ಅಫ್ಘಾನಿಸ್ತಾನದಿಂದ ತವರಿಗೆ ಮರಳಿದ ಗದಗ ಮೂಲದ ಯೋಧ

ಕಾಬೂಲ್‌ ಭಾರತೀಯ ರಾಯಭಾರ ಕಚೇರಿಯಲ್ಲಿ ಭದ್ರತಾ ಪಡೆ ಕಮಾಂಡೆಂಟ್‌ ಆಗಿದ್ದ ಯೋಧ ರವಿ 

Team Udayavani, Aug 22, 2021, 3:26 PM IST

fdsfewew

ಗದಗ: ಅಫ್ಘಾನಿಸ್ತಾನದ ನರರಾಕ್ಷರ ಮಧ್ಯೆ ಸಿಲುಕಿದ್ದ ಜಿಲ್ಲೆಯ ವೀರಯೋಧರೊಬ್ಬರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಯೋಧನ ಮರಳುವಿಕೆಯಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ತಾಲೂಕಿನ ಬಳಗಾನೂರು ಗ್ರಾಮದ ವೀರಯೋಧ ರವಿ ನೀಲಗಾರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಐಟಿಬಿಪಿ(ಇಂಡೋ-ತಿಬೆಟ್‌ ಗಡಿ ಭದ್ರತಾ ಪಡೆ)ಯಲ್ಲಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 2 ವರ್ಷಗಳಿಂದ ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭದ್ರತಾ ಪಡೆಯ ಕಮಾಂಡೆಂಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಒಟ್ಟು 24 ತಿಂಗಳ ಅವಧಿಗೆ ಕಾಬೂಲ್‌ಗೆ ನಿಯೋಜನೆಗೊಂಡಿದ್ದರು. ಈ ನಡುವೆ ಅಫ್ಘಾನಿಸ್ತಾನವನ್ನು ತಾಲಿಬಾನ್‌ ಉಗ್ರರು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ಕಳೆದ ಆ.16 ರಂದು ಭಾರತೀಯ ಸೇನೆ ಮತ್ತು ಭಾರತ ಸರಕಾರ ನಡೆಸಿದ ರಕ್ಷಣಾ ಕಾರ್ಯದಿಂದಾಗಿ ಕಮಾಂಡರ್‌ ರವಿ ನೀಲಗಾರ ಪ್ರಾಣಾಪಾಯದಿಂದ ಬಚಾವ್‌ ಆಗಿದ್ದು, ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ವೀರಯೋಧ ರವಿ ನೀಲಗಾರ, ಒಟ್ಟು 24 ತಿಂಗಳ ಅವಧಿಗೆ ಕಾಬೂನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ತಮ್ಮನ್ನು ನಿಯೋಜಿಸಲಾಗಿತ್ತು. ಆಗಸ್ಟ್‌ ಎರಡನೇ ವಾರದವರೆಗೂ ಎಲ್ಲವೂ ಸುಸ್ಥಿತಿಯಲ್ಲೇ ನಡೆಯುತ್ತಿತ್ತು. ಕಾಬೂನ್‌ನಲ್ಲಿ ನನ್ನ ಸೇವೆ ಪೂರ್ಣಗೊಳ್ಳಲು ಇನ್ನೂ ಒಂದು ತಿಂಗಳು ಬಾಕಿಯಿತ್ತು. ಅಷ್ಟರಲ್ಲಾಗಲೇ ತಾಲಿಬಾನಿಗಳು ದಾಳಿ ನಡೆಸಿದರು. ಹೀಗಾಗಿ, ಆ. 16ರಂದು ಭಾರತ ಸರಕಾರ ಕಾಬೂಲ್‌ ರಾಯಭಾರ ಕಚೇರಿಯಲ್ಲಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದೆ. ಅದರಲ್ಲಿ ನಾನೂ ಒಬ್ಬ. ಸದ್ಯ ದೆಹಲಿಯಲ್ಲಿ 15 ದಿನಗಳ ಕಾಲ ಕೋವಿಡ್‌ ಕ್ವಾರಂಟೈನ್‌ ನಲ್ಲಿ ಇರಿಸಲಾಗಿದೆ. ಆರೋಗ್ಯದಲ್ಲೂ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಉಪಟಳ, ಹಿಂಸೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಬೂಲ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿ ಮೂವರು ಕನ್ನಡಿಗರು ಇದ್ದೆವು. ಬಾಗಲಕೋಟೆಯ ಮಂಜುನಾಥ ಮಾಲಿ ಮತ್ತು ಬೆಳಗಾವಿಯ ನಸೀಮುಲ್ಲಾ ಎಂಬುವವರಿದ್ದೆವು. ಆ.15 ರಂದು ಅಲ್ಲಿನ ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸಿತು. ಆನಂತರ ಆ.16 ರಂದು ಭಾರತ ಸರಕಾರ ಮತ್ತು ಸೇನೆ ನಡೆಸಿದ ಏರ್‌ಲಿಫ್ಟ್‌ನಿಂದಾಗಿ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ ಎಂದರು.

ಭದ್ರತಾ ದೃಷ್ಟಿಯಿಂದ ಸೇನಾ ಕಾರ್ಯಾಚರಣೆ ಹಾಗೂ ಅದಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದ ಅವರು, ತಾಲಿಬಾನಿಗಳು ಅಲ್ಲಿ ನಡೆಸುತ್ತಿರುವ ಹಿಂಸಾಚಾರ, ಕ್ರೌರ್ಯದ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ನಮ್ಮ ಪರಿಸ್ಥಿತಿಯೂ ಅದಕ್ಕಿಂತ ಭಿನ್ನವಾಗಿರಲಿಲ್ಲ ಎನ್ನುವ ಮೂಲಕ ಸೂಕ್ಷ್ಮವಾಗಿ ತಮ್ಮ ನೋವು ಹೊರಹಾಕಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.