ಭರದಿಂದ ಸಾಗಿದೆ 52 ಮರಗಳ ಸ್ಥಳಾಂತರ ಕಾರ್ಯ

­ರಸ್ತೆ ಅಗಲೀಕರಣ ಹಿನ್ನೆಲೆ ಸ್ವತ್ಛಂದವಾಗಿ ಬೆಳೆದು ನಿಂತ ಮರಗಳಿಗೆ ಮರುಜೀವ ಕಲ್ಪಿಸಲು ಕ್ರಮ

Team Udayavani, Jul 11, 2021, 10:21 PM IST

10gjd1

ಗಜೇಂದ್ರಗಡ: ರಸ್ತೆ ಅಗಲೀಕರಣಕ್ಕೆ ಬಲಿಯಾಗುತ್ತಿದ್ದ ಸ್ವತ್ಛಂದವಾಗಿ ಬೆಳೆದು ನಿಂತಿದ್ದ 52 ಮರಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯ ಪಟ್ಟಣದಲ್ಲಿ ಭರದಿಂದ ಸಾಗಿದೆ.

ರಾಮಾಪೂರದಿಂದ ಗಜೇಂದ್ರಗಡ ಮಾರ್ಗವಾಗಿ ಕಾತ್ರಾಳ ಕ್ರಾಸ್‌ ವರೆಗಿನ ರಾಷ್ಟ್ರೀಯ ಹೆದ್ದಾರಿ 367ರ ಕಾಮಗಾರಿ ಈಗಾಗಲೇ ಪಟ್ಟಣದಲ್ಲಿ ಭರದಿಂದ ಸಾಗಿದೆ. ಹೆದ್ದಾರಿ ಪ್ರಾಧಿಕಾರ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಆದರೆ, ಸುಂದರವಾಗಿ ಬೆಳೆದು ನಿಂತ ಮರಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸ್ಥಳೀಯ ಶಾಸಕರ ಸಹಕಾರದಿಂದ ಅರಣ್ಯ ಇಲಾಖೆ ಮರಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಮರಗಳಿಗೆ ಮರುಜೀವ ತುಂಬುವ ಕಾರ್ಯ ಭರದಿಂದ ನಡೆದಿದೆ. ನಗರೀಕರಣದಿಂದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿದ್ದು, ಪರಿಸರ ರಕ್ಷಣೆಯ ಹಂಬಲದಿಂದ ಜನಪ್ರತಿನಿಧಿಗಳು ಮರಗಳನ್ನು ಸ್ಥಳಾಂತರಿಸಿ ಜೀವ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ.

ವಿದೇಶಗಳಲ್ಲಿ ಮರಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸ್ಥಳಾಂತರಿಸಿರುವ ನಿದರ್ಶನಗಳನ್ನು ಪ್ರೇರಣೆಯಾಗಿಸಿಕೊಂಡು ಮರಗಳ ಸ್ಥಳಾಂತರ ಮಾಡುವ ಉಪಾಯ ಕಂಡುಕೊಂಡಿದ್ದಾರೆ. ಸಮೀಪದ ರಾಮಾಪೂರ ಗ್ರಾಮದ ರಸ್ತೆ ಮಧ್ಯೆದಲ್ಲಿನ 20 ರಿಂದ 25 ವರ್ಷಗಳ 52 ಅರಳಿ ಮರ, ಹತ್ತಿ ಮರ, ಆಲದ ಮರಗಳನ್ನು ಸ್ಥಳಾಂತರಿಸಲು ಅರಣ್ಯ ಇಲಾಖೆ ನಿರ್ಧಸಿದೆ. ಈಗಾಗಲೇ ಮರಗಳ ಸ್ಥಳಾಂತರಕ್ಕೆ ಪಟ್ಟಣದ ಗುಡ್ಡಕ್ಕೆ ಹೊಂದಿಕೊಂಡಿರುವ ಇಂಗು ಕೆರೆಯಲ್ಲಿ ಗುಂಡಿಗಳನ್ನು ಸಹ ತೆಗೆಯಲಾಗಿದ್ದು, ಮರಗಳ ಬೇರು ಬಾಡದಂತೆ ರಾಸಾಯನಿಕ ನಿಂಪಡಿಸಲಾಗಿದೆ. ಗದಗ ಜಿಲ್ಲೆ ಹೊರತುಪಡಿಸಿದರೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮರಗಳ ಸ್ಥಳಾಂತರ ಕಾರ್ಯ ಗಜೇಂದ್ರಗಡದಲ್ಲಿಯೇ ನಡೆಯುತ್ತಿರುವುದು ಪರಿಸರ ಪ್ರೇಮಿಗಳ ಸಂತಸಕ್ಕೆ ಕಾರಣವಾಗಿದೆ.

ಮರ ಸ್ಥಳಾಂತರ ವಿಧಾನ: ರಾಮಾಪೂರ ಗ್ರಾಮದ ಬಳಿಯ ಮರದ ಸುತ್ತಳತೆಯ ಎರಡು ಪಟ್ಟು ಆಳದ ಗುಂಡಿ ತೆಗೆದು, ತಾಯಿ ಬೇರಿಗೆ ಹಾನಿಯಾಗದಂತೆ ಮಣ್ಣು ಸಮೇತ ಬೇರಿಗೆ ಹಾಗೂ ಮರಕ್ಕೆ ಔಷ ಧ ಹಾಕಲಾಗಿದೆ. ಮಣ್ಣು ಬೀಳದಂತೆ ಗೋಣಿ ಚೀಲದಿಂದ ಭದ್ರಪಡಿಸಿ, ಮರ ನೆಡುವ ಕಡೆಗೆ ಮರದ ಸುತ್ತಳತೆಗೆ ಮೂರು ಪಟ್ಟು ಮೀರಿ ಆಳ ತೆಗೆದು ಮರಳು ಮತ್ತು ಎನ್‌ಜಿನ್ಸ್‌ ಎಂಬ ಔಷಧ ಹಾಕಿ ನೆಡಲಾಗಿದೆ. ಮರ ನೆಟ್ಟ ಎರಡು ತಿಂಗಳೊಳಗೆ ಚಿಗುರೊಡೆಯಲಿದೆ ಎಂಬುದು ಅರಣ್ಯ ಇಲಾಖೆ ಅಧಿ ಕಾರಿಗಳ ಮಾತಾಗಿದೆ.

ಪರಿಸರ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ರಸ್ತೆ ಅಗಲೀಕರಣಕ್ಕೆ ಬಲಿಯಾಗುವ ಮರಗಳನ್ನು ಸ್ಥಳಾಂತರಿಸಲು ಸರಕಾರ ಅರಣ್ಯ ಇಲಾಖೆಯಲ್ಲಿ ಪ್ರತ್ಯೇಕ ಘಟಕ ತೆರೆದು ಹಣ ಮೀಸಲಿಡಬೇಕು. ಮರಗಳ ಸ್ಥಳಾಂತರಕ್ಕೆ ತಗಲುವ ವೆಚ್ಚ ದೊಡ್ಡದಲ್ಲ. ಬದಲಾಗಿ ಮರಗಳ ಮೌಲ್ಯವೇ ಮುಖ್ಯವಾಗಿದೆ. ಮರಗಳಿಗೆ ಸೋಂಕು ತಗಲದಂತೆ ಔಷಧ ಲೇಪನ ಮಾಡಬೇಕು. ಸ್ಥಳಾಂತರವಾಗುವ ಎಲ್ಲ ಮರಗಳು ಸಹ ಸುರಕ್ಷಿತವಾಗಿ, ಆರೋಗ್ಯಯುತವಾಗಿ ಸಮೃದ್ಧಗೊಳ್ಳುವಂತೆ ನೋಡಿಕೊಳ್ಳಬೇಕು ಎಂಬುದು ಪರಿಸರ ಪ್ರೇಮಿಗಳ ಒತ್ತಾಸೆಯಾಗಿದೆ.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.