ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಆಯ್ಕೆ
19 ಕ್ಷೇತ್ರಗಳ ಪೈಕಿ ಕಾಂಗ್ರೆಸ್ನ 11, ಬಿಜೆಪಿಯ 5 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿ
Team Udayavani, Jun 20, 2020, 6:59 AM IST
ಗದಗ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇನ್ನುಳಿದ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ನೂತನ ಅಧ್ಯಕ್ಷರಾಗಿ ಕೊಣ್ಣೂರು ಕ್ಷೇತ್ರದ ಕಾಂಗ್ರೆಸ್ ಸದಸ್ಯ ಹಾಗೂ ಯುವ ನಾಯಕ ರಾಜೂಗೌಡ ಸಂಕನಗೌಡ ಕೆಂಚನಗೌಡ್ರ ಅವಿರೋಧವಾಗಿ ಆಯ್ಕೆಯಾದರು.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಜರುಗಿತು. ಗದಗ ಜಿಪಂ ಅಧ್ಯಕ್ಷರಾಗಿದ್ದ ಸಿದ್ಧಲಿಂಗೇಶ್ವರ ಎಚ್. ಪಾಟೀಲ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದಸ್ಥಾನಕ್ಕೆ ರಾಜ್ಯ ಸರ್ಕಾರದ ಆದೇಶದಂತೆ ಇನ್ನುಳಿದ ಅವಧಿಗೆ ಚುನಾವಣೆ ನಡೆಸಲಾಯಿತು. ಜಿಪಂನ ಒಟ್ಟು 19 ಕ್ಷೇತ್ರಗಳ ಪೈಕಿ ಕಾಂಗ್ರೆಸ್ನ 11 ಹಾಗೂ ಬಿಜೆಪಿಯ ಐವರು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಒಟ್ಟು 11 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಆಡಳಿತಾರೂಢ ಪಕ್ಷದಿಂದ ಕೊಣ್ಣೂರು ಕ್ಷೇತ್ರದ ಕಾಂಗ್ರೆಸ್ ಸದಸ್ಯ ಹಾಗೂ ಯುವ ನಾಯಕ ರಾಜೂಗೌಡ ಸಂಕನಗೌಡ ಕೆಂಚನಗೌಡ್ರ ಅವರೊಬ್ಬರೇ ಉಮೇದುವಾರಿಕೆ ಸಲ್ಲಿಸಿದರು. ನಿಯಮಾನುಸಾರ ರಾಜೂಗೌಡ್ರ ಅವರ ನಾಮಪತ್ರ ಪರಿಶೀಲಿಸಿದ ಪ್ರಾದೇಶಿಕ ಆಯುಕ್ತರು, ನಾಮಪತ್ರ ಕ್ರಮಬದ್ಧವಾಗಿದೆ ಎಂದು ಘೋಷಿಸಿದರು.
ನಂತರ ಚುನಾವಣಾ ನಿಯಮಗಳ ಪ್ರಕಾರ ನಾಮಪತ್ರಹಿಂಪಡೆಯಲು ನೀಡದ್ದ ಸಮಯಾವಕಾಶ ಮುಗಿದಿದ್ದರಿಂದ ರಾಜೂಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿ, ಹೂಗುತ್ಛ ನೀಡಿ ಅಭಿನಂದಿಸಿದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ|ಆನಂದ್.ಕೆ, ಅಪರ ಜಿಲ್ಲಾಧಿಕಾರಿ ಸತೀಶ್ಕುಮಾರ್ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಪಂ ಉಪಕಾರ್ಯದರ್ಶಿ ಕಲ್ಲೇಶ, ಜಿಪಂ ಹಂಗಾಮಿ ಅಧ್ಯಕ್ಷೆ ಮಲ್ಲವ್ವ ಬಿಜ್ಜೂರು, ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಎಸ್.ಪಿ. ಬಳಿಗಾರ, ಸಿದ್ಧಲಿಂಗೇಶ್ವರ ಎಚ್.ಪಾಟೀಲ, ಸದಸ್ಯರಾದ ರೂಪಾ ಅಂಗಡಿ, ಮಂಜುಳಾ ಹುಲ್ಲಣ್ಣವರ, ಶೋಭಾ ಮೇಟಿ, ರೇಖಾ ತಿಮ್ಮರೆಡ್ಡಿ ಅಳವಂಡಿ, ಬಿಜೆಪಿ ಸದಸ್ಯರಾದ ಶಿವಕುಮಾರ ನೀಲಗುಂದ, ಪಡಿಯಪ್ಪ ಪೂಜಾರ, ರೇಣುಕಾ ಶಿವಪುತ್ರಪ್ಪ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಬೆಂಬಲಿಗರು ಹೂಗುಚ್ಛ ನೀಡಿ, ಶುಭ ಕೋರಿದರು.
ನೆರೆ ಪರಿಹಾರದ ಭರವಸೆ: ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೂಗೌಡ ಕೆಂಚನಗೌಡ್ರ, ಜಿಲ್ಲೆಯ ನೆರೆ ಪೀಡಿತ ನರಗುಂದ ಮತ್ತು ರೋಣ ತಾಲೂಕಿನ ನೆರೆ ಪೀಡಿತ ಗ್ರಾಮಗಳಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವುದು, ಗ್ರಾಮೀಣ ಜನರಿಗೆ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯ ಕಾರ್ಯಗಳಿಗೆ ಒತ್ತು ನೀಡಲಾಗುವುದು. ಈ ಹಿಂದೆ ಸಿದ್ದು ಪಾಟೀಲ ಅವರು ಅಧ್ಯಕ್ಷರಾಗಿದ್ದಾಗ ನೆರೆ ಪೀಡಿತ ಗ್ರಾಮಗಳ ಜನರ ಆಸ್ತಿ ಹಾಗೂ ಕುಡಿಯುವ ನೀರಿನ ಕರವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸರಕಾರಕ್ಕೆ ಜಿಪಂ ಠರಾವು ಸಲ್ಲಿಸಲಾಗಿತ್ತು. ಈ ಬಗ್ಗೆ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಈ ಕುರಿತು ಮರು ಪರಿಶೀಲಿಸಿ, ಸರಕಾರದ ಮೇಲೆ ಒತ್ತಡ ತರುವ ಕೆಲಸ ಮಾಡವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ