ಶಿರಹಟ್ಟಿ:ಭಕ್ತರ ಕಾಮಧೇನು ಶ್ರೀಮಂತಗಡ ಹೊಳಲಮದೇವಿ ಜಾತ್ರೋತ್ಸವ

ಮಹಿಷಾಸುರನನ್ನು ತ್ರಿಶೂಲದಿಂದ ಸಂಹಾರ ಮಾಡುತ್ತಿರುವ ಸಿಂಹವಾಹಿನಿಯಾದ ದಿವ್ಯಮೂರ್ತಿಯಿದೆ.

Team Udayavani, Feb 4, 2023, 2:31 PM IST

ಶಿರಹಟ್ಟಿ:ಭಕ್ತರ ಕಾಮಧೇನು ಶ್ರೀಮಂತಗಡ ಹೊಳಲಮದೇವಿ ಜಾತ್ರೋತ್ಸವ

ಶಿರಹಟ್ಟಿ: ತಾಲೂಕಿನ ಶ್ರೀಮಂತಗಡ ಶ್ರೀ ಹೊಳಲಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.5ರ ರವಿವಾರ ಭಾರತ ಹುಣ್ಣಿವೆ ದಿನ ಮಹಾರಥೋತ್ಸವ ಮತ್ತು ಫೆ.6 ರ ಸೋಮವಾರ ಸಂಜೆ 5ಗಂಟೆಗೆ ಕಡುಬಿನ ಕಾಳಗ ಜರುಗಲಿದೆ.

ರಾಜ್ಯದ ಇತಿಹಾಸದ ಪುಟಗಳಲ್ಲಿ ಶ್ರೀಮಂತಗಡ ಶ್ರೀ ಹೊಳಲಮ್ಮದೇವಿ ವಿಜೃಂಭಿಸಿದ ಮಾಹಿತಿ ಸ್ಪಲ್ಪ ಮಟ್ಟಿಗೆ ಕಾಣಸಿಗುತ್ತಿದೆ. ತನ್ನದೇ ಆದ ಭವ್ಯ ಪರಂಪರೆ ಹೊಂದಿರುವ ನಾಡು ಶ್ರೀಮಂತಗಡ. ಅನೇಕ ಮಹತ್ವದ ಇತಿಹಾಸಗಳು ಬೆಳಕಿಗೆ ಬಾರದೇ ಕಾಲಗರ್ಭದಲ್ಲಿ ಹೂತು ಹೋಗಿವೆ. ಅದರಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳದ ಕ್ಷೇತ್ರ ಹೊಳಲಮ್ಮನ ಗುಡ್ಡವೂ ಒಂದು.

ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ಧಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ. ಇಂತಹ ಮಹತ್ವದ ಇತಿಹಾಸಗಳನ್ನು ಹುಡುಕಿ ಬೆಳಕಿಗೆ ತರುವ ಪ್ರಯತ್ನವನ್ನು ಪ್ರಾಚ್ಯ ಇಲಾಖೆ ಮಾಡುತ್ತಿದೆ. ಅದರೂ ಸಾಕಷ್ಟು ಬೆಳವಣಿಗೆಯಾಗುತ್ತಿದೆ. ಸರಕಾರದ ಪ್ರತಿನಿಧಿಗಳು ಇಂತಹ ಐತಿಹಾಸಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕಾಗಿದೆ ಎಂಬ ಮಾತುಗಳು ಜನರಿಂದ ಕೇಳಿಬರುತ್ತಿವೆ.

ಕೋಟೆ ಸ್ಥಾಪನೆ: ಶ್ರೀಮಂತಗಡದಲ್ಲಿ ಸುಮಾರು 500 ವರ್ಷಗಳ ಹಿಂದೆ 25ಎಕರೆಯಲ್ಲಿ ಕೋಟೆ ಕಟ್ಟಿರುವುದಾಗಿ ಇತಿಹಾಸದಿಂದ ತಿಳಿದುಬರುತ್ತದೆ. ಸದ್ಯ ಸಂಬಂಧಪಟ್ಟ ಇಲಾಖೆಯವರು ಕೋಟೆಯ ಬಗ್ಗೆ ಗಮನ ಹರಿಸಿ ಅಭಿವೃದ್ಧಿ ಮಾಡುತ್ತಿದ್ದಾರೆ.

ಛತ್ರಪತಿ ಶಿವಾಜಿಗೆ ಖಡ್ಗ ಧಾರಣೆ: ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ಧಾರಣೆ ಮಾಡಿರುವ ಚಿತ್ರ ದೇವಸ್ಥಾನದ ಮಹಾದ್ವಾರದಲ್ಲಿ ವಿಜೃಂಭಿಸುತ್ತದೆ.

ಶ್ರೀಮಂತಗಡ ಆಳಿದ ಅರಸರು: ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್‌ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

ಗರ್ಭಗುಡಿಯಲ್ಲಿ ದೇವಿ ವೈಭವ!: ಗರ್ಭಗುಡಿಯೊಳಗೆ ಪ್ರವೇಶಿಸಿದಾಗ ಹೊಳಲಮ್ಮದೇವಿಯನ್ನು ಕಣ್ತುಂಬ ನೋಡಿದಾಗ ಕಪ್ಪು ದಿವ್ಯ ಏಕಶಿಲೆಯಲ್ಲಿ ಶೋಭಿಸುತ್ತಿರುವ ಹೊಳಲಮ್ಮನದು ಚಾಮುಂಡಿ ಅವತಾರವಾಗಿದೆ. ಅಷ್ಟ ಭುಜಗಳನ್ನು ಹೊಂದಿದ್ದು, ಶಂಖು, ಬಿಲ್ಲು, ದಿವ್ಯಾಸ್ತ್ರ, ತ್ರಿಶೂಲ, ಚಕ್ರ, ಗಧೆ, ಖಡ್ಗ, ಒಂದು ಕೈಯಲ್ಲಿ ರಾಕ್ಷಸನ ಚೆಂಡನ್ನು ಹಿಡಿದು ಮಹಿಷಾಸುರ ಮರ್ದಿನಿ ಅವತಾರದಲ್ಲಿದ್ದಾಳೆ. ಮಹಿಷಾಸುರನನ್ನು ತ್ರಿಶೂಲದಿಂದ ಸಂಹಾರ ಮಾಡುತ್ತಿರುವ ಸಿಂಹವಾಹಿನಿಯಾದ ದಿವ್ಯಮೂರ್ತಿಯಿದೆ.

ಭಕ್ತರಲ್ಲಿ ಭಕ್ತಿ ರಸವನ್ನುಂಟು ಮಾಡುತ್ತದೆ. ಹೊಳಲಮ್ಮನ ದರ್ಶನದಿಂದ ಮಾತ್ರ ಮನಃಶಾಂತಿ ನೆಲೆಸುತ್ತದೆ. ಇಂತಹ ಪವಿತ್ರ ಸ್ಥಳದಲ್ಲಿ ಹೊಳಲಮ್ಮ ದೇವಿ ನೆಲೆನಿಂತು ಭಕ್ತರ ಬಯಕೆಗಳನ್ನು ಈಡೇರಿಸುವ ಕಾಮಧೇನು ಕಲ್ಪವೃಕ್ಷವಾಗಿದ್ದಾಳೆ. ದೇವಸ್ಥಾನದ ಸುತ್ತಮುತ್ತಲೂ ಕರಡಿಗುಡ್ಡ, ಸಂತ ರಾಮದಾಸರ ಮಂದಿರ, ಬಟ್ಟಲು ಬಾವಿ, ಬನ್ನಿ ಮುಡಿಯುವ ಸ್ಥಳ, ಬರಮದೇವರು, ದ್ವಾರಬಾಗಿಲು, ಮದ್ದಿನ ಹೊಂಡ, ಮುಸುರೆ ಹೊಂಡ, ಸ್ನಾನದ ಹೊಂಡ, ಆನೆ ಹೆಜ್ಜೆ ಹೊಂಡ, ಆನೆ ಹೊಂಡ, ಈಶ್ವರ ದೇವಸ್ಥಾನ, ರೇಣುಕಾಚಾರ್ಯ ದೇವಸ್ಥಾನ, ಮಾತಂಗೆಮ್ಮನ ಗುಡಿ, ಸಿಡಿ ಆಡುವ ಕಟ್ಟಿ, ಯೋಗ ಸಿದ್ದಿ ಸ್ಥಳ ಹೀಗೆ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ.

ಇಂತಹ ಇತಿಹಾಸ, ಪರಂಪರೆಯ ಜಾಗೃತ ಸ್ಥಳವಾಗಿರುವ ಶ್ರೀಮಂತಗಡದ ಆದಿಶಕ್ತಿ ಜಗನ್ಮಾತೆ ಶ್ರೀ ಹೊಳಲಮ್ಮದೇವಿ ಜಾತ್ರಾ ಮಹೋತ್ಸವ, ಮಹಾರಥೋತ್ಸವ ಫೆ.5ರಂದು ಅಪಾರ ಭಕ್ತಸಾಗರದ ಮಧ್ಯೆ ಜರುಗಲಿದೆ. ಫೆ. 6 ರಂದು ಕಡುಬಿನ ಕಾಳಗ ಬಹು ವಿಜೃಂಭಣೆಯಿಂದ ಜರುಗಲಿದೆ.

*ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.