ದರ ಕುಸಿತ: ಕಂಗಾಲಾದ ರೈತ


Team Udayavani, Mar 17, 2020, 5:07 PM IST

gadaga-tdy-1

ಮುಳಗುಂದ: ಮಧ್ಯ ಹಾಗೂ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆ ಗೋವಿನಜೋಳದ ದರವು ಹಲವು ಕಾರಣಗಳಿಂದ ತೀವ್ರ ಕುಸಿತ ಕಂಡಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಮಾರ್ಚ್‌ ಮೊದಲ ವಾರದಲ್ಲಿ 2000 ರೂ.ಗಳಷ್ಟಿದ್ದ ದರ ಈಗ ಹಂತ ಹಂತವಾಗಿ ಕುಸಿದಿದ್ದರಿಂದ ಬೆಳೆಗಾರರಿಗೆ ದಿಕ್ಕು ತೋಚದಂತಾಗಿದೆ.

ಉತ್ತಮ ದರ ಹಾಗೂ ಬೇಸಾಯಕ್ಕೂ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ಗೋವಿನಜೋಳ ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರು ಬೆಳೆಯುತ್ತಿರುವುದರಿಂದ ಇದೊಂದು ವಾಣಿಜ್ಯಬೆಳೆಯಾಗಿದ್ದು, ಯುಗಾದಿ ಸಂದರ್ಭದಲ್ಲಿ ಒಕ್ಕಣೆ ಪ್ರಾರಂಭ ಮಾಡುವ ಈ ಹಂತದಲ್ಲಿ ದರ ಕುಸಿತವಾಗಿದೆ. ಹೀಗಾಗಿ ರೈತರು ಮಾಡಿದ ಖರ್ಚು ಬಾರದಂತಾಗಿದೆ.

ಹಾವೇರಿ, ಗದಗ ಹಾಗೂ ಇತರೆ ಜಿಲ್ಲೆಗಳಲ್ಲಿ ಯುಗಾದಿ ಪಾಡ್ಯದಂದು ರಾಶಿ ಪೂಜೆ ಮಾಡುವ ಪದ್ಧತಿಯಿದ್ದು, ಈ ಕಾರಣಕ್ಕಾಗಿಯೇ ಒಕ್ಕಣೆ ಮಾಡುವ ತಯಾರಿಯಲ್ಲಿದ್ದ ರೈತರಿಗೆ ಇತ್ತ ಮಾರಲಿಕ್ಕೂ ಆಗದೆ ಸಂಗ್ರಹಣೆ ಮಾಡಲಿಕ್ಕೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಸುಗ್ಗಿ ಸಂಭ್ರಮಕ್ಕೆ ಮಂಕು ಬಂದಂತಾಗಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 1850 ರೂ.ಗಳ ಬೆಲೆ ಘೋಷಣೆ ಮಾಡಿದ್ದರು. ಇದುವರೆಗೂ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡದಿರುವುದು ರೈತರ ಅಕ್ರೋಶಕ್ಕೆ ಕಾರಣವಾಗಿದೆ. ರೈತರ ಮಾಲು ಕಟಾವು ಮಾಡುವ ಹಂತದಲ್ಲಿ ಬೆಂಬಲ ಬೆಲೆ ಕೇಂದ್ರ ಸ್ಥಾಪನೆ ಮಾಡದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಂತಾಗಿದೆ. 2000 ರೂ.ಗಳಿದ್ದ ಬೆಲೆ ಈಗ ಕೊರೊನಾ, ರೋಗಬಾಧೆ ಸೇರಿದಂತೆ ಹಲವು ಕಾರಣಗಳಿಗಾಗಿ 1200 ರೂ.ಗಳಿಗೆ ಇಳಿದಿದ್ದು, ಮಾರುಕಟ್ಟೆಯಲ್ಲಿ ಖರೀದಿದಾರರು ಟೆಂಡರ್‌ ಹಾಕಲು ಹಿಂದೆ ಮುಂದೆ ನೋಡುವಂತಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ಕಾಟಾಚರಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದರೆ ಸಾಲದು. ರೈತರು ಬೆಳೆ ಖರೀದಿಸಲು ಶೀಘ್ರವೆ ಕಾರ್ಯಪ್ರವೃತ್ತರಾಗಬೇಕು ಎನ್ನುವುದು ರೈತರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.