ಮನೆ ಮಹಾಮನೆ ಆಗಬೇಕೆಂಬುದೇ ಶರಣರ ಆಶಯ

ಸ್ವಾತಂತ್ರ್ಯ ಹೋರಾಟಗಾರರನ್ನು ತಯಾರು ಮಾಡಿದ ಈ ಗ್ರಾಮ ತನ್ನದೇ ಕೊಡುಗೆ ನೀಡಿದೆ.

Team Udayavani, May 13, 2022, 6:01 PM IST

ಮನೆ ಮಹಾಮನೆ ಆಗಬೇಕೆಂಬುದೇ ಶರಣರ ಆಶಯ

ನರಗುಂದ: ಸಾತ್ವಿಕ ಬದುಕಿಗೆ ಶರಣರ ಸಂದೇಶಗಳು ಸನ್ಮಾರ್ಗ ತೋರಿಸಿವೆ. ಮನೆ ಮಹಾಮನೆ ಆಗಬೇಕೆಂಬುದು 12ನೇ ಶತಮಾನದ ಬಸವಾದಿ ಶರಣರ ಆಶಯವಾಗಿತ್ತು ಎಂದು ಶಿರೋಳ-ಚಿಂಚಣಿ ತೋಂಟದಾರ್ಯ ಮಠದ ಶ್ರೀ ಗುರುಬಸವ ಸ್ವಾಮಿಗಳು ಹೇಳಿದರು.

ಗುರುವಾರ ಮತಕ್ಷೇತ್ರದ ರೋಣ ತಾಲೂಕಿನ ಭೋಪಳಾಪೂರ ಗ್ರಾಮದಲ್ಲಿ ಏರ್ಪಡಿಸಿದ್ದ ಸಾಲಿಮಠ ಬಂಧುಗಳ ನೂತನ ಮನೆ ಗೃಹ ಪ್ರವೇಶ ಹಾಗೂ ವಿಶ್ರಾಂತ ಡಯಟ್‌ ಉಪನ್ಯಾಸಕ ವೀರಯ್ಯ ಸಾಲಿಮಠ ಅವರ 83ನೇ ವರ್ಷದ ಜನ್ಮದಿನದ ಸಹಸ್ರ ಚಂದ್ರದರ್ಶನ ಅಂಗವಾಗಿ ರೈತ ವಿಜ್ಞಾನಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಣ್ಣಿಗೇರಿಯ ಅಬ್ದುಲ್‌ಖಾದರಸಾಬ ನಡಕಟ್ಟಿನ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ನವಲಗುಂದ ಗವಿಮಠದ ಶ್ರೀ ಬಸವಲಿಂಗ ಸ್ವಾಮಿಗಳು ಮಾತನಾಡಿ, ಮಕ್ಕಳು ಯೋಗ್ಯರಾಗಿ ಬೆಳೆದರೆ ಯಾವ ಸಂಪತ್ತಿನ ಆಶ್ರಯವೂ ಬೇಕಾಗಿಲ್ಲ. ತಂದೆ-ತಾಯಿ ವೃದ್ಧಾಶ್ರಮಕ್ಕೆ ಸೇರಿಸುವ ಇಂದಿನ ದಿನಗಳಲ್ಲಿ ತಂದೆಯ ಸಹಸ್ರ ಚಂದ್ರದರ್ಶನ ಏರ್ಪಡಿಸಿದ್ದು ಸ್ತುತ್ಯಾರ್ಹ. ಜಗತ್ತಿನ ಎಲ್ಲ ದೇವರನ್ನು ನೋಡುವ ಭಾಗ್ಯ ಕರುಣಿಸಿದ ತಂದೆ-ತಾಯಿ ಸೇವೆ ಸ್ಮರಿಸಬೇಕು ಎಂದರು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು ಮಾತನಾಡಿ, ಭೋಪಳಾಪುರ ಗ್ರಾಮ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಗೀಗಿ ಪದಗಳ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ತಯಾರು ಮಾಡಿದ ಈ ಗ್ರಾಮ ತನ್ನದೇ ಕೊಡುಗೆ ನೀಡಿದೆ. ನಡಕಟ್ಟಿನ ಅವರ ಎಲ್ಲ ಸಂಶೋಧನೆಗಳಿಗೆ ಪ್ರೋತ್ಸಾಹ ತುಂಬಿದವರು ಗದುಗಿನ ಲಿಂ. ತೋಂಟದ ಶ್ರೀಗಳು ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ರೈತ ವಿಜ್ಞಾನಿ, ಕೃಷಿ ಸಂಶೋಧಕರಾದ ಪದ್ಮಶ್ರೀ ಪುರಸ್ಕೃತ ಅಬ್ದುಲ್‌ಖಾದರಸಾಬ ನಡಕಟ್ಟಿನ ಹಾಗೂ ಪತ್ನಿ ವಲೀಮಾ ಅವರನ್ನು ಗ್ರಾಮಸ್ಥರ ಪರವಾಗಿ ಪೂಜ್ಯರು ಸತ್ಕರಿಸಿದರು.

ಈ ವೇಳೆ ಅವರಾದಿ ಫಲಹಾರೇಶ್ವರ ಮಠದ ಶ್ರೀ ಶಿವಮೂರ್ತೇಶ್ವರ ಸ್ವಾಮಿಗಳು, ವೀರಯ್ಯ ಸಾಲಿಮಠ ದಂಪತಿಗಳು, ಶಿವಮೊಗ್ಗ ಸಹಾಯಕ ಔಷಧ ನಿಯಂತ್ರಣಾ  ಧಿಕಾರಿ ಡಾ| ವೀರೇಶಬಾಬು, ವೈದ್ಯ ಡಾ| ಎ.ಐ. ಹುಯಿಲಗೋಳ, ನಿಜಲಿಂಗಪ್ಪ ಸಣ್ಣಕ್ಕಿ, ವಿ.ಎಸ್‌. ಹಿರೇಮಠ, ಕಲ್ಲಯ್ಯ ಕಲ್ಲೂರ, ಬಿ.ಬಿ. ಹಿರೇಗೌಡ್ರ, ಬಸಲಿಂಗಯ್ಯ ಇಂಗಳಳ್ಳಿಮಠ, ಚಂದ್ರಗೌಡ ಪಾಟೀಲ, ಲಿಂಗಬಸಪ್ಪ ಮರ್ಚನ್ನವರ, ಪುನೀತಪ್ಪ ಸಾಂಭ್ರಾಣಿ, ವಿ.ಎಸ್‌. ಹಿರೇಮಠ ಇದ್ದರು.
ಮಹಾಂತೇಶ ಸಾಲಿಮಠ ಸ್ವಾಗತಿಸಿದರು. ಪ್ರಾಚಾರ್ಯ ಬಿ.ಎಸ್‌. ಸಾಲಿಮಠ ನಿರೂಪಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.