ಜಲಕ್ಷಾಮ


Team Udayavani, Jan 11, 2019, 11:20 AM IST

11-january-23.jpg

ಗಜೇಂದ್ರಗಡ: ಪಟ್ಟಣದಲ್ಲಿ ಬೇಸಿಗೆಗೂ ಮುನ್ನವೇ ಜಲ ಕ್ಷಾಮ ಎದುರಾಗಿದೆ. ಈ ಹಿಂದೆ 10 ದಿನಕ್ಕೊಮ್ಮೆ ಪೂರೈಕೆಯಾಗುತ್ತಿದ್ದ ಕುಡಿಯುವ ನೀರು ಇದೀಗ 20 ದಿನಕ್ಕೆ ತಲುಪಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ.

ಕೋಟೆ ಕೊತ್ತಲುಗಳ ನಾಡು ಎಂದೇ ಖ್ಯಾತಿ ಪಡೆದ ಗಜೇಂದ್ರಗಡದಲ್ಲಿ ಜೀವ ಜಲಕ್ಕಾಗಿ ಕಳೆದ ಮೂರು ತಿಂಗಳ ಹಿಂದೆ ಜನರು ಜಗಳ ಮಾಡುವ ದುಸ್ಥಿತಿ ಎದುರಾಗಿತ್ತು. ನೀರಿನ ಬವಣೆ ಕಂಡರಿಯದ ಈ ಭಾಗದ ಜನರು ಸಮಸ್ಯೆಯಿಂದ ಬಸವಳಿದು ನೀರಿಗಾಗಿ ನಿತ್ಯ ಪರದಾಡುವ ಅನಿವಾರ್ಯತೆ ಎದುರಾಗಿತ್ತು. ಆದರೆ ಪುರಸಭೆ ಅಧಿಕಾರಿಗಳು ಪಟ್ಟಣದೆಲ್ಲೆಡೆ ಕೊಳವೆಬಾವಿ ಕೊರೆಯಿಸಿ ನೀರು ಸಂಗ್ರಹಿಸಿ 10 ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದರು. ಆದರೆ ಬರದ ಛಾಯೆಯಿಂದ ಇದೀಗ ಮತ್ತೆ 20 ದಿನಕ್ಕೊಮ್ಮೆ ನೀರು ಸರಬರಾಜಾಗುತ್ತಿರುವುದು ಜನರನ್ನು ಚಿಂತೆಗೆ ಜಾರುವಂತೆ ಮಾಡಿದೆ. ಅಂತರ್ಜಲ ಕುಸಿದ ಪರಿಣಾಮ ನೀರಿನ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿಂದೆ ಪುರಸಭೆ ಪಟ್ಟಣದಲ್ಲಿ 8ರಿಂದ 10 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿತ್ತು. ಇದರಿಂದ ಜನರಿಗೆ ನೀರಿನ ಯಾವುದೇ ತೊಂದರೆ ಕಾಡಿರಲಿಲ್ಲ. ಆದರೆ ಪಟ್ಟಣದ ಅನೇಕ ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ಸಂಚಕಾರ ಎದುರಾಗಿದೆ. ಕುಡಿಯುವ ನೀರು ವ್ಯತ್ಯಯದಿಂದಾಗಿ ಎಲ್ಲ ಓಣಿಗಳ ನಿವಾಸಿಗಳು ಕೊಡ ಹಿಡಿದು ಅಲೆದಾಡುವುದು ಸಾಮಾನ್ಯವಾಗಿದೆ.

ಪಟ್ಟಣದ ಗುಡ್ಡದ ಕೆಳಭಾಗದಲ್ಲಿರುವ ವಾಜಪೇಯಿ ಬಡಾವಣೆಯಲ್ಲಿ 199 ಕುಟುಂಬಗಳು ವಾಸಿಸುತ್ತಿವೆ. ಅಲ್ಲಿನ ಜನರಿಗೆ ಇರುವುದು 8 ನಳಗಳು ಮಾತ್ರ. ನೀರು ಪೂರೈಕೆಯಾದ ಸಂದರ್ಭದಲ್ಲಿ ಪರಸ್ಪರ ಕಚ್ಚಾಡಿ ನೀರು ಪಡೆಯುವ ಸ್ಥಿತಿ ಉದ್ಭವಿಸಿದೆ. ಹಲವು ವರ್ಷಗಳಿಂದ ಇದೇ ಪರಿಸ್ಥಿತಿ ಅನುಭವಿಸುತ್ತಿರುವ ಬಡಾವಣೆ ನಿವಾಸಿಗಳ ಆರ್ಥನಾದ ಕೇಳುವವರಿಲ್ಲದಂತಾಗಿದೆ.

ಕುಡಿಯುವ ನೀರಿಗಾಗಿ ನಿತ್ಯ ಒಂದಿಲ್ಲೊಂದು ವಾರ್ಡ್‌ಗಳ ನಿವಾಸಿಗಳು ಖಾಲಿ ಕೊಡ ಹಿಡಿದು ಪುರಸಭೆ ಮುಂದೆ ಪ್ರತಿಭಟನೆ ನಡೆಸುವುದು ಸಾಮಾನ್ಯವಾಗಿದೆ. ಸಮರ್ಪಕ ನೀರು ಬಾರದಿದ್ದರೂ ಪ್ರತಿ ವರ್ಷ ಪುರಸಭೆಗೆ ನೀರಿನ ಕರ ಭರಿಸುವುದು ತಪ್ಪಿಲ್ಲ. ಹಣ ನೀಡಿ ಖಾಸಗಿಯವರಿಂದ ನೀರು ಹಾಕಿಸಿಕೊಳ್ಳುವುದು ತಪ್ಪ್ಪಿಲ್ಲ ಎಂದು ಸಾರ್ವಜನಿಕರು ಪುರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣದ ವಿವಿಧ ವಾರ್ಡ್‌ ಜತೆ ಹೊರ ವಲಯದಲ್ಲಿ ಪುರಸಭೆಯಿಂದ ಕೊರೆಸಿದ 63 ಕೊಳವೆ ಬಾವಿಗಳಲ್ಲಿ 33 ಕೊಳವೆ ಬಾವಿಗಳಲ್ಲಿ ಮಾತ್ರ ನಿತ್ಯ 6. 5 ಲಕ್ಷ ಲೀಟರ ನೀರು ಸಂಗ್ರಹವಾಗುತ್ತಿದೆ. ಹೀಗಾಗಿ ಪಟ್ಟಣದ 23 ವಾರ್ಡ್‌ಗಳಿಗೆ ಸಮರ್ಪಕ ನೀರು ಪೂರೈಸಲಾಗದಂತಾಗಿದೆ ಎನ್ನುವುದು ಅಧಿಕಾರಿಗಳ ಮಾತಾಗಿದೆ. ಪಟ್ಟಣದಲ್ಲಿನ ಜಲಕ್ಷಾಮವನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್‌ ನೀರು ಸರಬರಾಜುದಾರರು 300ರಿಂದ 350 ರುಪಾಯಿ ನೀಡಿದರೂ ಸಮಯಕ್ಕೆ ಸರಿಯಾಗಿ ನೀರು ತರದೇ ಸತಾಯಿಸುತ್ತಾರೆ. ಹೀಗಾಗಿ ಟ್ಯಾಂಕರ್‌ ನೀರು ಸರಬರಾಜುದಾರರಿಗೆ ಈಗ ಬಹಳಷ್ಟು ಬೇಡಿಕೆ ಬಂದಿದೆ.

ಪಟ್ಟಣದಲ್ಲಿ ಪುರಸಭೆ 20 ದಿನಕ್ಕೊಮ್ಮೆ ನೀರು ಪೂರೈಸುತ್ತಿದೆ. ನೀರು ಶೇಖರಣೆ ಮಾಡಿಕೊಳ್ಳುವುದು ಕಷ್ಟಕರವಾಗಿದೆ. ಯಾವ ಬಡಾವಣೆಯಲ್ಲಿ ನೀರು ಬಿಡುತ್ತಾರೋ ಅಲ್ಲಿ ನಿತ್ಯ ಕೊಡ ಹಿಡಿದು ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.
•ಯಲ್ಲವ್ವ ಬಂಡಿವಡ್ಡರ

ಪಟ್ಟಣದಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆಯುವುದರ ಜತೆಗೆ ಬಡಾವಣೆಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಜಿಲ್ಲಾಡಳಿತ ನಿರ್ದೇಶಿಸಿದ್ದು, ಸಮರ್ಪಕ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು.
ಹನಮಂತಮ್ಮ ನಾಯಕ,
ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.