ಮನೆ ನೀಡಲು ಆಗ್ರಹಿಸಿ ವಕಾರ ಸಾಲು ನಿವಾಸಿಗಳ ಪ್ರತಿಭಟನೆ
Team Udayavani, Jul 16, 2019, 2:41 PM IST
ಗದಗ: ವಕಾರ ಸಾಲು ತೆರವಿನಿಂದ ಮನೆ ಕಳೆದುಕೊಂಡಿರುವ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗದಗ: ಇಲ್ಲಿನ ವಕಾರ ಸಾಲಿನಲ್ಲಿ ವಾಸವಿದ್ದ ಬಡ ಹಾಗೂ ವಸತಿ ರಹಿತರಿಗೆ ಮನೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಕಳೆದ ಹಲವು ವರ್ಷಗಳಿಂದ ವಕಾರಸಾಲಿನ ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಸ್ವಂತ ಜಾಗೆ ಹಾಗೂ ಸ್ವಂತ ಮನೆ ಹೊಂದಿಲ್ಲ. ಆದರೆ, ಇತ್ತೀಚೆಗೆ ನಗರಸಭೆ ಅಧಿಕಾರಿಗಳು ಏಕಾಏಕಿ ಜೆಸಿಬಿಗಳನ್ನು ನುಗ್ಗಿಸಿ, ವಕಾರ ಸಾಲು ತೆರವುಗೊಳಿಸಿದ್ದಾರೆ. ಇದರಿಂದ ಸ್ಥಳೀಯ ಬಡ ಜನರ ಬದುಕು ಬೀದಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಯಾವುದಾದರೊಂದು ಯೋಜನೆಯಡಿ ಮನೆ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಮನೆ ಇಲ್ಲದವರು ಸಂಬಂಧಿಸಿದ ಇಲಾಖೆಗಳ ಮೂಲಕ ಅರ್ಜಿ ಸಲ್ಲಿಸಿದರೆ, ಮನೆ ಒದಗಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ