ಸರಳವಾಗಿ ಕೆಪಿಸಿಸಿ ಪದಗ್ರಹಣ: ಸತೀಶ ಜಾರಕಿಹೊಳಿ
Team Udayavani, May 29, 2020, 6:18 AM IST
ಗದಗ: ಬೆಂಗಳೂರಿನಲ್ಲಿ ಜೂ.7ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ತಮ್ಮನ್ನೊಳಗೊಂಡಂತೆ ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಕೋವಿಡ್-19 ಸೋಂಕು ತಡೆಯುವ ಉದ್ದೇಶದಿಂದ ಸರಳವಾಗಿ ನೆರವೇರಿಸಲಾಗುತ್ತದೆ ಎಂದು ಕೆಪಿಸಿಸಿ ನಿಯೋಜಿತ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶವನ್ನೊಳಗೊಂಡಂತೆ ಸುಮಾರು ಎಂಟು ಸಾವಿರ ಸ್ಥಳಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿಯೊಂದು ಸ್ಥಳದಲ್ಲಿ ಸಾಮಾಜಿಕ ಅಂತರದಲ್ಲಿ 50 ಜನರಿಗೆ ಅವಕಾಶ ಕಲ್ಪಿಸಲಿದ್ದು, ಸುಮಾರು ನಾಲ್ಕು ಲಕ್ಷ ಜನರು ಸಮಾರಂಭ ವೀಕ್ಷಣೆ ಮಾಡುವರು ಎಂದು ತಿಳಿಸಿದರು.
ಈ ಸಮಾರಂಭ ಕುರಿತಂತೆ ಜಿಲ್ಲಾವಾರು ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಮುಂಬೈ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಈಗಾಗಲೇ ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಲಾಗಿದೆ. ಪಕ್ಷದ ಪ್ರಮುಖರು, ಕಾರ್ಯಕರ್ತರು ಪದಗ್ರಹಣ ಸಮಾರಂಭದಲ್ಲಿ ಪ್ರತ್ಯಕ್ಷವಲ್ಲದಿದ್ದರೂ, ಪರೋಕ್ಷವಾಗಿಯಾದರೂ ಪಾಲ್ಗೊಳ್ಳಬೇಕೆಂಬುದು ನಮ್ಮ ಉದ್ದೇಶ ಎಂದರು.
ಸರಕಾರದ ವಿರುದ್ಧ ವಾಗ್ಧಾಳಿ: ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರಕಾರ ತರಾತುರಿಯಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದರು. ಸಾರಿಗೆ ಬಸ್ ಹಾಗೂ ವಾಹನಗಳ ಓಡಾಟವಿಲ್ಲದೇ ಕೋಟ್ಯಂತರ ಜನರು ಸಾವಿರಾರು ಮೈಲು ದೂರದ ತಮ್ಮ ಊರುಗಳಿಗೆ ಕಾಲ್ನಡಿಗೆಯಲ್ಲೇ ತಲುಪಿದರು. ಕೇಂದ್ರ ಸರಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ನಲ್ಲಿ ಅಲ್ಪಸ್ವಲ್ಪ ಹಣ ಎನ್ಆರ್ಇಜಿಗಳ ಮೂಲಕ ಜನರಿಗೆ ತಲುಪಲಿದ್ದು, ಇನ್ನುಳಿದದ್ದು ಸರಕಾರಿ ದಾಖಲೆಗಳಿಗೆ ಸೀಮಿತವಾಗಲಿದೆ. ರಾಜ್ಯ ಸರಕಾರ ವಿವಿಧ ಸಮುದಾಯಗಳಿಗೆ ಘೋಷಿಸಿರುವ ಪ್ಯಾಕೇಜ್ಗಳಿಗೆ ಮಾನದಂಡವೇ ಪ್ರಕಟವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಕೋವಿಡ್-19 ಲಾಕ್ಡೌನ್ ಅವ ಧಿಯನ್ನು ಸರಕಾರಗಳು ಜನವಿರೋಧಿ ಕೆಲಸಗಳಿಗೆ ಸಮರ್ಪಕವಾಗಿ ಬಳಸಿಕೊಳ್ಳುತ್ತಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಪ್ಪತ್ತಗುಡ್ಡಕ್ಕೆ ಕೈಹಾಕಿರುವುದು ಸರಿಯಲ್ಲ. ಮುಂದೆ ಅದರ ಪ್ರತಿಫಲ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ