ಪದವೀಧರ-ಇಂಜಿನಿಯರ್‌ ಕೈಹಿಡಿದ ರೇಷ್ಮೆ


Team Udayavani, Dec 20, 2019, 4:47 PM IST

gadaga-tdy-2

ನರೇಗಲ್ಲ:  ಕೃಷಿ ಪ್ರಧಾನ ದೇಶ ನಮ್ಮದು. ಆದರೆ ಇತ್ತೀಚಿನ ದಿನಗಳಲ್ಲಿ ಅತಂತ್ರ ಮಳೆಗಾಲ, ಹವಾಮಾನ ವೈಪರೀತ್ಯದಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದ್ದು, ಹೊಟ್ಟೆಗೆ ಹಿಟ್ಟು ಇಲ್ಲದಿರುವ ಪರಿಸ್ಥಿತಿಗಳೂ ಕಣ್ಮುಂದೆ ಇವೆ. ಹೀಗಾಗಿ ಬಹುತೇಕರು ಸರ್ಕಾರಿ ಇಲ್ಲವೇ ಖಾಸಗಿ ನೌಕರಿಯತ್ತ ಮುಖ ಮಾಡುತ್ತಿರುವುದು ಸಾಮಾನ್ಯವಾಗಿದೆ.

ಆದರೆ ಇದಕ್ಕೆ ಸಮೀಪದ ಕೋಚಲಾಪುರ ಗ್ರಾಮದ ಸಹೋದರರು ತದ್ವಿರುದ್ಧವಾಗಿದ್ದಾರೆ. ಸ್ನಾತಕೋತ್ತರ ಪದವೀಧರನಾದ ಪ್ರಶಾಂತ ಹಾಗೂ ಇಂಜಿನಿಯರ್‌ ಮುಗಿಸಿದ ಪ್ರಕಾಶ ತಮ್ಮ ದಾರಿ ಬಿಟ್ಟು ಕೃಷಿ ಕ್ಷೇತ್ರ ಆಯ್ಕೆ ಮಾಡಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ.

ಪ್ರಶಾಂತ ಎಂಬುವರು ಮಾನಸ ಗಂಗೋತ್ರಿ ಯುನಿವರ್ಸಿಟಿಯಲ್ಲಿ ಎಂ.ಎ. ಪದವಿ ಪಡೆದಿದ್ದರು. ಅತಿಥಿ ಉಪನ್ಯಾಸಕರಾಗಿ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಆಲೂರು ವೆಂಕಟರಾಯರು ಐಟಿಐ ತರಬೇತಿ ಕಾಲೇಜಿನಲ್ಲಿ 4 ವರ್ಷ ಸೇವೆ ಸಲ್ಲಿಸಿದ್ದಾರೆ. ಆದರೆ ಸಂಬಳ ಹಾಗೂ ಓಡಾಟ ಸಮಸ್ಯೆಯಿಂದ ವೃತ್ತಿ ತ್ಯಜಿಸಿದರು.

ನಂತರ ದಿನದಲ್ಲಿ ಸಹೋದರ ಪ್ರಕಾಶ ಕೂಡ ಡಿಪ್ಲೋಮಾ ಫಿಟ್ಟರ್‌ ಮುಗಿಸಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡುವ ಸಂದರ್ಭದಲ್ಲಿ ತಾವು ಇದ್ದ ಬಾಡಿಗೆ ಮನೆ ಮಾಲೀಕ ವೆಂಕಟಪ್ಪ ಎಂಬುವರು ಇವರಿಗೆ ರೇಷ್ಮೆ ಕೃಷಿ ಬಗ್ಗೆ ಮಾಹಿತಿ ನೀಡಿ ಪ್ರೇರಣೆ ನೀಡಿದ್ದರು. ನಂತರ ಗ್ರಾಮಕ್ಕೆ ಮರಳಿದ ಪ್ರಶಾಂತ ಅಯ್ಯನಗೌಡ್ರ ವಾಣಿಜ್ಯ ಬೆಳೆಗಳಾದ ಮೆಕ್ಕೆಜೋಳ, ಹತ್ತಿ, ನೀರಾವರಿ ಶೇಂಗಾ ಬೆಳೆಯುತ್ತಿದ್ದರು. ಆದರೆ, ಈ ಬೆಳೆಗಳಲ್ಲಿ ನಿರೀಕ್ಷಿತ ಲಾಭ ಕಾಣದೇ ರೇಷ್ಮೆ ಕೃಷಿ ಅರಸಿದರು.

ರೇಷ್ಮೆಯೊಂದಿಗೆ ತರಕಾರಿ ಬೆಳೆ: ಕೃಷಿ ಮಾಡಲು ಹಿಂದೇಟು ಹಾಕುವ ಇಂದಿನ ಯುವಕರು ಮುಜಗರ ಪಡುವ ಸ್ಥಿತಿಯಲ್ಲಿ ಸಮೀಪದ ಕೋಚಲಾಪುರ ಗ್ರಾಮದ ಪ್ರಶಾಂತ ಹಾಗೂ ಪ್ರಕಾಶ ಅಯ್ಯನಗೌಡ್ರ ಕೃಷಿಯಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಲಾಭದಾಯಕ ಬೆಳೆಯಾದ ರೇಷ್ಮೆ ಕೃಷಿ ಸೇರಿದಂತೆ ತರಕಾರಿ ಬೆಳೆ ಬೆಳೆದು ಕುಟುಂಬ ನಿರ್ವಹಣೆಗೆ ಮುಂದಾಗಿದ್ದಾರೆ.

ನೀರಾವರಿ ಪದ್ಧತಿ: ಸದ್ಯ ಎರಡು ಎಕರೆ ಜಮೀನಿನಲ್ಲಿ ಒಂದು ಕೊಳವೆ ಬಾವಿ ಇದೆ. ಅದರಿಂದ ನಿತ್ಯ ರೇಷ್ಮೆ ಬೆಳೆಗೆ ಹನಿ ನೀರಾವರಿ ಮೂಲಕ ನೀರು ಹಾಯಿಸುತ್ತಾರೆ. ಇದಕ್ಕೆ ಪ್ರತಿಫಲವಾಗಿ ರೇಷ್ಮೆಯಲ್ಲಿ ಯಶಸ್ಸು ಕಾಣಲು ಸಾಧ್ಯವಾಗಿದೆ ಎನ್ನುತ್ತಾರೆ.

ಅಯ್ಯನಗೌಡ್ರ ಸಹೋದರರು. ಹೋಬಳಿ ವ್ಯಾಪ್ತಿಯ ಜಕ್ಕಲಿ, ಯರೇಬೇಲೇರಿ, ಅಬ್ಬಿಗೇರಿ ಗ್ರಾಮಗಳಲ್ಲಿ ರೇಷ್ಮೆ ಬೆಳೆಗಾರರಿದ್ದಾರೆ. ಆದರೆ, ಕಳೆದ ನಾಲ್ಕೈದು ವರ್ಷಗಳಿಂದ ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ತೋಟ ನಿರ್ವಹಣೆ ಮಾಡಲಾರದ ಸ್ಥಿತಿಯಲ್ಲಿ ರೈತರಿದ್ದಾರೆ. ಆದರೆ, ಇವರು ಮಾತ್ರ ವ್ಯವಸ್ಥಿತವಾಗಿ ನೀರು ಬಳಸಿಕೊಂಡು ಲಾಭದಾಯಕ ರೇಷ್ಮೆ ಕೃಷಿ ಮಾಡುತ್ತಿದ್ದಾರೆ.

ರೇಷ್ಮೆ ಪ್ರದೇಶವೆಷ್ಟು?: ಎರಡು ಎಕರೆಯಲ್ಲಿ ರೇಷ್ಮೆ ಬೆಳೆಯುತ್ತಿದ್ದು ಇಡೀ ವರ್ಷ ಬೆಳೆ ಇರುವ ಹಾಗೆ ಎರಡು ಪ್ಲಾಟ್‌ಗಳನ್ನಾಗಿ ಮಾಡಿಕೊಂಡು ಮೂರು ತಿಂಗಳ ಅವಧಿ ಯಲ್ಲಿ ಎರಡು ಬೆಳೆ ಬೆಳೆಯುತ್ತಿದ್ದಾರೆ. ಅಂದರೆ ಪ್ರತಿ ಬೆಳೆ ನಂತರ 15 ದಿನಗಳ ಬಿಡುವು ಬಿಟ್ಟರೆ, ಇಡೀ ವರ್ಷ ಇವರ ತೋಟದಲ್ಲಿ ರೇಷ್ಮೆ ಹುಳುಗಳು ಗೂಡು ಕಟ್ಟುತ್ತಿರುತ್ತವೆ.

ಸುಸಜ್ಜಿತ ಶೆಡ್‌: 1.50 ಲಕ್ಷ ವೆಚ್ಚದಲ್ಲಿ 20ಗಿ30 ಅಳತೆಯಲ್ಲಿ ರೇಷ್ಮೆ ಹುಳುಗಳಿಗಾಗಿ ಸುಸಜ್ಜಿತ ಶೆಡ್‌ ನಿರ್ಮಿಸಲಾಗಿದೆ. ಗಾಳಿ, ಬೆಳಕಿನ ವ್ಯವಸ್ಥೆಯಿದೆ. ಎರಡು ಎಕರೆಯಲ್ಲಿ ರೇಷ್ಮೆ ಬೆಳೆದರೆ, ಶೆಡ್‌ನ‌ಲ್ಲಿ ಹುಳು ಸಾಕಿದ್ದಾರೆ. ರೇಷ್ಮೆ ಗಿಡದ ಸೊಪ್ಪೇ ಹುಳುಗಳಿಗೆ ಆಹಾರ. ಹುಳುಗಳು ಗೂಡು ಕಟ್ಟಿವಿಕೆ ಆರಂಭಿಸಿದ 24 ದಿನಗಳಲ್ಲಿ ರೇಷ್ಮೆ ಹುಳು ಬೆಳವಣಿಗೆಯಾಗುತ್ತದೆ. ಅದರಲ್ಲಿ 2 ದಿನ ತನ್ನ ಸುತ್ತ ಕೋಶ ರಚಿಸಿಕೊಳ್ಳುತ್ತವೆ. ಗೂಡಿನೊಳಗೆ ರೇಷ್ಮೆ ಉತ್ಪಾದಿಸುವ ಹುಳು ಅದರೊಳಗೆ ಅಂತಿಮ ವಿದಾಯ ಹೇಳುತ್ತದೆ. ಇದು ರೇಷ್ಮೆ ಬೆಳೆ ಪದ್ಧತಿ.

ಕಳೆದ ಒಂದೂವರೆ ವರ್ಷದಿಂದ ರೇಷ್ಮೆ ಕೃಷಿಗೆ ಕನಿಷ್ಟ 1.50 ಲಕ್ಷ ರೂ. ಖರ್ಚು ಮಾಡಲಾಗಿದೆ. ಇದರಲ್ಲಿ ಖರ್ಚಿಗಿಂತ ಲಾಭವೇ ಅಧಿಕ. ಒಂದೂವರೆ ವರ್ಷದಲ್ಲಿ 4-5 ಲಕ್ಷದವರೆಗೆ ಲಾಭ ಪಡೆದಿದ್ದೇವೆ. ರೇಷ್ಮೆ ಇಲಾಖೆ ಸಹಾಯದೊಂದಿಗೆ ರೇಷ್ಮೆ ಹುಳು ಹಾಗೂ ಮಾರಾಟಕ್ಕೆ ಶಿರಹಟ್ಟಿ, ರಾಮನಗರ ಸೇರಿದಂತೆ ವಿವಿಧೆಡೆ ಹೋಗುವುದು ಅನಿವಾರ್ಯವಾಗಿದೆ. ಪ್ರಶಾಂತ ಅಯ್ಯನಗೌಡ್ರ, ರೈತ

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.