ಸರ್ವಪಲ್ಲಿ ರಾಧಾಕೃಷ್ಣನ್‌ ಆದರ್ಶ ಪಾಲಿಸಿ


Team Udayavani, Sep 6, 2019, 11:41 AM IST

gadaga-tdy-2

ಗಜೇಂದ್ರಗಡ: ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಗಜೇಂದ್ರಗಡ: ರಾಷ್ಟ್ರ ನಿರ್ಮಾಪಕರಾಗಿರುವ ಶಿಕ್ಷಕ ಸಮೂಹ ಮಕ್ಕಳಲ್ಲಿನ ಪರಿಪೂರ್ಣತೆಯ ಜ್ಞಾನ ಹೊರತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಶಿಕ್ಷಣ ಪ್ರೇಮ ಅಮೋಘವಾದದ್ದು ಎಂದು ಓಂ ಸಾಯಿ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಆನಂದ ಮಂತ್ರಿ ಹೇಳಿದರು.

ಪಟ್ಟಣದ ಓಂ ಸಾಯಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ವೇದ, ಉಪನಿಷತ್ತು, ಗೀತೆ, ವಚನಗಳಿಗೆ ಐರೋಪ್ಯ ರಾಷ್ಟ್ರಗಳ ತತ್ವಜ್ಞಾನಿಗಳು ಮರುಳಾಗಿ, ಅವುಗಳ ಜಾಡಿನಲ್ಲಿ, ಗ್ರೀಕ್‌ನ ಪೈಥಾಗೋರಸ್‌, ಸಾಕ್ರೆಟಿಸ್‌, ಪ್ಲೇಟೋ ಮುಂತಾದ ದಾರ್ಶನಿಕ ಚಿಂತಕರು, ಭಾರತೀಯ ಸಂಸ್ಕೃತಿಯನ್ನು ಸಾವಿರಾರು ವರ್ಷಗಳ ಹಿಂದೆಯೇ ಮೆಚ್ಚಿಕೊಂಡಿದ್ದಾರೆ. ನಮ್ಮ ಅತ್ಯಂತ ಪ್ರಾಚೀನವಾದ ಭಾರತೀಯ ಸಂಸೃ್ಕತಿಯ ತತ್ವಗಳನ್ನು ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡಬೇಕಿದೆ. ಬಹುತೇಕ ಶಿಕ್ಷಕರು, ವಿದ್ಯಾರ್ಥಿಗಳು ಪರೀಕ್ಷೆಗಾಗಿ ಬದುಕಿ, ಪರೀಕ್ಷೆಗಾಗಿಯೇ ಸಾಯುತ್ತಾರೆ. ಶಿಕ್ಷಕ ಕುದುರೆ ತರಬೇತು ದಾರನಲ್ಲ. ಕುದುರೆ ತರಬೇತುದಾರನಂತೆ ಕೆಲಸ ಮಾಡಿದರೆ ಆತ ಶಿಕ್ಷಕನಾಗುವುದಿಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ತಮ ಸ್ನೇಹಿತರಾಗಿರಬೇಕು. ದುರಹಂಕಾರದ, ಅರ್ಥಹೀನ ಮಾತುಗಳನ್ನು ಶಿಕ್ಷಕರು ಬಿಡದಿದ್ದರೆ ವಿದ್ಯಾರ್ಥಿಗಳಲ್ಲಿ ಮನುಷ್ಯತ್ವ ಬೆಳೆಸಲು ಸಾಧ್ಯವಾಗುವುದಿಲ್ಲ ಎಂದರು.

ಸಂಸ್ಥೆ ಉಪಾಧ್ಯಕ್ಷ ಮೋಹನ ಕನಕೇರಿ ಮಾತನಾಡಿ, ಶಿಕ್ಷಕರ ದಿನಾಚರಣೆ ಎಂಬುದು ಇತ್ತೀಚೆಗೆ ಯಾಂತ್ರಿಕವಾಗುತ್ತಿದೆ. ಗುರುವನ್ನು ಮೇರು ಸ್ಥಾನದಲ್ಲಿಟ್ಟಿದ್ದೇವೆ. ಆದರೆ, ಗುರುವಾದವನು ನಿಜವಾಗಿಯೂ ಗುರುವಿನ ಕೆಲಸ ಮಾಡುತ್ತಿದ್ದಾನೇಯೇ, ಗುರುವಿನ ಜವಾಬ್ದಾರಿ ಏನು? ನಾವು ಮಾಡಬೇಕಾದ ಎಷ್ಟು ಕೆಲಸಗಳನ್ನು ಬಿಟ್ಟು ಹೋಗಿದ್ದೇವೆ ಎಂಬ ಬಗ್ಗೆ ಯೋಚಿಸಬೇಕಿದೆ ಎಂದರು.

ಕಾರ್ಯದರ್ಶಿ ಗಿರೀಶ ವೆರ್ಣೆಕರ, ಮುಖ್ಯ ಶಿಕ್ಷಕಿ ಡಾ. ಮಂಜುಳಾ ಹಳಕಟ್ಟಿ, ಕವಿತಾ ಹಾದಿಮನಿ, ಫರ್ಜಾನಾ ಮುಧೋಳ, ಸಿದ್ದು ವಿ. ಜಿ, ಸುನಂದಾ ದಿವಟೆ, ಮಂಜುಳಾ ದವೆ, ಕವಿತಾ ಸಂಚಾಲಿ, ಮಲ್ಲಪ್ಪ ಮಾಟರಂಗಿ, ವಿಜಯಲಕ್ಷ್ಮಿ ಮುಲ್ಕಿಪಾಟೀಲ, ನಂದಾ ರಂಗ್ರೇಜಿ, ಯಲ್ಲಮ್ಮ ಕಟ್ಟಿಮನಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.