ಸ್ಲಂ ಪ್ರದೇಶ ಗುಡಿಸಲು ಮುಕ್ತಗೊಳಿಸಿ
ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಕೆ
Team Udayavani, Mar 23, 2022, 4:17 PM IST
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಈಗಾಗಲೇ ಘೋಷಿತ ಸ್ಲಂ ಪ್ರದೇಶಗಳನ್ನು ಗುಡಿಸಲು ಮುಕ್ತಗೊಳಿಸಿ, ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸಮಿತಿ ಪ್ರಮುಖರು ಪೌರಾಯುಕ್ತರಿಗೆ ಮನವಿ ಸಲ್ಲಿಸಿ, ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ 48ಕ್ಕೂ ಹೆಚ್ಚು ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973 ಪ್ರಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸ್ಲಂಗಳು ಘೋಷಣೆಯಾಗಿ 30- 40 ವರ್ಷಗಳು ಕಳೆದರೂ ವಸತಿ, ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಾದ ಅಧಿಕಾರಿಗಳು ಕೊಳಚೆ ಪ್ರದೇಶಗಳನ್ನು ಎತ್ತಂಗಡಿಗೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ನಗರಸಭೆ ಪೌರಾಯುಕ್ತರು ಹಾಗೂ ಅಧಿಕಾರಿಗಳು ಅತಿಕ್ರಮಣ ನೆಪದಲ್ಲಿ ಗುಡಿಸಲುಗಳನ್ನು ತೆರುವುಗೊಳಿಸಲು ಮುಂದಾಗಿರುವುದನ್ನು ಕೊಡಲೇ ಕೈಬಿಡಬೇಕು. ಘೋಷಿತ ಕೋಳಗೇರಿ ಪ್ರದೇಶಗಳ ಜನರಿಗೆ ಪುನರ್ ವಸತಿ ಕಲ್ಪಿಸದೇ, ಯಾವುದೆ ಕಾರಣಕ್ಕೂ ತೆರುವುಗೊಳಿಸಬಾರದು ಎಂದು ಒತ್ತಾಯಿಸಿದರು.
ಜಿಲ್ಲಾ ಸ್ಲಂ ಸಮಿತಿ ಜಿಲ್ಲಾ ಅಧ್ಯಕ್ಷ ಇಮಿ¤ಯಾಜ್ ಆರ್. ಮಾನ್ವಿ, ಉಪಾಧ್ಯಕ್ಷ ರವಿಕುಮಾರ ಬೆಳಮಕರ, ರಾಚೋಟೇಶ್ವರ ನಗರದ ಸ್ಲಂ ಪ್ರದೇಶದ ಶಾಖೆ ಘಟಕದ ಅಧ್ಯಕ್ಷ ಇಬ್ರಾಹಿಂ ಮುಲ್ಲಾ, ಮಲೇಶಪ್ಪ ಕಲಾಲ, ಮುನ್ನಾ ಅಗಡಿ, ದಾವಲಸಾಬ ಈಟಿ, ಕಾಸೀಮ ಕವಲೂರ, ಶಂಕರಪ್ಪ ಹದ್ಲಿ, ಬಾಬುಸಾಬ ಗಡಾದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ