ಕಡಲೆಗೆ ಕುಂಕುಮ ರೋಗ
ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ! ಸಿಗುತ್ತಿಲ್ಲ ಬೆಳೆಗೆ ಉತ್ತಮ ಬೆಲೆ
Team Udayavani, Feb 7, 2021, 6:25 PM IST
ಲಕ್ಷ್ಮೇಶ್ವರ: ಹಿಂಗಾರಿನ ವಾಣಿಜ್ಯ ಬೆಳೆ ಕಡಲೆ ಕೊಯ್ಲಿನ ಹಂತದಲ್ಲಿರುವಾಗ ತೀವೃಗತಿಯಲ್ಲಿ ಕುಂಕುಮ ರೋಗಬಾಧೆ ಆವರಿಸಿದೆ. ಇದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ.
ಮುಂಗಾರಿನಲ್ಲಿ ಹೆಚ್ಚು ತೇವಾಂಶದಿಂದ ರೈತರು ಬೆಳೆಹಾನಿ ಅನುಭವಿಸಿದ್ದಾರೆ. ಹಿಂಗಾರಿನಲ್ಲಿ ಹವಾಮಾನ ವೈಪರಿತ್ಯ, ಅಕಾಲಿಕ ಮಳೆ, ಕೀಟಬಾಧೆ ಮತ್ತು ಭೂಮಿಯಲ್ಲಿನ ಸೂಕ್ಷ್ಮಾಣು ಜೀವಿಗಳಿಂದ ಹಿಂಗಾರು ಬೆಳೆಗಳು ರೋಗಬಾಧೆಗೆ ತುತ್ತಾಗುತ್ತಿದ್ದು, ರೈತ ಸಮುದಾಯದ ಸಂಕಷ್ಟ ತಪ್ಪದಂತಾಗಿದೆ.
ಅಕಾಲಿಕ ಮಳೆಗೆ ಜೋಳದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಕೃಷಿ ಇಲಾಖೆ ಮಾಹಿತಿ ಪ್ರಕಾರ ಲಕ್ಷೆ ¾àಶ್ವರ ತಾಲೂಕಿನಾದ್ಯಂತ ಒಟ್ಟು 26,750 ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರಿನ ಬೆಳೆ ಬಿತ್ತನೆಯಾಗಿದ್ದು, ಅದರಲ್ಲಿ 11,700 ಹೆಕ್ಟೇರ್ ಪ್ರದೇಶದಲ್ಲಿ ಜೋಳ, 9,750 ಹೆಕ್ಟೇರ್ ಜಮೀನನಲ್ಲಿ ಕಡಲೆ ಬಿತ್ತನೆಯಾಗಿದೆ.
ಲಕ್ಷ್ಮೇಶ್ವರ ಸೇರಿ ತಾಲೂಕಿನ ಗೊಜನೂರ, ಮಾಗಡಿ, ಯಳವತ್ತಿ, ಮಾಡಳ್ಳಿ, ಯತ್ತಿನಹಳ್ಳಿ, ರಾಮಗೇರಿ, ಬೂದಿಹಾಳ, ಗೊಜನೂರ, ಅಡರಕಟ್ಟಿ, ದೊಡೂxರ, ಶಿಗ್ಲಿ, ಅಡರಕಟ್ಟಿ ಗ್ರಾಮ ವ್ಯಾಪ್ತಿಯ ಕಪ್ಪು ಮಣ್ಣಿನ ಜಮೀನುಗಳಲ್ಲಿ ಕಡಲೆ ಬೆಳೆಯಲಾಗಿದೆ.
ಇದನ್ನೂ ಓದಿ :ರೈತರ ಹಿತ ಕಾಪಾಡುವಲ್ಲಿ ಶಾಸಕರು ವಿಫಲ: ಶ್ರೀನಿವಾಸ್
ಪ್ರಾರಂಭದಲ್ಲಿ ಕಡಲೆ ಬೆಳೆ ಕೀಟಬಾಧೆ, ಸಿಡಿ ರೋಗಕ್ಕೆ ತುತ್ತಾಗಿ ನಿರೀಕ್ಷಿತ ಮಟ್ಟದಲ್ಲಿ ಬೆಳೆ ಇರಲಿಲ್ಲ. ಸಂಪೂರ್ಣ ಕಾಯಿ ಬಿಟ್ಟು ಈ ತಿಂಗಳಾಂತ್ಯದಲ್ಲಿ ಕೊಯ್ಲಿಗೆ ಬರುವ ಹಂತದಲ್ಲಿರುವ ಬೆಳೆಗೆ ಇಷ್ಟು ವರ್ಷಗಳಲ್ಲಿ ಕಾಣದ ಕೆಂಪು(ಕುಂಕುಮ) ರೋಗ ಆವರಿಸಿದೆ. ಸಂಪೂರ್ಣ ಬೆಳೆಗೆ ಕೆಂಪು ಬಣ್ಣ, ಕುಂಕುಮ ಪುಡಿ ಎರಚಿದಂತಾಗಿದೆ. ಜಮೀನಿನಲ್ಲಿ ಸಂಚರಿಸಿದರೆ ಕೆಂಪುಪುಡಿ ಮೆತ್ತುತ್ತದೆ. ಇದು ಕೇವಲ ಗಿಡಕ್ಕೆ ಆವರಿಸಿಕೊಳ್ಳದೇ ಕಾಳಿನ ಬೆಳವಣಿಗೆ ಕುಂಠಿತವಾಗಿ ಕಾಳೂ ಕಪ್ಪುಗಟ್ಟುತ್ತದೆ. ಈ ಬೆಳೆ ಒಕ್ಕಲಿ ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಕೇಳಿದ ಬೆಲೆಗೆ ಮಾರಾಟ ಮಾಡಿ ಮತ್ತಷ್ಟು ಕೈ ಸುಟ್ಟುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA