ಜಮೀನಿನಲ್ಲಿ ಮಳೆ ನೀರು; ಕೃಷಿಗೆ ಹಿನ್ನಡೆ
Team Udayavani, Oct 25, 2019, 2:20 PM IST
ಗಜೇಂದ್ರಗಡ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಸುರಿದ ಮಳೆಯಿಂದಾಗಿ ಎರಿ ಭೂಮಿಯಲ್ಲಿ ನೀರು ನಿಂತು ಹಿಂಗಾರು ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆ ಅನುಭವಿಸುವಂತಾಗಿದೆ.
ಕಳೆದ ಹದಿನೈದು ದಿನಗಳಿಂದ ಈ ಭಾಗದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದೆ. ಹಳ್ಳ ಕೊಳ್ಳಗಳು ಹರಿಯುತ್ತಿವೆ. ಆದರೆ ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿಯೇ ಬಿತ್ತನೆ ಕಾರ್ಯ ಪೂರ್ಣಗೊಳಿಸಬೇಕಿದ್ದ ಅನ್ನದಾತರಿಗೆ ಮಳೆರಾಯ ಬೆಂಬಿಡದೇ ಕಾಡುತ್ತಿದ್ದಾನೆ. ಮಳೆಯಿಂದಾಗಿ ಕಪ್ಪು ಭೂಮಿಯಲ್ಲಿ ಬಿತ್ತನೆಗೆ ಯೋಗ್ಯವಲ್ಲದಂತೆ ನೀರು ತುಂಬಿಕೊಂಡಿದೆ. ಈ ಮಧ್ಯೆ ವರುಣದೇವ ಕೊಂಚ ಬ್ರೇಕ್ ನೀಡಿದ್ದನು. ಆ ಸಂದರ್ಭದಲ್ಲಿ ರೈತರು ಬಿತ್ತನೆಗೆಭೂಮಿಯನ್ನು ಹದವನ್ನಾಗಿಸಿಕೊಂಡಿದ್ದರು.
ಆದರೆ ಮತ್ತೆ ಮಳೆ ಸುರಿದಿದ್ದರಿಂದ ಜಮೀನಿನಲ್ಲಿ ನೀರು ನಿಂತು ಸಂಪೂರ್ಣ ಕೆಸರುಮಯವಾಗಿದೆ.ಮಳೆರಾಯನ ಕಣ್ಣಾ ಮುಚ್ಚಾಲೆ: ಈಗಾಗಲೇ ಹಿಂಗಾರು ಬಿತ್ತನೆ ಮಾಡಬೇಕೆಂದು ಬಿಳಿಜೋಳ, ಕಡಲೆ, ಗೋಧಿ ಬೀಜಗಳನ್ನು ಸಂಗ್ರಹಿಸಿಟ್ಟಿದ್ದಾರೆ. ಆದರೆ ಎರಡು ದಿನ ಮಳೆ ನಿಂತರೆ, ಮರು ದಿನವೇ ಮತ್ತೆ ಮಳೆ ಸುರಿಯುತ್ತಿದೆ. ಕಳೆದೊಂದು ವಾರದಿಂದ ಹೀಗೆ ವರುಣ ದೇವನ ಕಣ್ಣಾಮುಚ್ಚಾಲೆಯಿಂದಾಗಿ ಬಿತ್ತನೆಗೆ ಹಿನ್ನಡೆಯಾಗುತ್ತಿದೆ. ಈಗಾಗಲೇ ಹಿಂಗಾರು ಬಿತ್ತನೆಯ ಅವಧಿ ಮುಗಿಯುತ್ತಾ ಬಂದರೂ ಸಹ ಈವರೆಗೂ ತಾಲೂಕಿನ ಬಹುತೇಕ ಗ್ರಾಮಗಳ ರೈತರುಇನ್ನೂ ಸಹ ಬಿತ್ತನೆ ಮಾಡದಿರುವುದು ಅನ್ನದಾತರನ್ನು ಚಿಂತೆಗೀಡು ಮಾಡಿದೆ.
ಅಕ್ಟೋಬರ ಅಂತ್ಯದೊಳಗೆ ಬಿತ್ತಲೇಬೇಕು ಎಂಬ ಅನಿವಾರ್ಯತೆ ಎದುರಿಸುತ್ತಿರುವ ರೈತರಿಗೆ ಹಸಿಯಾಗಿರುವ ಭೂಮಿ ಶಾಪವಾಗಿ ಪರಿಣಮಿಸಿದೆ. ಹಿಂಗಾರು ಹಂಗಾಮಿನ ಬಿತ್ತನೆ ಆರಂಭವಾಗುವ ಸಮಯಕ್ಕೆ ಸರಿಯಾಗಿ ಮೇಘರಾಜನ ಆರ್ಭಟವೂ ಹೆಚ್ಚಿದ್ದರಿಂದ ಈ ಬಾರಿ ನಿರೀಕ್ಷೆಯಂತೆ ಬಿತ್ತನೆ ನಡೆದಿಲ್ಲ. ಈ ವೇಳೆ ಶೇ.70 ರಿಂದ 80ರಷ್ಟು ನಡೆಯಬೇಕಿದ್ದ ಬಿತ್ತನೆ, ಇದುವರೆಗೂ ಶೇ. 30 ರಷ್ಟು ಸಹ ನಡೆದಿಲ್ಲ. ಇದು ಮುಂಗಾರು ಹಂಗಾಮಿನ ಮೇಲೆ ಪರಿಣಾಮ ಬೀರುವುದಂತೂ ಸತ್ಯ ಎನ್ನುವುದು ರೈತರ ಮಾತಾಗಿದೆ.
ಹಿಂಗಾರಿ ಬಿತ್ತನೆ ಸಮಯಕ್ಕೆ ಸುರಿದ ಮಳೆಯಿಂದ ಶೇ.100 ರಷ್ಟು ಉತ್ತಮ ಫಸಲು ಬರುವುದು ಈ ವರ್ಷದ ಹಿಂಗಾರಿನಲ್ಲಿ ಕಷ್ಟಸಾಧ್ಯ. ದೀಪಾವಳ ಹಬ್ಬದ ನಂತರ ಬಿತ್ತನೆಯಲ್ಲಿ ತೊಡಗಿಕೊಂಡರೆ, ಫಸಲು ವಿಳಂಬವಾಗಿ ಬರಲಿದೆ. ಮಳೆರಾಯ ಕೊಂಚ ವಿರಾಮ ನೀಡಿದರೆ, ರೈತರು ಹೊಲ ಹದಗೊಳಿಸಿ, ಭೂತಾಯಿಯ ಒಡಲಿಗೆ ಬೀಜ ಅರ್ಪಣೆ ಮಾಡುತ್ತಾರೆ. ಇದಕ್ಕೆ ಮಳೆರಾಯ ಕುರುಣೆ ತೋರಬೇಕಿದೆ.
-ಡಿ.ಜಿ. ಮೋಮಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ