ಕಲಿಕಾಮಟ್ಟ ಹೆಚ್ಚಿಸಲು ‘ಓದು ಕರ್ನಾಟಕ’ ಕಾರ್ಯಕ್ರಮ
Team Udayavani, Aug 14, 2019, 1:04 PM IST
ಗಜೇಂದ್ರಗಡ: ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ 'ಓದು ಕರ್ನಾಟಕ' ಕಾರ್ಯಕ್ರಮ ನಡೆಯಿತು.
ಗಜೇಂದ್ರಗಡ: ಪಟ್ಟಣದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ‘ಓದು ಕರ್ನಾಟಕ’ ಕಾರ್ಯಕ್ರಮ ನಡೆಯಿತು.
ಈ ವೇಳೆ ಸಿಆರ್ಪಿ ಎ.ಬಿ. ವಣಗೇರಿ ಮಾತನಾಡಿ, ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಲಿಕಾಮಟ್ಟ ಉತ್ತಮಗೊಳಿಸಲು ಓದು ಕರ್ನಾಟಕ ಕಾರ್ಯಕ್ರಮ ಶಿಕ್ಷಣ ಇಲಾಖೆ ಅನುಷ್ಠಾನಕ್ಕೆ ತಂದಿದೆ. 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಸರಳ ಗಣಿತ, ಉರ್ದು ಪರಿಸರ ವಿಷಯ ಪ್ರತ್ಯೇಕ ಪುಸ್ತಕಗಳಿಂದ 60 ದಿನದವರೆಗೆ ತರಬೇತಿ ನೀಡಲಾಗುವುದು. ಕಾಗುಣಿತ, ಒತ್ತಕ್ಷರ, ಪದ, ವಾಕ್ಯ ರಚನೆ, ಕಥೆ ಓದುವಿಕೆ ವಿಭಾಗಗಳನ್ನು ಒಳಗೊಂಡಿದೆ. ಕಲಿಕಾ ಮಟ್ಟ ಗುರುತಿಸಿ ಬೋಧನೆ, ಪ್ರತ್ಯೇಕ ವಿದ್ಯಾರ್ಥಿಗಳ ಗುಂಪು ರಚಿಸಿ ಬೋಧನೆ ಮಾಡಲಾಗುವುದು. ಅಂಕಿ ಪರಿಚಯ, ಗಣಿತದ ಮೂಲ ಕ್ರಿಯೆಗಳು ಹೀಗೆ ಮಕ್ಕಳಿಗೆ ಸರಳವಾಗಿ ಮನ ಮುಟ್ಟುವ ರೀತಿಯಲ್ಲಿ ಮಕ್ಕಳಿಗೆ ಬೋಧನೆ ಮಾಡಲಾಗುವುದು. ಇದಕ್ಕಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದರು.
ಮುಖ್ಯ ಶಿಕ್ಷಕ ಎ.ಎನ್. ರೋಣದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಕಾರಣಗಳಿಂದಾಗಿ ಕೆಲ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಬಿದ್ದಿರುತ್ತಾರೆ. ಅವರಿಗೆ ವಿಷಯ ಮನದಟ್ಟು ಮಾಡಿಸಿ, ಕಲಿಕಾ ಅಂತರ ನಿವಾರಿಸಿ ಓದಿನೆಡೆಗೆ ಪ್ರೋತ್ಸಾಹಿಸುವುದಕ್ಕಾಗಿಯೇ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮುನಶಾದಬೇಗಂ ನಿಶಾನದಾರ, ಜನ್ನತಜಹಾ ಕರಮುಡಿ, ಬಿ.ಟಿ. ಮೋಮಿನ್, ಜೆ.ಎ. ಮುಲ್ಲಾ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ