ಮನೆಯಲ್ಲೇ ರಂಜಾನ್ ಹಬ್ಬ ಆಚರಣೆ
ಕುಟುಂಬ ಸಮೇತರಾಗಿ ವಿಶೇಷ ಪ್ರಾರ್ಥನೆ! ಕೊರೊನಾ ಆಪತ್ತು ನಿವಾರಿಸಲು ಅಲ್ಲಾಹನಲ್ಲಿ ಕೋರಿಕೆ
Team Udayavani, May 15, 2021, 8:59 PM IST
ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಕರ್ಫ್ಯೂ ಜಾರಿಗೊಳಿಸಿದ್ದರಿಂದ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ಮುಸ್ಲಿಂ ಬಾಂಧವರು ಮನೆಯಲ್ಲೇ ಸರಳ ಮತ್ತು ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದರು.
ರಂಜಾನ್ ಮಾಸಾದ್ಯಂತ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು ಶುಕ್ರವಾರ ಮನೆಯಲ್ಲೇ ಕುಟುಂಬ ಸಮೇತರಾಗಿ ಶ್ರದ್ಧಾ-ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕಳೆದೊಂದು ವರ್ಷದಿಂದ ದೇಶಾದ್ಯಂತ ಕೊರೊನಾ ಪಿಡುಗು ಆವರಿಸಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಆಪತ್ತು ನಿವಾರಿಸಿ, ಸಕಲ ಜೀವ ರಾಶಿಗಳಿಗೂ ಲೇಸು ಮಾಡಲಿ ಎಂದು ಅಲ್ಲಾಹನಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ನೆರೆಹೊರೆಯರು ಹಾಗೂ ಸ್ನೇಹಿತರನ್ನು ಭೇಟಿ ಮಾಡಿ ಹಬ್ಬದ ಶುಭ ಕೋರಿದರು.
ಸಾಮಾನ್ಯವಾಗಿ ಹಬ್ಬದ ಶುಭ ಕೋರಲು ಪರಸ್ಪರ ಆಲಂಗಿಸಿಕೊಳ್ಳುವ ಬದಲಾಗಿ, ದೂರದಿಂದಲೇ “ಅಸಲಾಂ ವಾಲೇಖುಂ- ವಾಲೇಖುಂ ಸಲಾಂ, ಈದ್ ಮುಬಾರಕ್’ ಎನ್ನುವ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿತ್ತು. ಮನೆ ಮಂದಿಯಲ್ಲಿ ಒಟ್ಟುಗೆ ಕುಳಿತು, ಹಬ್ಬಕ್ಕೆ ತಯಾರಿಸಿದ ಸುರುಕುಂಬ, ಬಿರಿಯಾನಿ ಹಾಗೂ ಮಾಂಸದೂಟ ಸವಿದರು.
ಹಬ್ಬದ ನಿಮಿತ್ತ ಮುಸ್ಲಿಂ ಸಮಾಜದ ಕೆಲ ನಾಯಕರು ಹಬ್ಬದ ಖರ್ಚು- ವೆಚ್ಚಗಳಿಗಾಗಿ ಕೂಡಿಟ್ಟಿದ್ದ ಹಣದಲ್ಲಿ ಬಡವರಿಗೆ ಆಹಾರ ಸಾಮಗ್ರಿ ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿ, ಮಾನವೀಯತೆ ಸಾರಿದರು. ರಂಜಾನ್ ಹಬ್ಬದ ನಿಮಿತ್ತ ಪ್ರತೀ ವರ್ಷ ನಗರದ ವಿವಿಧ ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ, ಕಳೆದ ಬಾರಿಯಂತೆ ಈ ಬಾರಿಯೂ ಲಾಕ್ಡೌನ್ ಜಾರಿಗಿದ್ದರಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲದಂತಾಯಿತು.
ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ನಿರ್ಬಂಧಿ ಸಿದ್ದರಿಂದ ಇಲ್ಲಿನ ಡಂಬಳ ನಾಕಾ, ಮುಳಗುಂದ ನಾಕಾ ಸಮೀಪದ ಶಾಹಿ ಈದ್ಗಾ ಮೈದಾನ, ಬೆಟಗೇರಿಯ ರೈಲ್ವೆ ನಿಲ್ದಾಣ ಸಮೀಪದ ಈದ್ಗಾ ಮೈದಾನಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ರಂಜಾನ್ ಹಬ್ಬದ ವಿಶೇಷವಾಗಿ ತರಹೇವಾರಿ ಮಾಂಸ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಹೀಗಾಗಿ, ಇಲ್ಲಿನ ಜವಳಿ ಗಲ್ಲಿ, ಮಾಬುಸೂಬಾನ್ ಕಟ್ಟಿ, ಬೆಟಗೇರಿ ಭಾಗದ ಮಾಂಸ ಮಾರಾಟ ಅಂಗಡಿಗಳಲ್ಲಿ ಮಾಂಸ ಮಾರಾಟ ಜೋರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ