ಗದಗ ನಗರದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ರೋಡ್ ಶೋ
Team Udayavani, Mar 16, 2023, 5:56 PM IST
ಗದಗ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನಗರದಲ್ಲಿ ಗುರುವಾರ ಬೃಹತ್ ರೋಡ್ ಶೋ ನಡೆಸಿದರು.
ನಗರದ ಮುಳಗುಂದ ನಾಕಾದಿಂದ ಆರಂಭವಾದ ರೋಡ್ ಶೋ ರಾಚೋಟೇಶ್ವರ ದೇವಸ್ಥಾನ ರಸ್ತೆ, ಬಸವೇಶ್ವರ ಸರ್ಕಲ್, ಸ್ಟೇಷನ್ ರಸ್ತೆ, ಮಹೇಂದ್ರಕರ್ ಸರ್ಕಲ್ ಮಾರ್ಗವಾಗಿ ಸಾಗಿತು.
ರೋಡ್ ಶೋನಲ್ಲಿ ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಸಂಸದ ಶಿವಕುಮಾರ್ ಉದಾಸಿ, ಮುಖಂಡ ಅನಿಲ ಮೆಣಸಿನಕಾಯಿ, ಸೇರಿ ಹಲವಾರು ನಾಯಕರು ಭಾಗಿಯಾಗಿದ್ದರು.
ರೋಡ್ ಶೋನಲ್ಲಿ ನೂರಾರು ಬೈಕ್ ಗಳ ರ್ಯಾಲಿ, ಆಟೋ ರ್ಯಾಲಿ ನಡೆಯಿತು. ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಜಯಘೋಷ ಹಾಕುತ್ತ ಸಾಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ