ಬರಿದಾಯ್ತು ವಡವಿ  ಹೊಸೂರ ಕೆರೆ  


Team Udayavani, Mar 3, 2019, 10:27 AM IST

3-march-16.jpg

ಶಿರಹಟ್ಟಿ: ಮಳೆರಾಯನ ಅವಕೃಪೆ ಹಾಗೂ ಅಧಿಕಾರಿಗಳ ನಿರ್ಲಕ್ಷéಕ್ಕೆ ಒಳಗಾಗಿರುವ ತಾಲೂಕಿನ ವಡವಿ-ಹೊಸೂರ ಕೆರೆ ಸಂಪೂರ್ಣ ಬತ್ತಿದೆ. ಅಧಿಕಾರಿಗಳು ಕೆರೆ ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಸಾರ್ವಜನಿಕರ ಅನುಕೂಲ ಮತ್ತು ಅಂತರ್ಜಲ ಹೆಚ್ಚಿಸುವುದಕ್ಕಾಗಿ ಪೂರ್ವಜರು ಕೆರೆ ನಿರ್ಮಿಸಿದ್ದರು. ಇದರಿಂದಾಗಿ ಸುತ್ತಮುತ್ತಲಿನ ಭಾಗದಲ್ಲಿ ಯಾವುದೇ ನೀರಿನ ತೊಂದರೆ ಇರಲಿಲ್ಲ. ಆದರೆ ಈಗ ಬೋರ್‌ ವೆಲ್‌ಗ‌ಳು ಸಂಪೂರ್ಣ ಕೈಕೊಟ್ಟಿವೆ. ಇದರಿಂದ ಗ್ರಾಮದ ಜನ-ಜಾನುವಾರುಗಳು ನೀರಿಗಾಗಿ ಪರದಾಡುವಂತಾಗಿದೆ.

40 ವರ್ಷಗಳಿಂದ ನಿರ್ವಹಣೆ ಇಲ್ಲ: ಸುಮಾರು 180 ಎಕರೆ ವಿಶಾಲವಾದ ಪ್ರದೇಶದಲ್ಲಿ ನಿರ್ಮಾಣವಾಗಿರುವ ಕೆರೆ ಸದ್ಯ 100 ಎಕರೆ ಪ್ರದೇಶವೂ ಇಲ್ಲದಾಗಿದೆ. ಕೆರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡಿದ್ದರಿಂದ ಕೆರೆಗೆ ಭೂಮಿ
ಇಲ್ಲದಾಗಿದೆ. ಈ ಕೆರೆಯಿಂದ ವಡವಿ-ಹೊಸೂರ ಗ್ರಾಮ ಸೇರಿದಂತೆ ಬನ್ನಿಕೊಪ್ಪ, ತಾರೀಕೊಪ್ಪ, ಮಲ್ಲಿಕಾರ್ಜುನಪುರ, ಶಿವಾಜಿನಗರ ತಾಂಡಾ, ಸುಗನಹಳ್ಳಿ, ಅಲಗಿಲವಾಡ, ತಂಗೋಡ ಸೇರಿ ಒಟ್ಟು 3,500 ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸುವ ಅಂದಾಜು ಇದೆ. ಇದರಿಂದ ಗ್ರಾಮದ ಕೆರೆಗಳ ಬೋರವೆಲ್‌ಗ‌ಳಿಗೆ ರಿಚಾರ್ಚ್‌ ಆಗುವ ಸಾಧ್ಯತೆ ಇದ್ದರೂ ಈ ಕೆರೆ ಸಂಪೂರ್ಣವಾಗಿ ನಿರ್ಲಕ್ಷಕ್ಕೆ ಒಳಗಾಗಿದ್ದರಿಂದ ಈ ಭಾಗದ ಜನತೆ ಮಳೆಯನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಕಳೆದ 40 ವರ್ಷಗಳಿಂದ ಕೆರೆಯ ನಿರ್ವಹಣೆ ಇಲ್ಲದೇ ಕೆರೆಯ ತುಂಬೆಲ್ಲ ಮುಳ್ಳಿನ ಕಂಟಿಗಳು ಬೆಳೆದು ನಿಂತಿವೆ.

ಕಾಡಿನಲ್ಲಿ ನೀರಿನ ಕೊರತೆ: ಅಡವಿಗೆ ಹೊಂದಿಕೊಂಡಿರುವ ಕೆರೆ ಸಂಪೂರ್ಣವಾಗಿ ಬತ್ತಿ ಹೋಗಿದ್ದರಿಂದ ಕೆರೆಯ ಸುತ್ತಮುತ್ತ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗಿದೆ. ಜಾನುವಾರು ಮೇಯಲು ಅಡವಿ ಹೋದರೆ ಅಲ್ಲಿ ಒಂದು ಹನಿ ನೀರು ದೊರಕುವುದಿಲ್ಲ. ಆದ್ದರಿಂದ ಗ್ರಾಮದಲ್ಲಿ ಕುಡಿಯುವ ನೀರನ್ನು ಜಾನುವಾರುಗಳಿಗೂ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ನದಿ ನೀರಿನಿಂದ ಕೆರೆ ತುಂಬಿಸುವುದು ಯಾವಾಗ?
ಗ್ರಾಮದಿಂದ ಕೇವಲ 8 ಕಿಮೀ ದೂರದಲ್ಲಿರುವ ತುಂಗಭದ್ರಾ ನದಿ ನೀರನ್ನು ಕೆರೆಗೆ ತುಂಬಿಸುವ ಕಾರ್ಯ ಆರಂಭವಾಗಿದ್ದರೂ ಈ ಕೆರೆಗೆ ನೀರು ಬರುತ್ತದೆ ಎನ್ನುವ ವಿಶ್ವಾಸವಿಲ್ಲ. ಕೆರೆಗೆ ನೀರು ತುಂಬಿಸುವ ಯೋಜನೆಗ ಭೂಮಿಪೂಜೆ ನೆರವೇರಿಸಿ ಎಂಟು ತಿಂಗಳು ಗತಿಸಿದ್ದರೂ ಈವರೆಗೆ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಜರುಗಿಲ್ಲ. ಸ್ವಲ್ಪ ಮಟ್ಟಿಗೆ ನರೇಗಾ ಯೋಜನೆ ಮೂಲಕ ಅಭಿವೃದ್ಧಿಪಡಿಸಿದ್ದರೂ ಕೆರೆ ಬಹಳಷ್ಟು ದೊಡ್ಡದಾಗಿರುವುದರಿಂದ ಪೂರ್ಣ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿರುವುದು ಅವಶ್ಯವಿದೆ.

ಗ್ರಾಮದ ಕೆರೆ 180 ಎಕರೆ ಪ್ರದೇಶವಿದೆ ಎನ್ನುವ ದಾಖಲೆಗಳು ಇವೆ. ಸರ್ವೇ ಮಾಡುವುದಕ್ಕಾಗಿ ಅಧಿಕಾರಿಗಳು ಬಂದಿದ್ದರೂ ಪೂರ್ಣ ಪ್ರಮಾಣ ಸರ್ವೇ ಮಾಡದೇ ಸರ್ವೇ ಕಾರ್ಯ ಹಾಗೆಯೇ ಉಳಿದಿದೆ. ತುಂಗಭದ್ರಾ ನದಿಯಿಂದ 140 ಕೋಟಿ ರೂ. ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಮೊದಲ ಕೆರೆ ಇದಾಗಿದೆ. ಆದರೆ ಕೆರೆ ಸಂಪೂರ್ಣವಾಗಿ ಬತ್ತಿದೆ. ಈ ಕೆರೆಯ ಮೇರೆಯನ್ನು ಗುರುತಿಸುವ ಮೂಲಕ ಹೂಳೆತ್ತುವ ಕಾರ್ಯ ಆಗಬೇಕಿದೆ.
 ರಾಜೀವ ರೆಡ್ಡಿ, ಯುವ ಮುಖಂಡ 

ಕೆರೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ಸಂಪೂರ್ಣವಾಗಿ ಕೆರೆಯನ್ನು ಸರ್ವೇ ಅಧಿಕಾರಿಗಳಿಗೆ ಸರ್ವೇ ಮಾಡಿಸಿ, ಕೆರೆಯ
ಪ್ರದೇಶ ಒತ್ತುವರಿಯಾಗಿದ್ದರೆ ಖಂಡಿತವಾಗಿಯೂ ಅದನ್ನು ಮರಳಿಸಿಕೊಂಡು ಕೆರೆಯ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು. 
. ಯಲ್ಲಪ್ಪ ಗೋಣೆಣ್ಣವರ, ತಹಶೀಲ್ದಾರ್‌

ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.