮನೆಯ ಚಾವಣಿ ಮೂಲಕ ಕೃತಕ ಮಳೆ ಸೃಷ್ಟಿಸಿ ಗಿಡಗಳಿಗೆ ಸಿಂಪರಣೆ ಮಾಡುವುದರಿಂದ ಅವುಗಳ ಜೀವವನ್ನು ಉಳಿಸಿದಂತಾಗುತ್ತದೆ. ಪರಿಸರ ಉಳಿದರೆ ಜೀವಿಗಳು ಬದುಕಲು ಸಾಧ್ಯವಾಗುತ್ತದೆ.

ಘಟಕದಿಂದ ಲಾಭ: ಮಳೆ ಬಂದಾಗ ಮಳೆ ನೀರನ್ನು ವ್ಯವಸ್ಥಿತವಾಗಿ ಸಂಗ್ರಹಿಸಿಡುವುದು, ಇದು ಪರಿಸರ ಸ್ನೇಹಿ ಸರಳ ತಂತ್ರಜ್ಞಾನದಿಂದ ಕಡಿಮೆ ಖರ್ಚಿನಲ್ಲಿ ನಿರ್ಮಿಸುವಂತಹ ಒಂದು ಕಾರ್ಯವಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಸಂಗ್ರಹಿಸಿದ ನೀರನ್ನು ಬಳಸಬಹುದು. ಈ ರೀತಿ ಸಂಗ್ರಹಿಸಿದ ನೀರು ಬರಗಾಲದಲ್ಲಿ ನೆರವಾಗುವುದು. ಅಂತರ್ಜಲ ಹೆಚ್ಚಿಸಿ ಮಣ್ಣಿನ ಕೊಚ್ಚಿ ಹೋಗುವುದನ್ನು ತಡೆಗಟ್ಟಬಹುದು. ತಗ್ಗಿನ ಪ್ರದೇಶಗಳಲ್ಲಿ ಬರುವ ನೆರೆ ಪ್ರವಾಹ ತಡೆಗಟ್ಟುವುದು. ನೀರಿನ ಉಳಿತಾಯವಾಗುವುದು. ಈ ರೀತಿ ಶೇಖರಿಸಿದ ನಿಖರವಾದ ಸ್ಥಳಗಳಲ್ಲಿ ಸಮಯದಲ್ಲಿ ನೀರು ಪೂರೈಕೆ ಸೇರಿದಂತೆ ಅನೇಕ ಲಾಭಗಳಾಗುತ್ತವೆ.

•ಘಟಕ ನಿರ್ಮಿಸದಿದ್ದರೆ ಮೂಲ ಸೌಕರ್ಯ ಒದಗಿಸಲು ಅನುಮತಿ ನೀಡಲ್ಲ
•ಈಗಾಗಲೇ ಮನೆ-ಕಟ್ಟಡ ನಿರ್ಮಿಸಿದವರಿಗೆ ನೀಡಲಾಗುವುದು ನೋಟಿಸ್‌ •ಅ.10ರೊಳಗೆ ಘಟಕಗಳನ್ನು ಆರಂಭಿಸಲು ಹೊರಡಿಸಲಾಗಿದೆ ಸೂಚನೆ

ಜಲಶಕ್ತಿ ಅಭಿಯಾನದಲ್ಲಿ ಪ್ರತಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುವುದು. ಕಟ್ಟಡ ಪರವಾನಗಿ ಸಲ್ಲಿಸಿದ ಎಲ್ಲರಿಗೂ ಕಡ್ಡಾಯವಾಗಿ ಮನೆ, ಕಟ್ಟಡಗಳಿಗೆ ಮಳೆ ಕೊಯ್ಲು ನೀರು ಘಟಕ ಅವಶ್ಯವಾಗಿ ನಿರ್ಮಿಸಬೇಕು. ಇಲ್ಲದಿದ್ದರೆ ಮೂಲ ಸೌಕರ್ಯಗಳು ಒದಗಿಸಲು ಅನುಮತಿ ನೀಡುವುದಿಲ್ಲ. ಈಗಾಗಲೇ ನಿರ್ಮಿಸಲಾಗಿರುವ ದೊಡ್ಡ ಕಟ್ಟಡ ಹಾಗೂ ಮನೆಗಳಿಗೆ ಮಳೆ ನೀರು ಕೊಯ್ಲು ನಿರ್ಮಿಸುವಂತೆ ನೋಟಿಸ್‌ ನೀಡಲಾಗುತ್ತಿದೆ.•ಎಸ್‌.ಎಸ್‌.ಹುಲ್ಲಮ್ಮನವರ,ಪಪಂ ಮುಖ್ಯಾಧಿಕಾರಿ.

ಸರ್ಕಾರ ಈ ಯೋಜನೆಯನ್ನು ಕಡ್ಡಾಯವಾಗಿ ಜಾರಿಗೆ ತಂದಿರುವುದು ಬಹಳ ಖುಷಿ ತಂದಿದೆ. ಇದನ್ನು ಕಟ್ಟುನಿಟ್ಟಾಗಿ ಸರ್ಕಾರಿ ಇಲಾಖೆಗಳಿಗೆ ಮಾತ್ರವಲ್ಲ ಸಾರ್ವಜನಿಕರು ಸಹ ತಮ್ಮ ತಮ್ಮ ಮನೆಗಳಲ್ಲಿ ಇರುವ ಸ್ವಲ್ಪ ಜಾಗದಲ್ಲಿಯಾದರೂ ಈ ಘಟಕ ನಿರ್ಮಿಸಿಕೊಂಡರೆ ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಅಲ್ಪವಾದರೂ ಕಡಿಮೆಯಾಗುವುದು.•ಕಳಕಪ್ಪ ಬಂಡಿ,ರೋಣ ಶಾಸಕ

 

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.