ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲೀಗ ಹಸಿರೇ ಉಸಿರು
ಪ್ರಗತಿಯ ಹಂತದಲ್ಲಿದೆ ಸಸಿ ಪಡೆದು-ನೆಡುವ ಪ್ರಕ್ರಿಯೆ!ಸಾಮಾಜಿಕ ಅರಣ್ಯ ವಲಯ ವಿಭಾಗದಿಂದ 1,31,732, ಪ್ರಾದೇಶಿಕ ವಲಯದಿಂದ 1,18,981 ಸಸಿ ಸಿದ್ದ
Team Udayavani, Jun 29, 2021, 9:42 PM IST
ಲಕ್ಷ್ಮೇಶ್ವರ: ತಾಲೂಕು ವ್ಯಾಪ್ತಿಯ ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅರಣ್ಯೀಕರಣಕ್ಕೆ ಲಕ್ಷಾಂತರ ಸಸಿಗಳು ಸಿದ್ಧಗೊಂಡಿವೆ.
ಸುಮಾರು 30 ಎಕರೆ ವಿಸ್ತೀರ್ಣದ ಶೆಟ್ಟಿಕೇರಿ ಕೆರೆಯಂಚಿನ ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆಯ ಎರಡು ಪ್ರತ್ಯೇಕ ಸಸ್ಯಪಾಲನಾ ಕೇಂದ್ರಗಳಿದ್ದು, ಇಲ್ಲಿನ ಅ ಧಿಕಾರಿಗಳು, ಸಿಬ್ಬಂದಿ ವರ್ಗ, ದಿನಗೂಲಿ ಕೆಲಸಗಾರರು ಸಸಿಗಳ ಪಾಲನೆ-ಪೋಷಣೆ ಮೂಲಕ ಹಸಿರೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಇದರ ಫಲವಾಗಿ ಸಾಮಾಜಿಕ ಅರಣ್ಯ ವಲಯ ವಿಭಾಗದಿಂದ 1,31,732 ಸಸಿಗಳು ಮತ್ತು ಪ್ರಾದೇಶಿಕ ವಲಯದಿಂದ 1,18,981 ಸಸಿಗಳು ಸಿದ್ಧಗೊಂಡಿವೆ.
ವಿವಿಧ ಜಾತಿಯ ಸಸಿಗಳು: ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲಿ ರೈತರಿಗಾಗಿ,ರಸ್ತೆಬದಿ, ಶಾಲಾ-ಕಾಲೇಜು ಮೈದಾನಗಳಲ್ಲಿ ನೆಡಲು ಸಸಿಗಳು ಲಭ್ಯವಿವೆ. ಬೇವು, ತಪ್ಪಸಿ, ಹಲಗಲ, ಗುಲ್ಮೊಹರ್, ಅಶೋಕ, ಹುಣಸಿ, ಮಹಾಗನಿ, ಶ್ರೀಗಂಧ, ಕಾಡು ಬಾದಾಮಿ, ಬಂಗಾಳಿ, ಕರಿಬೇವು, ನೆಲ್ಲಿ, ಸಾಗವಾನಿ, ನುಗ್ಗಿ, ರೆಂಟ್ರಿ, ಇಲಾತಿ ಹುಣಸಿ, ಬನ್ನಿ, ಪೇರಲ, ಮಾವು ಇತರೆ ಸಸಿಗಳಿವೆ. ಈಗಾಗಲೇ ರೈತರು, ಸಾರ್ವಜನಿಕರು, ಸರ್ಕಾರಿ ಇಲಾಖೆಯವರು, ಗ್ರಾಪಂ-ತಾಪಂ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಇಲ್ಲಿಂದ ಉಚಿತವಾಗಿ ಸಸಿ ಪಡೆದು ನೆಟ್ಟಿರುವ ಮತ್ತು ನೆಡುತ್ತಿರುವ ಕಾರ್ಯಗಳು ಪ್ರಗತಿ ಹಂತದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ