ಮಾರುಕಟ್ಟೆಯಲ್ಲಿ ದಟ್ಟಣೆ ರಂಜಾನ್‌ ಹಬ್ಬಕ್ಕೆ ಖರೀದಿ ಜೋರು

•ಇರಾನ್‌-ಇರಾಕ್‌ನಿಂದ ಆಮದು ಮಾಡಿಕೊಳ್ಳಲಾದ ಅಜ್ವಾ ಖರ್ಜೂರ ಬೆಲೆ ಕೆಜಿಗೆ 1200 ರೂ.

Team Udayavani, Jun 3, 2019, 10:53 AM IST

gadaga-tdy-1..

ಗದಗ: ಸತತ ಬರಗಾಲದ ಮಧ್ಯೆಯೂ ಅವಳಿ ನಗರದ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಹಬ್ಬ ಆಚರಣೆಗೆ ಭರದಿಂದ ಸಿದ್ಧತೆ ನಡೆಸಿದ್ದಾರೆ. ಹಬ್ಬಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದು, ಮಾರುಕಟ್ಟೆ ಕಳೆಗಟ್ಟುತ್ತಿದೆ.

ರಂಜಾನ್‌ ಹಬ್ಬದ ಅಂಗವಾಗಿ ಅವಳಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಹಬ್ಬದ ಸಾಮಗ್ರಿ ವ್ಯಾಪಾರ ಜೋರಾಗಿದೆ. ಹಬ್ಬದ ಸಂಭ್ರಮಕ್ಕಾಗಿ ಮುಸ್ಲಿಂರು ಅಗತ್ಯ ಸಾಮಗ್ರಿ ಖರೀದಿಸುವಲ್ಲಿ ಮಗ್ನರಾಗಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ ಸಂಜೆಯಾಗುತ್ತಿದ್ದಂತೆ ತಂಡೋಪ ತಂಡವಾಗಿ ಮಹಿಳೆಯರು ಮಾರುಕಟ್ಟೆಯತ್ತ ಹೆಜ್ಜೆ ಹಾಕುತ್ತಿದ್ದು, ಸಹಜವಾಗಿಯೇ ಜನದಟ್ಟಣೆ ಹೆಚ್ಚುತ್ತಿದೆ.

ನಗರದ ಬ್ಯಾಂಕ್‌ ರೋಡ್‌, ಟಾಂಗಾಕೂಟ, ಗ್ರೇನ್‌ ಮಾರ್ಕೆಟ್ ಮಾರ್ಗದಲ್ಲಿ ವರ್ತಕರು ತಳ್ಳುಗಾಡಿಗಳಲ್ಲೇ ವಿವಿಧ ಪದಾರ್ಥಗಳು ಹಾಗೂ ಬಟ್ಟೆಗಳ ಮಾರಾಟ ಆರಂಭಿಸಿದ್ದಾರೆ. ರಂಜಾನ್‌ ಹಬ್ಬದ ವಿಶೇಷ ಸಿಹಿ ಖಾದ್ಯವಾದ ಸುರಕುಂಬಾ ತಯಾರಿಕೆಗೆ ಅತ್ಯವಶ್ಯವಾದ ಗೋಡಂಬಿ, ದ್ರಾಕ್ಷಿ, ಶಾವಿಗೆ, ಉತ್ತತ್ತಿ ಸೇರಿದಂತೆ ವಿವಿಧ ಡ್ರೈಫುಟ್ಸ್‌ಗಳು ಮತ್ತು ಬಿರಿಯಾನಿ, ವಿಶೇಷ ಮಾಂಸಹಾರಕ್ಕಾಗಿ ಬೇಕಾದ ಮಸಾಲೆ ಸಾಮಾನುಗಳು ಮತ್ತು ಮದರಂಗಿಗೆ ಜನರು ಮುಗಿಬೀಳುತ್ತಿದ್ದಾರೆ.

ಹಬ್ಬದ ನಿಮಿತ್ತ ಇರಾನ್‌ ಹಾಗೂ ಇರಾಕ್‌ನಿಂದ ಆಮದು ಮಾಡಿಕೊಳ್ಳಲಾದ ಅಜ್ವಾ ಖರ್ಜೂರ್‌ ಕೆಜಿ 1200 ರೂ. ಗಡಿ ದಾಟಿದ್ದರಿಂದ ಜನರು ತಮ್ಮ ಶಕ್ತಾನುಸಾರ ಖರೀದಿಸುತ್ತಿದ್ದಾರೆ. ಇನ್ನುಳಿದಂತೆ ಬಟ್ಟೆ, ಬಳೆ, ವಿವಿಧ ಅಲಂಕಾರಿಕ ವಸ್ತುಗಳು, ದಿನಬಳಕೆ ವಸ್ತುಗಳ ಖರೀದಿಯೂ ಭರಾಟೆಯಿಂದ ಕೂಡಿತ್ತು.

ಆದರೆ, ಸತತ ಬರಗಾಲ ಆವರಿಸಿದ್ದರಿಂದ ಕಳೆದ ಬಾರಿಗಿಂತ ಈ ಬಾರಿ ಮತ್ತಷ್ಟು ಕಳೆಗುಂದಿದೆ. ಒಂದು ಕೆಜಿ ಸಾಮಗ್ರಿ ಖರೀದಿಸುವವರು ಅರ್ಧ ಕೆಜಿಗೆ ಸೀಮಿತಗೊಳ್ಳುತ್ತಿದ್ದಾರೆ. ಅದರೊಂದಿಗೆ ವಿವಿಧ ಡ್ರೈಫುಟ್ಸ್‌ಗಳು ಕಳೆದ ವರ್ಷಕ್ಕಿಂತ ದುಪ್ಪಟ್ಟಾಗಿವೆ.

ಆದರೂ, ಹಬ್ಬದ ಮುನ್ನ ದಿನ ಹೆಚ್ಚಿನ ಪ್ರಮಾಣದಲ್ಲಿ ಮಾರಾಟಗೊಳ್ಳುವ ನಿರೀಕ್ಷೆಯಿದೆ ಎನ್ನುತ್ತಾರೆ ಡ್ರೈಫುಟ್ಸ್‌ ವ್ಯಾಪಾರಿ ರಿಯಾಜ್‌ ಅಹಮ್ಮದ್‌. ಆದರೆ, ಹಬ್ಬದ ನಿಮಿತ್ತ ಶ್ಯಾವಿಗೆ, ಬೆಲ್ಲ, ಸಕ್ಕರೆ, ಬಾಸುಮತಿ ಅಕ್ಕಿ ಸೇರಿದಂತೆ ಮಸಾಲೆ ಪದಾರ್ಥಗಳು ಹಾಗೂ ಬಟ್ಟೆ ಖರೀದಿ ಜೋರಾಗಿದೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.