ಮಠ ಮಾನ್ಯಗಳಿಂದ ಸದ್ಗತಿ: ಸಿದ್ಧರಾಮ ಶ್ರೀ
Team Udayavani, May 20, 2019, 12:47 PM IST
ಶಿರಹಟ್ಟಿ: ಸಮಾಜದ ಸ್ವಾಸ್ಥ್ಯ ಕಾಪಾಡಲು ಧರ್ಮ ಮತ್ತು ಮಠಮಾನ್ಯಗಳೇ ಕಾರಣವಾಗಿದ್ದು, ಸಮಾಜದ ಜನತೆ ಇದನ್ನೇ ನಂಬಿ ಮಠಗಳಿಗೆ ಗೌರವ ನೀಡುತ್ತಿವೆ. ಮಠಾಧಿಧೀಶರು ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಸಮಾಜದ ಜನತೆಯ ಸುಂದರ ಬದುಕಿಗಾಗಿ ಪ್ರೋತ್ಸಾಹಿಸುವಂತಾಗಬೇಕು ಎಂದು ಶಿರಹಟ್ಟಿ ಜ| ಫ| ಸಿದ್ಧರಾಮ ಸ್ವಾಮಿಗಳು ಹೇಳಿದರು.
ಶಿರಹಟ್ಟಿ ಜ| ಫಕ್ಕೀರೇಶ್ವರರ ಜಾತ್ರಾ ಮಹೋತ್ಸವ ನಂತರ ಜರುಗಿದ ಧರ್ಮ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಧರ್ಮ ಎಲ್ಲಿ ಜಾಗೃತವಾಗಿರುತ್ತದೆಯೋ ಅಲ್ಲಿ ನೆಮ್ಮದಿ ಇರುತ್ತದೆ. ಧರ್ಮದ ಮೂಲಕ ಜೀವನ ಸಾಕ್ಷರತೆ ಹೊಂದಲು ಸಾಧ್ಯವಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಧರ್ಮ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಧರ್ಮ ಹೆಚ್ಚಾದಲ್ಲಿ ಪ್ರಕೃತಿ ಮುನಿಸಿಕೊಳ್ಳುವುದಿಲ್ಲ ಎಂದರು.
ಧರ್ಮ ಸಭೆಯಲ್ಲಿ ಕುಂದಗೋಳದ ಕಲ್ಯಾಣಪುರಮಠದ ಬಸವಣ್ಣಜ್ಜನವರ ಶ್ರೀಗಳು ಹಾಗೂ ಬನ್ನಿಕೊಪ್ಪದ ಡಾ| ಸುಜ್ಞಾನದೇವ ಶಿವಾಚಾರ್ಯ ಮಾತನಾಡಿ, ಯಾವ ವ್ಯಕ್ತಿ ಯಾವ ರೀತಿ ನಡೆದುಕೊಳ್ಳುತ್ತಾನೆಯೋ ಅದೇ ರೀತಿಯಲ್ಲಿ ಪಡೆದುಕೊಳ್ಳುತ್ತಾನೆ. ಅಧರ್ಮದಲ್ಲಿ ನಡೆದುಕೊಂಡವರು ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಾನೆ. ಯಾರೂ ಧರ್ಮದ ಹಾದಿಯಲ್ಲಿ ನಡೆಯುವರೋ ಅವರಿಗೆ ಧರ್ಮ ಕಾಪಾಡುತ್ತದೆ. ಇಂತಹ ಸಂಸ್ಕೃತಿ ಪ್ರತಿಯೊಬ್ಬರ ಮನೆಯಲ್ಲೂ ನಡೆಯಬೇಕು. ಮಕ್ಕಳಿಗೆ ಉತ್ತಮವಾದ ಸಂಸ್ಕಾರ ನೀಡಿದರೆ ಅದರಂತೆ ಸಮಾಜದಲ್ಲಿ ಬದಕುತ್ತಾನೆ ಎಂದು ಹೇಳಿದರು.
ಹಾವೇರಿ ಜಿಲ್ಲೆಯ ಅಗಡಿ ಮಠದ ಶ್ರೀಗಳು ಮಾತನಾಡಿದರು. ಡಿ.ಎನ್. ಡಬಾಲಿ, ಅಜ್ಜುಗೌಡ ಪಾಟೀಲ್, ಬಿ.ಎಸ್. ಹಿರೇಮಠ, ಎಚ್.ಎಂ. ದೇವಗೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ