ಹೊಳೆಆಲೂರ ಮೇಘರಾಜ ನಗರ ಪ್ರತಿಬಂಧಕ ಪ್ರದೇಶ
Team Udayavani, Jun 7, 2020, 3:15 PM IST
ಹೊಳೆಆಲೂರ: ಗ್ರಾಮದ ಮೇಘರಾಜ ನಗರದ ನಿವಾಸಿ 28 ವರ್ಷದ ವ್ಯಕ್ತಿಗೆ ಶನಿವಾರ ಕೋವಿಡ್ ಸೋಂಕು ದೃಢವಾಗಿದ್ದು, ಅವನ ಕುಟುಂಬದ 5 ಜನರು ಸೇರದಂತೆ 9 ಮಂದಿಯನ್ನು ಕ್ವಾರಂಟೈನ್ಗೆ ಕಳುಹಿಸಿರುವುದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಸೋಂಕು ದೃಢವಾದ ಸುದ್ದಿ ತಿಳಿಯುತ್ತಿದ್ದಂತೆ ಬಹುತೇಕ ಹಿಂದುಳಿದ ವರ್ಗದವರನ್ನು ಹೂಂದಿರುವ ಮೇಘರಾಜ ಕಾಲೋನಿಯಲ್ಲಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನಿತ್ಯ ದುಡಿದು ತಿನ್ನುವ ನಮ್ಮ ಕಾಲೋನಿ ಶೀಲ್ ಡೌನ್ ಅದರೆ ಏನು ಗತಿ ಎಂದು ಅಳಲು ತೋಡಿಕೊಂಡಿದ್ದಾರೆ. ಸೋಂಕಿತನ ಸಂಪರ್ಕದಲ್ಲಿ ಇರುವವರಿಗೇನಾದರೂ ಪಾಸಿಟೀವ್ ತಗುಲಿದರೆ ಗ್ರಾಮದಲ್ಲಿ ಮಾತ್ರವಲ್ಲ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಮಾಣದಲ್ಲಿ ಸೋಂಕು ವ್ಯಾಪಿಸುವ ಲಕ್ಷಣಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಿಂದ ಶನಿವಾರ ಹೊಳೆಆಲೂರಿಗೆ ಯಾರೂ ಬರಲಿಲ್ಲ.
ಶನಿವಾರ ಸ್ಥಳೀಯ ಗ್ರಾಮ ಪಂಚಾಯತ ಅಧಿಕಾರಿಗಳು ಡಂಗುರ ಸಾರಿ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಾಲೂಕು ಆರೋಗ್ಯ ಅಧಿಕಾರಿ ಬಿ.ಎಸ್. ಬಭಂತ್ರಿ, ಡಾ|ಅರವಿಂದ ಕಂಬಳಿ, ಡಾ| ರಾಘು, ಡಾ| ಕೆ.ಎಸ್. ಹಾದಿಮನಿ, ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಿವಲೀಲಾ ಸಂಗಳದ, ತಾಪಂ ಇಒ ಸಂತೋಷ ಪಾಟೀಲ, ಪಿಡಿಒ ಮಂಜುನಾಥ ಗಣಿ ನೇತೃತ್ವದಲ್ಲಿ ಮೇಘರಾಜ ನಗರದ ಪ್ರತಿ ಮನೆ ಮನೆ ತಪಾಸಣೆ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್