ನಿರ್ವಹಣೆ ಇಲ್ಲದೆ ಮೂಲೆ ಸೇರಿದ ಸೆಗ್ವೇ ಸ್ಕೂಟರ್‌


Team Udayavani, Sep 18, 2019, 11:23 AM IST

gadaga-tdy-2

ಗದಗ: ಗದಗ ಪರಿಸರವನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶದಿಂದ ಜಿಲ್ಲಾಡಳಿತ ಹತ್ತು ಹಲವು ಯೋಜನೆಗಳನ್ನು ಕೈಗೊಂಡಿದೆ. ಭಿಷ್ಮಕೆರೆ ಅಭಿವೃದ್ಧಿ, ಬಿಂಕದಕಟ್ಟಿ ಸಣ್ಣ ಉದ್ಯಾನವದಿಂದಾಗಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಮತ್ತಷ್ಟು ಸಂಖ್ಯೆಯಲ್ಲಿ ಯುವ ಪ್ರವಾಸಿಗರನ್ನು ಆಕರ್ಷಿಸಲು ಸೆಗ್ವೇ ಸ್ಕೂಟರ್‌ಗಳನ್ನು ಖರೀದಿಸಲಾಗಿತ್ತು. ಆದರೆ, ಅದರ ನಿರ್ವಹಣೆಗೆ ಸೂಕ್ತ ಯೋಜನೆ ಇಲ್ಲದೇ ಒಂದೂವರೆ ವರ್ಷದಿಂದ ಸ್ಕೂಟರ್‌ಗಳು ಧೂಳು ತಿನ್ನುತ್ತಿವೆ.

ನಗರದ ಹೃದಯ ಭಾಗದಲ್ಲಿರುವ ಭಿಷ್ಮಕೆರೆ ಒಡಲಿಗೆ ನದಿ ನೀರು ತುಂಬಿಸಿದ್ದು, 116 ಅಡಿ ಎತ್ತರದ ಬಸವಣ್ಣನ ಮೂರ್ತಿ ಸ್ಥಾಪನೆ, ಉದ್ಯಾನಗಳ ಅಭಿವೃದ್ಧಿಯೊಂದಿಗೆ ಕೆರೆಯಲ್ಲಿ ದೋಣಿ ವಿಹಾರವನ್ನೂ ಆರಂಭಿಸಿತ್ತು. ಜೊತೆಗೆ ಬಿಂಕದಕಟ್ಟಿ ಸಣ್ಣ ಮೃಗಾಯಲದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿತ್ತು. ಅದರೊಂದಿಗೆ ಯುವ ಜನರಿಗೆ ಸಾಹಸಮಯ ಹಾಗೂ ರೋಮಾಂಚನ ಅನುಭವ ನೀಡಲು ಜಿಲ್ಲಾಡಳಿತ ಐದು ಸೆಗ್ವೇ ಸ್ಕೂಟರ್‌ಗಳನ್ನು ಖರೀದಿಸಿತ್ತು. ಅದರ ಖರೀದಿಗೆ ತಲಾ 98 ಸಾವಿರ ರೂ. ಖರ್ಚು ಮಾಡಿರುವ ಜಿಲ್ಲಾಡಳಿತ 26-8-2018ರಂದು ಲೋಕಾರ್ಪಣೆಗೊಳಿಸಿತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಚ್.ಕೆ. ಪಾಟೀಲ ಅವರಿಂದ ಸೆಗ್ವೇ ಸ್ಕೂಟರ್‌ಗಳಿಗೆ ಚಾಲನೆ ನೀಡಲಾಯಿತು. ಆನಂತರಅಧಿಕಾರಿಗಳ ನಿರಾಸಕ್ತಿಯಿಂದಾಗಿ ಅವು ಮತ್ತೆ ರಸ್ತೆಗಿಳಿಯಲಿಲ್ಲ. ಸ್ಥಳಾವಕಾಶದ ಕೊರತೆಯಿಂದಾಗಿ ಅವು ವಿವಿಧ ಇಲಾಖೆಗಳ ಕಚೇರಿ ಕೊಠಡಿಗಳಲ್ಲಿ ಮೂಲೆ ಸೇರಿವೆ.

ಸೆಗ್ವೇ ಸ್ಕೂಟರ್‌ ವಿಶೇಷವೇನು?: ವಿದ್ಯುತ್‌ ಯಂತ್ರ ಚಾಲಿತ ಸ್ಕೂಟರ್‌ ಇದಾಗಿದ್ದು, ಎರಡು ಚಕ್ರಗಳನ್ನು ಹೊಂದಿರುತ್ತದೆ. ಇದರಲ್ಲಿ ಒಬ್ಬರು ಮಾತ್ರ ನಿಂತು ಕೊಂಡೇ ಚಲಾಯಿಸುವ ವಾಹನ ಇದಾಗಿದೆ. ಪ್ರತಿ ಗಂಟೆಗೆ 5ರಿಂದ 20 ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ವಿದೇಶಿ ಹಾಗೂ ವಿವಿಧ ಕಾರ್ಪೋರೇಟ್ ಕಂಪನಿಗಳಲ್ಲಿ ಇದು ಹೆಚ್ಚು ಬಳಕೆಯಲ್ಲಿದೆ. 1.5×2 ಅಡಿ ವಿಸ್ತೀರ್ಣವಿದ್ದು, ಕಡಿಮೆ ಖರ್ಚು, ಟ್ರಾಫಿಕ್‌ ಮತ್ತು ಪಾರ್ಕಿಂಗ್‌ ಸಮಸ್ಯೆ ಉಂಟಾಗದಿರುವುದು ಇದರ ವಿಶೇಷ.

ಹೀಗಾಗಿ ಅದನ್ನು ನಗರಕ್ಕೆ ಪರಿಚಯಿಸುವುದರಿಂದ ಯುವ ಸಮೂಹವನ್ನು ಆಕರ್ಷಿಸಲು ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರದಿಂದ ಜಿಲ್ಲಾಡಳಿತ ಅವುಗಳನ್ನು ಖರೀದಿಸಿತ್ತು.

ಜಾರಿಗೆ ಬಾರದ ಯೋಜನೆ: ಸೆಗ್ವೇ ಸ್ಕೂಟರ್‌ಗಳು ಇಲ್ಲಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಭಿಷ್ಮಕೆರೆ ಹಾಗೂ ಬಿಂಕದಕಟ್ಟಿ ಮಾರ್ಗದಲ್ಲಿ ಇವುಗಳನ್ನು ಓಡಿಸಲಾಗುತ್ತದೆ. ಅವುಗಳಿಗೆ ಪ್ರತಿ ಗಂಟಿಗೆ ಕನಿಷ್ಠ ದರದಲ್ಲಿ ಬಾಡಿಗೆ ನಿಗದಿಗೊಳಿಸಲಾಗುತ್ತದೆ ಎನ್ನಲಾಗಿತ್ತು.

ಆದರೆ, ಉದ್ಘಾಟನೆ ಬಳಿಕ ಇವುಗಳನ್ನು ವಿವಿಧ ಇಲಾಖೆಗಳ ಕೋಣೆಗೆ ಸೇರಿಸಿದ ಅಧಿಕಾರಿಗಳು ಮತ್ತೆ ಅವುಗಳತ್ತ ಮುಖ ಮಾಡಿಲ್ಲ ಎಂಬುದು ಗಮನಾರ್ಹ.

ಹೀಗಾಗಿ ಕಳೆದ ಒಂದೂವರೆ ವರ್ಷದಿಂದ ಎರಡು ನಿರ್ಮಿತಿ ಕೇಂದ್ರದಲ್ಲಿ, ಒಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸೇರಿದಂತೆ ಮೂರು ಸೆಗ್ವೇ ಸ್ಕೂಟರ್‌ಗಳು ಧೂಳು ತಿನ್ನುತ್ತಿವೆ.

ಇನ್ನೆರಡು ಸ್ಕೂಟರ್‌ಗಳು ಬಿಂಕದಕಟ್ಟಿ ಸಣ್ಣ ಮೃಗಾಲಯದಲ್ಲಿವೆ. ಅವುಗಳಿಗೆ ಒಬ್ಬರಿಗೆ 50 ರೂ. ನಿಗದಿಗೊಳಿಸಲಾಗಿದೆ. ಆದರೆ, ಒಂದು ಮಾತ್ರ ಆಗೊಮ್ಮೆ- ಈಗೊಮ್ಮೆ ಬಳಕೆಯಾಗುತ್ತಿದೆ ಎಂದು ಹೇಳಲಾಗಿದೆ.

ಸೆಗ್ವೇ ಮೇಲೆ ಕಾಲಿಡುತ್ತಿದ್ದಂತೆ ಗರಿಷ್ಠ 20 ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ಹೀಗಾಗಿ ಜಿಲ್ಲಾ ಕ್ರೀಂಡಾಂಗಣದಲ್ಲಿರುವ ಸೆಗ್ವೇಯನ್ನು ಉಚಿತವಾಗಿ ಬಳಸಲೂ ಕ್ರೀಡಾಪಟುಗಳು ಹಿಂದೇಟು ಹಾಕುತ್ತಿದ್ದಾರೆ ಎನ್ನುತ್ತಾರೆ ಜಿಲ್ಲಾ ಯುವಜನ ಸೇವಾ ಕ್ರೀಡಾಧಿಕಾರಿ ವಿಶ್ವನಾಥ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ

ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.