ರಂಜಾನ್ ಪ್ರಾರ್ಥನೆ ಮನೆಯಲ್ಲೇ ನೆರವೇರಿಸಿ
Team Udayavani, Apr 23, 2020, 5:09 PM IST
ಸಾಂದರ್ಭಿಕ ಚಿತ್ರ
ಗಜೇಂದ್ರಗಡ: ರಂಜಾನ್ ತಿಂಗಳ ಉಪವಾಸ ವ್ರತಾಚರಣೆಯನ್ನು ಮನೆಯಲ್ಲಿಯೇ ಕೈಗೊಳ್ಳುವ ಮೂಲಕ ಕೋವಿಡ್ 19 ವೈರಸ್ ತಡೆಯಲು ಪ್ರಾರ್ಥಿಸಿ ಎಂದು ಠಾಣೆ ಪಿಎಸ್ಐ ಗುರುಶಾಂತ್ ದಾಶ್ಯಾಳ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮನುಕುಲವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೋವಿಡ್ 19 ತಡೆಗಟ್ಟಲು ಸಾಮಾಜಿಕ ಅಂತರವೇ ರಹದಾರಿಯಾಗಿದೆ.
ಹೀಗಾಗಿ ಮುಸ್ಲಿಂ ಸಮುದಾಯದವರ ಪವಿತ್ರ ಆಚರಣೆಗಳಲ್ಲಿ ಒಂದಾಗಿರುವ ರಂಜಾನ್ ತಿಂಗಳ ವಿಶೇಷ ನಮಾಜ್ ಮನೆಯಲ್ಲಿಯೇ ನೆರವೇರಿಸಬೇಕು. ಇಫ್ತಾರ್ ಕೂಟವನ್ನು ಏರ್ಪಡಿಸುವ ಬದಲು ನಿರ್ಗತಿಕರ ಹಸಿವು ನೀಗಿಸಲು ಮುಂದಾಗಿ ಎಂದು ಸಲಹೆ ನೀಡಿದ ಅವರು, ಸರ್ಕಾರಗಳ ಆದೇಶವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಎ.ಡಿ. ಕೋಲಕಾರ ಮಾತನಾಡಿ, ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ಮುಸ್ಲಿಂ ಸಮುದಾಯ ಬದ್ದವಾಗಿದೆ. ಈಗಾಗಲೇ ಲಾಕ್ಡೌನ್ ಜಾರಿಯಾದಾಗಿನಿಂದ ಮಸೀದಿಯಲ್ಲಿ ನಮಾಜ್ ಕೈ ಬಿಡಲಾಗಿದೆ. ವಿಶೇಷ ಪ್ರಾರ್ಥನೆಗಳನ್ನು ಮನೆಯಲ್ಲಿಯೇ ನಿರ್ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪಟ್ಟಣದ ಎಲ್ಲ ಮಸೀದಿಗಳಿಗೆ ಈಗಾಗಲೇ ಕಮೀಟಿಯಿಂದ ಮಾಹಿತಿ ಕಳುಹಿಸಲಾಗಿದ್ದು, ಕಾನೂನು ಪಾಲನೆಗೆ ಎಲ್ಲರೂ ಬದ್ಧರಾಗಿದ್ದೇವೆ ಎಂದರು.
ಎಂ.ಎಸ್. ಜಾಲಿಹಾಳ, ಮಾಸುಮಲಿ ಮದಗಾರ, ರಾಜು ಸಾಂಗ್ಲಿಕಾರ, ಹಸನ ತಟಗಾರ, ದಾದು ಹಣಗಿ, ಭೀಮಣ್ಣ ಇಂಗಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ