ಜಿಲ್ಲೆಗೆ ಸಾಧನಾ ರಾಷ್ಟ್ರೀಯ ಪ್ರಶಸ್ತಿ
Team Udayavani, Jul 1, 2019, 1:35 PM IST
ನರಗುಂದ: ಸಾಧನಾ ರಾಷ್ಟ್ರೀಯ ಪ್ರಶಸ್ತಿ ಪೂರ್ವಭಾವಿ ಸಭೆಯಲ್ಲಿ ಸಾಧನಾ ಸಂಸ್ಥೆ ಜಿಲ್ಲಾಧ್ಯಕ್ಷ ಶಂಕರಗೌಡ ಹಾಲಗೌಡರ ಮಾತನಾಡಿದರು.
ನರಗುಂದ: ಸಾಮಾಜಿಕ ಕ್ರಾಂತಿ ಮತ್ತು ಮಹಿಳಾ ಸಮಾನತೆಗೆ ಅಭಿವ್ಯಕ್ತಗೊಳಿಸಿದ ಸಾಹಿತ್ಯವನ್ನು ಪ್ರಕಾಶಮಾನಗೊಳಿಸುವ ಜೊತೆಗೆ ಎಲೆಮರೆ ಕಾಯಿಯಂತೆ ಸಾಹಿತ್ಯ ಕೃಷಿ ಕೈಗೊಂಡ ಸಾಹಿತಿಗಳನ್ನು ಗುರುತಿಸಿ ಸಾಧನಾ ರಾಷ್ಟ್ರೀಯ ಸಾಹಿತಿ ಪ್ರಶಸ್ತಿಯನ್ನು ಈ ಬಾರಿ ಜಿಲ್ಲೆಗೆ ನೀಡಲಾಗುತ್ತಿದೆ ಎಂದು ಧಾರವಾಡ ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಮಾನವ ಹಕ್ಕುಗಳ ಕೇಂದ್ರ ಅಧ್ಯಕ್ಷೆ ಡಾ| ಇಸಬೆಲ್ಲಾ ಝೇವಿಯರ್ ತಿಳಿಸಿದರು.
ಸಂಸ್ಥೆಯಿಂದ ಪ್ರತಿ ವರ್ಷ ಕೊಡಮಾಡುವ ರಾಷ್ಟ್ರೀಯ ಪ್ರಶಸ್ತಿಯನ್ನು ಜಿಲ್ಲೆಯ ಸಾಹಿತಿಗೆ ನೀಡುವ ಉದ್ದೇಶದೊಂದಿಗೆ ನರಗುಂದದಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಕಾರ್ಯಕ್ರಮ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಧನೆಯನ್ನು ಒಳಗೊಂಡ ಪ್ರಶಸ್ತಿ ಪತ್ರ, ನಗದು ಮತ್ತು ವಿಶೇಷ ಅವಾರ್ಡ್ ಹೊಂದಿದ ಪ್ರಶಸ್ತಿಯನ್ನು ಕೊಡಮಾಡಲಾಗುತ್ತದೆ ಎಂದು ತಿಳಿಸಿದರು
ಸಾಧನಾ ಮಾನವ ಹಕ್ಕುಗಳ ಸಂಸ್ಥೆ ಜಿಲ್ಲಾಧ್ಯಕ್ಷ ಸಂಗನಗೌಡ ಹಾಲಗೌಡರ ಮಾತನಾಡಿ, ಸಂಸ್ಥೆಯಿಂದ ಕೊಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ಜಿಲ್ಲೆಗೆ ನೀಡುತ್ತಿರುವುದು ಸಂತಸದಾಯಕ. ಈ ಹಂತದಲ್ಲಿ ಜಿಲ್ಲೆಯಲ್ಲಿ ಎಲೆಮರೆಯ ಕಾಯಿಯಂತೆ ಸೇವೆಗೈದ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶ ಸಂಸ್ಥೆಯದ್ದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣದಲ್ಲಿ ಪ್ರಶಸ್ತಿ ಪ್ರದಾನ, ಜಿಲ್ಲಾಮಟ್ಟದ ಕಾರ್ಯಕ್ರಮದ ಸ್ಥಳ, ಪೂರ್ವಭಾವಿ ಸಿದ್ಧತೆ, ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿ ಬೆಳೆಸುವ ಹಾಗೂ ವಿವಿಧ ಕ್ಷೇತ್ರಗಳ ಪ್ರತಿಭಾವಂತರನ್ನು ಗೌರವಿಸುವ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.
ಕಸಾಪ ತಾಲೂಕಾಧ್ಯಕ್ಷ ಮೋಹನ ಕಲಹಾಳ, ಸಾಧನಾ ಸಂಸ್ಥೆ ನಿರ್ದೇಶಕಿ ಸೀಮಾ ಮುಧೋಳ, ಅಶೋಕ ಸುರೇಬಾನ, ಗುರುಶಾಂತ ದೊಡಮನಿ, ನ್ಯಾಯವಾದಿ ಎಂ.ಬಿ. ಕುಲಕರ್ಣಿ, ಶಂಕರ ಬೆಳವಟಗಿ, ಡಿ.ಎಚ್. ಅಜ್ಜಿ, ಪಿ.ಸಿ. ಕಲಹಾಳ, ಭೀಮಸಿ ಯಾವಗಲ್ಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ