ಸಿದ್ಧರಾಮ ಶ್ರೀಗಳಿಂದ ಪೀಠಾರೋಹಣ


Team Udayavani, Oct 30, 2018, 6:00 AM IST

v-23.jpg

ಗದಗ: ಬೆಳಗಾವಿ ಜಿಲ್ಲೆ ನಾಗನೂರು ರುದ್ರಾಕ್ಷಿಮಠದ ಡಾ| ಸಿದ್ಧರಾಮ ಸ್ವಾಮೀಜಿ ಡಂಬಳ-ಗದಗ ಜ| ತೋಂಟದಾರ್ಯ ಸಂಸ್ಥಾನಮಠದ 20ನೇ ಪೀಠಾಧಿಪತಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು. ಹುಬ್ಬಳ್ಳಿ ಮೂರು ಸಾವಿರಮಠದ ಜಗದ್ಗುರು ಗುರುಸಿದ್ಧ ರಾಜಯೋಗಿಂದ್ರ ಸ್ವಾಮಿಗಳ ಸಾನ್ನಿಧ್ಯ, ನಿಡಸೋಸಿ ಸಿದಟಛಿಸಂಸ್ಥಾನಮಠದ ಜಗದ್ಗುರು ಪಂಚಮ
ಶಿವಲಿಂಗೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಬೆಳಗ್ಗೆ 6:30ರಿಂದ 10ರವರೆಗೆ ಧಾರ್ಮಿಕ ವಿಧಿ ವಿಧಾನ ನೆರವೇರಿತು. ಜಗದ್ಗುರು ಗುರುಸಿದಟಛಿ ರಾಜಯೋಗಿಂದ್ರ ಸ್ವಾಮೀಜಿ ತೋಂಟದಾರ್ಯಮಠದ ಪೂಜಾ ಮಂದಿರದಲ್ಲಿ ನೂತನ ಶ್ರೀಗಳಿಗೆ ಲಿಂಗಾಂಗ ಸಂಬಂಧ, ಮಂತ್ರೋಪದೇಶ, ಪ್ರಣವ ಪಂಚಾಕ್ಷರಿ ಮಂತ್ರ ಬೋಧಿಸಿದರು. ಷೋಡಷೋಪಚಾರಗಳಿಂದ ಲಿಂಗ ಪೂಜಿಸಿ, ಕರ್ಣಪ್ರಸಾದ ನೀಡಿದರು. ಬಳಿಕ ಉಭಯ ಜಗದ್ಗುರುಗಳು ಒಟ್ಟಾಗಿ ಪ್ರಸಾದ ಸ್ವೀಕರಿಸಿದರು.

ಬಳಿಕ ಶ್ರೀಮಠದ ಬೆಳ್ಳಿ ಸಿಂಹಾಸನ ಮೇಲೆ ಆಸೀನರಾದ ನೂತನ ಜಗದ್ಗುರುಗಳಿಗೆ ಬಿಲ್ವಪತ್ರೆ ಹಾಗೂ ಪುಷ್ಪವೃಷ್ಟಿಗೈಯುವ ಮೂಲಕ ಪಾದಪೂಜೆ ನೆರವೇರಿಸಲಾಯಿತು. ಕೆಳದಿ ಅರಸರು ಶ್ರೀಮಠಕ್ಕೆ ಕಾಣಿಕೆ ರೂಪದಲ್ಲಿ ಅರ್ಪಿಸಿದ್ದ ಚಿನ್ನದ ಪಾದುಕೆಗಳನ್ನು ತೊಡಿಸಿ, ಕೈಗೆ ಬಂಗಾರದ ದಂಡ ನೀಡಿ, ಪೂಜಾ ಮಂದಿರದಿಂದ ಶ್ರೀಮಠದ ಆವರಣದಲ್ಲಿ ವ್ಯವಸ್ಥೆ ಮಾಡಿದ್ದ ವೇದಿಕೆ ಕಾರ್ಯಕ್ರಮಕ್ಕೆ
ಮೆರವಣಿಗೆಯೊಂದಿಗೆ ಕರೆ ತರಲಾಯಿತು.

ಈ ವೇಳೆ ಸಕಲ ಮಂಗಳವಾದ್ಯ ವೈಭವಗಳೊಂದಿಗೆ ಬಸವಾದಿ ಶರಣರ ವಚನಗಳ ಕಟ್ಟುಗಳನ್ನಿಟ್ಟು ಅಡ್ಡಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ಶ್ರೀಮಠದ ಒಳಾಂಗಣದಲ್ಲಿರುವ ಲಿಂ| ತೋಂಟದಾರ್ಯ ಸ್ವಾಮಿಗಳ ಕತೃì ಗದ್ದುಗೆ ಸುತ್ತ ಐದು ಬಾರಿ ಪ್ರದಕ್ಷಿಣೆ ಹಾಕಲಾಯಿತು. ನೂತನ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ, ಲಿಂ| ತೋಂಟದ ಸಿದಟಛಿಲಿಂಗ ಸ್ವಾಮಿಗಳ ಕ್ರಿಯಾ ಸಮಾಧಿಗೆ ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು. 

ಬಳಿಕ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಜಗದ್ಗುರು ಡಾ|ತೋಂಟದ ಸಿದಟಛಿರಾಮ ಸ್ವಾಮಿಗಳು ಜಗದ್ಗುರು ಗುರುಸಿದಟಛಿ ರಾಜಯೋಗಿಂದ್ರ ಸ್ವಾಮಿಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ನಂತರ ಹುಬ್ಬಳ್ಳಿ ಜಗದ್ಗುರುಗಳು ನೂತನ ಜಗದ್ಗುರುಗಳನ್ನು ಪೀಠಾರೋಹಣ ಮಾಡಿಸಿ ಸಾಷ್ಟಾಂಗ ನಮಸ್ಕಾರ ಮಾಡಿದರು. ನಂತರ ಪರಸ್ಪರ ಹಾರ ಬದಲಾಯಿಸಿಕೊಂಡು “ಜಗದ್ಗುರುಗಳೆಲ್ಲರೂ ಸಮಾನರು’ ಎಂಬ ಸಂದೇಶ ಸಾರಿದರು.

ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಮುಂಡರಗಿ ತೋಂಟದಾರ್ಯ ಶಾಖಾಮಠದ ಶ್ರೀ ನಿಜಗುಣ ಪ್ರಭು ತೋಂಟದಾರ್ಯ ಸ್ವಾಮೀಜಿ, ಆಡಿ ಹಂದಿಗುಂದ ಸಿದ್ದೇಶ್ವರಮಠದ ಶ್ರೀ ಶಿವಾನಂದ ಸ್ವಾಮೀಜಿ, ನವಲಗುಂದ ಗವಿಮಠದ ಶ್ರೀ
ಬಸವಲಿಂಗ ಸ್ವಾಮೀಜಿ, ಅಥಣಿ ಮೋಟಗಿಮಠದ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ, ಕಡೋಲಿ ವಿರಕ್ತಮಠದ ಶ್ರೀ ಗುರುಬಸವಲಿಂಗ ಸ್ವಾಮೀಜಿ ಸೇರಿದಂತೆ ಹರು-ಗುರು ಚರಮೂರ್ತಿಗಳು ಸಮ್ಮುಖ ವಹಿಸಿದ್ದರು.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಸಂಸದ ಶಿವಕುಮಾರ ಉದಾಸಿ, ಶಾಸಕ ಎಚ್‌.ಕೆ. ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಸೇರಿದಂತೆ ಹಲವು ಗಣ್ಯರು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. “ಡಾ.ಸಿದ್ಧಲಿಂಗ ಸ್ವಾಮಿಗಳ ಆಶಯದಂತೆ ನಡೆಯುವೆ’ ಲಿಂ. ತೋಂಟದ ಸಿದಟಛಿಲಿಂಗ ಸ್ವಾಮಿಗಳ ಆಶಯದಂತೆ ಎಲ್ಲ ಕಾರ್ಯಕ್ರಮಗಳನ್ನು ಯಥಾ ಪ್ರಕಾರವಾಗಿ ಮುಂದುವರಿಸಿಕೊಂಡು ಹೋಗುವುದಾಗಿ ಜಗದ್ಗುರು ತೋಂಟದ ಸಿದಟಛಿರಾಮ ಸ್ವಾಮೀಜಿ ಹೇಳಿದರು. ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದ ಅವರು, ಲಿಂ. ತೋಂಟದ ಸಿದಟಛಿಲಿಂಗ ಸ್ವಾಮಿಗಳು ಬಸವಣ್ಣನ ವಿಚಾರಧಾರೆಗಳಂತೆಯೇ ಬದುಕಿದ್ದರು. ಸಮಾಜದ ಅನಿಷ್ಟ, ಅಸಮಾನತೆ ತೊಡೆದು ಹಾಕಿ, ಜನರಲ್ಲಿ
ವೈಚಾರಿಕ ಪ್ರಜ್ಞೆ ಮೂಡಿಸಿದ್ದರು. ಸಾಹಿತ್ಯ, ಪರಿಸರ ಸಂರಕ್ಷಣೆಯಲ್ಲಿ ಮಹಾಕ್ರಾಂತಿಯನ್ನೇ ಮಾಡಿದ್ದರು. ವ್ಯಸನಮುಕ್ತ ಸಮಾಜದ ಕಸನು ಅವರದ್ದಾಗಿತ್ತು ಎಂದರು.

ನೂರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಡ ಮಕ್ಕಳಿಗೆ ಜ್ಞಾನದಾಸೋಹ ನೀಡಿದ್ದರು. ಕೃಷಿ, ಸಾಮಾಜಿಕ, ಪರಿಸರ ಸಂರಕ್ಷಣೆ ಕುರಿತು ಅವರ ಹೋರಾಟ ಅವಿಸ್ಮರಣೀಯ. ಹೀಗಾಗಿ ಅವರನ್ನು ಜನಸಾಮಾನ್ಯರ ಸ್ವಾಮೀಜಿ ಎಂದು ಕರೆಯಲಾಗುತ್ತದೆ. ಲಿಂ. ತೋಂಟದ ಸಿದಟಛಿಲಿಂಗ ಶ್ರೀಗಳು ಕಳೆದ 45 ವರ್ಷಗಳ ಕಾಲ ಶ್ರೀಮಠವನ್ನು ಮುನ್ನಡೆಸಿದ ಪರಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದು. ಶ್ರೀಗಳ ಸಾಧನೆಗೆ ದೇಶವೇ ಬೆರಗಾಗಿತ್ತು ಎಂದು ಹೇಳಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.