ಮಠಕ್ಕೆ ರಾಜೀನಾಮೆ ಕೊಟ್ಟು ಶಕ್ತಿ ತೋರಿಸಿ


Team Udayavani, Dec 25, 2017, 6:20 AM IST

Dingaleshwar-Swamiji.jpg

ಗದಗ: ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲ ಮಠಾಧೀಶರೇ ಜನರ, ಭಕ್ತರ ಹಾದಿ ತಪ್ಪಿಸುತ್ತಿದ್ದಾರೆ. ಮಠದಲ್ಲೂ ರಾಜಕಾರಣ ಶುರುವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅಂಥ ಮಠಾಧೀಶರು ಮಠದ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿ ಧರ್ಮದ ತಾಕತ್‌ ತೋರಿಸಲಿ ನೋಡೋಣ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಶ್ರೀಗಳು ಸವಾಲು ಹಾಕಿದರು.

ನಗರದಲ್ಲಿ ಭಾನುವಾರ ನಡೆದ ವೀರಶೈವ-ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ನಿಮ್ಮ ಹಣೆಬಹರಕ್ಕೆ ಕೊಪ್ಪಳದಲ್ಲಿ 500 ಜನರನ್ನು ಸೇರಿಸಲಾಗಲಿಲ್ಲ. ಕೆಲವರು ಹಾನಗಲ್‌ ಕುಮಾರಸ್ವಾಮಿಯವರನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ. ಮುಂದೊಂದು ದಿನ ಜನ ನಿಮ್ಮನ್ನ ನಾಯಿಗೆ ಹೊಡದಂಗ ಹೊಡಿತಾರ ಎಂದು ಹೇಳುತ್ತಿದ್ದಾರೆ. ನಾಯಿ ನಿಯತ್ತಿನ ಪ್ರಾಣಿ. ನೀವು ಅದಕ್ಕಿಂತಲೂ ಕಡೆ ಎಂದು ಕತ್ತೆಗೆ ಹೋಲಿಸಿದರು.

ಪ್ರತ್ಯೇಕ ಧರ್ಮದ ಬಣದಲ್ಲಿ ಕಾಣಿಸಿಕೊಂಡಿರುವ ಕೆಲ ಮಠಾಧೀಶರಿಗೆ ಮಠದಿಂದ ಹೊರಗೆ ಹಾಕುವ ಬೆದರಿಕೆ ರಾಜಕಾರಣಿಗಳಿಂದ ಇದೆ. ಅದಕ್ಕೆ ಅವರೊಂದಿಗೆ ಗುರುತಿಸಿಕೊಂಡಿದ್ದೇವೆ ಎಂದು ತಮ್ಮ ಬಳಿ ಹೇಳಿಕೊಂಡಿದ್ದಾರೆ. ಅವರನ್ನು ಎದುರಿಸಿ ಬಂದರೆ ನಾವು
ನಮ್ಮ ಮಠಗಳನ್ನು ನಿಮಗೆ ಬಿಟ್ಟು ಕೊಡುತ್ತೇವೆ ಬನ್ನಿ ಎಂದು ಆಹ್ವಾನಿಸಿದರು.

ಲಿಂಗಾಯತ ಅಂತ ಹೊರಟವರೆಲ್ಲ ವೀರಶೈವ-ಲಿಂಗಾಯತ ಧರ್ಮಕ್ಕೆ ಈ ಹಿಂದೆ ಸಹಿ ಹಾಕಿದವರು,ಕೇಳಿದರೆ ಆಗಿನ್ನೂ ನಮಗೆ ತಿಳಿವಳಿಕೆ ಇರಲಿಲ್ಲ. ಈಗ ಬಂದಿದೆ ಎನ್ನುತ್ತಾರೆ. ಮುಂದೊಂದು ದಿನ ಆವತ್ತು ತಿಳಿವಳಿಕೆ ಇರಲಿಲ್ಲ. ಅದಕ್ಕೆ ಲಿಂಗಾಯತ ಪ್ರತ್ಯೇಕ ಧರ್ಮ ಅಂತ ಹೋಗಿದ್ದೆವು ಎನ್ನುವ ಕಾಲ ಬರುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ ಕುರಿತು ವ್ಯಂಗ್ಯವಾಡಿದರು.

ಧರ್ಮ ಕಲಹಕ್ಕೆ ರಾಜನೇ ಕಾರಣ: ಸಿದ್ದಲಿಂಗ ಸ್ವಾಮಿ
ಗದಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲ ನಾಯಿಗಳನ್ನ ಛೂ ಬಿಟ್ಟು ಕಚ್ಚಿಸುವ
ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಕಲಬುರಗಿ ಆಂದೋಲದ ಸಿದ್ದಲಿಂಗ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದರು. 

ವೀರಶೈವ-ಲಿಂಗಾಯತ ಧರ್ಮ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು,ಬೊಗಳುವ ನಾಯಿಗಳಿಗೆ ನಾವು ಬೆದರಲ್ಲ. ಅಂಥ ಈಡಿಯಟ್ಸ್‌ಗಳಿಂದ ಧರ್ಮ ಒಡೆಯಲು ಸಾಧ್ಯವಿಲ್ಲ ಎಂದರು. ರಾಜ್ಯದಲ್ಲಿ ತಲೆದೋರಿರುವ ಈ ಧರ್ಮ ಕಲಹಕ್ಕೆ ರಾಜನೇ ಕಾರಣ.

ಮುಖ್ಯಮಂತ್ರಿಗಳೇ ಮುಂದಾಗಿ ಕೆಲವರ ಮೂಲಕ ಧರ್ಮ ಇಬ್ಭಾಗದ ಕೆಲಸ ಮಾಡುತ್ತಿದ್ದಾರೆ. ಧರ್ಮ ವಿಭಜನೆ ಮಾಡಿ
ಮುಂಬರುವ ಚುನಾವಣೆಯಲ್ಲಿ ಮತ ಗಳಿಸುವ ಸಂಚು ರೂಪಿಸಿದ್ದಾರೆ. ನಿಮ್ಮಪ್ಪನಾಣೆಗೂ ಮುಂದೆ ನೀವು ಅಧಿಕಾರಕ್ಕೆ ಬರಲ್ಲ ಎಂದು ಭಾವಾವೇಶಕ್ಕೊಳಗಾದರು. ವೀರಶೈವ ಲಿಂಗಾಯತ ಪ್ರತ್ಯೇಕವಲ್ಲ ಎಂದ ವಿಜಯಪುರದ ಪ್ರಕಾಶ ಸ್ವಾಮಿಗಳಿಗೆ ಬೆದರಿಕೆ ಹಾಕುವ ಹೀನ ಕೃತ್ಯ ಎಸಗಿದ ಸಚಿವ ಎಂ.ಬಿ. ಪಾಟೀಲ ಯಾರು,ಎಂಥವರು ಎಂಬುದು ಜನರಿಗೆ ಗೊತ್ತಿದೆ. ಸಚಿವರು ಉದ್ಧಟತನ ತೋರುವ ಮೂಲಕ ಸ್ವಾಮಿಗಳಿಗೆ, ಸಮಾಜಕ್ಕೆ ಮೋಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅದರ ಫಲ ಉಣ್ಣುತ್ತಾರೆ ಎಂದು ಸೂಕ್ಷ್ಮವಾಗಿ ಹೇಳಿದರು. 

ಗದಗನಲ್ಲಿ ರಾವಣರಂಥ ರಾಕ್ಷಸರಿದ್ದಾರೆ. ಕೋಮು ಸೌಹಾರ್ದತೆ ಹೆಸರಿನಲ್ಲಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಅದು ಹೇಗೆ ಪ್ರಶಸ್ತಿ ಬಂತು ಎಂಬುದು ಅವರಿಗೆ ಗೊತ್ತು ಎಂದು ಡಾ|ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳನ್ನು ಟೀಕಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.