ವನ್ಯಜೀವಿ ಸಂರಕ್ಷಣೆ ಜಾಗೃತಿಗೆ 140 ಕಿಮೀ ಜಾಥಾ : ಗದಗದಲ್ಲಿ ವನ್ಯಜೀವಿ ಸಪ್ತಾಹ ಆಚರಣೆ


Team Udayavani, Oct 5, 2020, 4:17 PM IST

ವನ್ಯಜೀವಿ ಸಂರಕ್ಷಣೆ ಜಾಗೃತಿಗೆ 140 ಕಿಮೀ ಜಾಥಾ : ಗದಗದಲ್ಲಿ ವನ್ಯಜೀವಿ ಸಪ್ತಾಹ ಆಚರಣೆ

ಗದಗ: ವನ್ಯಜೀವಿ ಸಪ್ತಾಹ ಅಂಗವಾಗಿ ಜಿಲ್ಲಾ ಅರಣ್ಯ ಇಲಾಖೆಯಿಂದ ನಗರದಲ್ಲಿ ರವಿವಾರ ಆಯೋಜಿಸಿದ್ದ 140 ಕಿಮೀ ಹಾಗೂ 20 ಕಿಮೀ ದೂರದ ಸೈಕ್ಲೋಥಾನ್‌ (ಸೈಕಲ್‌ ಜಾಥಾ) ಯಶಸ್ವಿಯಾಗಿ ನಡೆಯಿತು. ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 140 ಕಿಮೀ ಸೈಕಲ್‌ ಜಾಥಾಗೆ ಜಿಪಂ ಸಿಇಒ ಡಾ| ಆನಂದ ಕೆ., ಎಸ್‌ಪಿ ಯತೀಶ್‌ ಎನ್‌., ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ. ಸೂರ್ಯಸೇನ್‌ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಲಗರೆ ಚಾಲನೆ ನೀಡಿದರು. ಬಳಿಕ 20 ಕಿಮೀ ವಿಭಾಗದ ಸೈಕಲ್‌ ಜಾಥಾಕ್ಕೆ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾದ ನೀಲಮ್ಮ ಮಲ್ಲಿಗವಾಡ, ಪ್ರೇಮಾ ಹುಚ್ಚಣ್ಣವರ, ಬಸಿರಾ ಹಾಗೂ ಹರೀಶ ಮುಟಗಾರ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಬಿ. ವಿಶ್ವನಾಥ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪರಿಮಳ ವಿ.ಎಚ್‌. ಫಯಾಜ್‌ ಖಾಜಿ, ಗದಗ ವಲಯ ಅರಣ್ಯಾಧಿಕಾರಿಗಳಾದ ರಾಜು ಗೊಂದಕರ, ಮಹಾಂತೇಶ ಪೇಟೂರ ಸೇರಿದಂತೆ ಅರಣ್ಯ, ಕ್ರೀಡಾ ಇಲಾಖೆ ಸಿಬ್ಬಂದಿ ಇದ್ದರು.

ಇದನ್ನೂ ಓದಿ:ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ: ಸಿಬಿಐ ದಾಳಿ ಬಳಿಕ ಕಿಡಿಕಾರಿದ ಡಿಕೆ ಸುರೇಶ್

ಹಸಿರು ಕಾನನದಲ್ಲಿ ಸೈಕಲ್‌ ಸವಾರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 6.30ಕ್ಕೆ ಚಾಲನೆ ಪಡೆದ 140 ಕಿಮೀ ಸೈಕಲ್‌ ಜಾಥಾ ಕಪ್ಪತ್ತಗುಡ್ಡ ಮೈಯೊಡ್ಡಿರುವ ಗದಗ, ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನಲ್ಲಿ ಸುಮಾರು 8 ಗಂಟೆಗಳ ಕ್ರಮಿಸಿತು. ಈ ಪೈಕಿ ಮುಂಡರಗಿ-ಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡದ ಹಸಿರು ಸೆರಗಿನ ಮಧ್ಯೆ ಸಾಗಿತು. ಗದಗ ತಾಲೂಕಿನ ಕದಾಂಪುರ, ಮೇವುಂಡಿ, ಮುಂಡರಗಿ, ಬಾಗೇವಾಡಿ, ಕಡಕೋಳ, ಶಿರಹಟ್ಟಿ, ಮಾಗಡಿ, ಹರ್ತಿ ಮಾರ್ಗವಾಗಿ ಗದಗ ತಾಲೂಕಿನ ಬಿಂಕದಕಟ್ಟಿಯ ಸಾಲು ಮರದದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ತಲುಪಿ ಕೊನೆಗೊಂಡಿತು. ಈ ನಡುವೆ ಸುಮಾರು 10 ಕಡೆ ಹಣ್ಣು, ಉಪಾಹಾರ ಹಾಗೂ ಕುಡಿಯುವ ನೀರು ಒದಗಿಸಲಾಯಿತು.

ಇನ್ನು ನಗರದ ಪ್ರಮುಖ ಮಾರ್ಗಗಳಲ್ಲಿ ಸಾಗಿದ 20 ಕಿಮೀ ದೂರದ ಸೈಕಲ್‌ ಜಾಥಾದಲ್ಲಿ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು, ಜಿಪಂ ಸಿಇಒ ಡಾ| ಆನಂದ ಹಾಗೂ ಎಸ್ಪಿ ಯತೀಶ್‌ ಎನ್‌., ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್‌ ಗಮನ ಸೆಳೆದರು.

ಉಭಯ ಸೈಕಲ್‌ ಜಾಥಾಗಳು
ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ತಲುಪಿ ಮುಕ್ತಾಯಗೊಂಡವು. ಎರಡೂ ವಿಭಾಗಗಳದಲ್ಲಿ 290 ಜನರು ಆನ್‌ಲೈನ್‌ ಮೂಲಕ ನೋಂದಾಯಿಸಿದ್ದು, ಆ ಪೈಕಿ 150 ಜನರು ಪಾಲ್ಗೊಂಡಿದ್ದರು. ಈ ಪೈಕಿ ಬಾಗಲಕೋಟೆ, ವಿಜಯಪುರ ಹಾಗೂ ಗದಗಿನ ಸೈಕ್ಲಿಸ್ಟ್‌ಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಧಾರವಾಡ ಸೇರಿದಂತೆ ಇನ್ನಿತರೆ ಜಿಲ್ಲೆಯ ಸೈಕಲ್‌ ಪಟುಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.