ಮಹಿಳಾ ಶಿಕ್ಷಣದಿಂದ ಸಮಾಜ ಸಬಲೀಕರಣ
Team Udayavani, Feb 5, 2020, 12:54 PM IST
ಮುಂಡರಗಿ: ಮಹಿಳಾ ಶಿಕ್ಷಣದಿಂದ ಸಮಾಜ ಸಬಲೀಕರಣವಾಗಲಿದೆ. ಮಹಿಳಾ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಫುಲೆ ಜೀವನ ಮುಡುಪಾಗಿಟ್ಟಿದ್ದರು ಎಂದು ಮಾನವಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಟಿ. ರತ್ನಾಕರ ಹೇಳಿದರು.
ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ, ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ನಿಮಿತ್ತ ಸಾಧಕ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾನವರಾಗಿ ಹುಟ್ಟಿದ ಮೇಲೆ ಮಾನವೀಯ ಕಳಕಳಿಯಿಂದ ಏನಾದರೂ ಮಾಡಬೇಕು. ಈ ಹಿನ್ನೆಲೆಯಲ್ಲಿ ಸಾವಿತ್ರಿಬಾಯಿ 50 ಶಾಲೆಗಳು ತೆರೆದು ಮಹಿಳೆಯರ ಶಿಕ್ಷಣಕ್ಕಾಗಿ ಸತತವಾಗಿ ಹೋರಾಟ ನಡೆಸಿದರು ಎಂದರು.
ಡಾ| ಲಕ್ಷ್ಮಣ ಪೂಜಾರ ಮಾತನಾಡಿ ಯುವ ಜನತೆಗೆ ವೈಚಾರಿಕತೆ ಶಿಕ್ಷಣದಅವಶ್ಯಕತೆ ತುಂಬಾ ಇದೆ. ಜಾತಿಯತೆಯು ದೊಡ್ಡ ಮೂಢನಂಬಿಕೆಯಾಗಿದ್ದು, ಜಾತಿಯತೆ ತೊಲಗಿಸಲು ಹೋರಾಟ ಮಾಡುವ ಅನಿವಾರ್ಯತೆಯು ಇದೆ ಎಂದರು.
ಜಿಪಂ ಮಾಜಿ ಸದಸ್ಯ ಹೇಮಗಿರೀಶ ಹಾವಿನಾಳ ಅವರು ಕೆ.ಎಸ್. ತಳವಾರ ಅವರ ಕುಂತಳನಾಡಿನ ಕುಲಿಂದರ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿ, ತಂದೆತಾಯಿ ಬಿಟ್ಟರೆ ಜೀವನದಲ್ಲಿ ಉತ್ತಮ ಮಾರ್ಗದರ್ಶನವು ಶಿಕ್ಷಕರಾಗಿದ್ದಾರೆ. ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಶಿಕ್ಷಕರನ್ನು ಸನ್ಮಾನಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದರು.
ಮುಖಂಡ ಕರಬಸಪ್ಪ ಹಂಚಿನಾಳ ಸಾವಿತ್ರಿಬಾಯಿ ಫುಲೆ ಭಾವಚಿತ್ರವನ್ನು ಪೂಜಿಸಿದರು. ಡಾ| ಲಕ್ಷ್ಮಣ ಪೂಜಾರ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘ ಉದ್ಘಾಟಿಸಿದ ಭೀಮಣ್ಣ ಹವಳೆ ಮಾತನಾಡಿದರು. ಎಸ್.ಎಚ್. ನಾಯಕ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ, ಪದವಿ ಕಾಲೇಜಿ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸರಕಾರಿ ನೌಕರರ ಸಂಘ ಅಧ್ಯಕ್ಷ ಡಾ|ಬಸವರಾಜ ಬಳ್ಳಾರಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಲ್.ಆರ್.ಪವಾರ, ಬಿ.ಎಫ್. ಈಟಿ, ಕೃಷ್ಣಪ್ಪ ಕಲಕೇರಿ, ಭಾರತಿ ಟಿ.ಎಚ್.ಎ.ಸಿ. ಕೆಳಗಿನಮನಿ, ವೈ.ಟಿ. ವಡ್ಡರ, ಡಿ.ಎಂ. ಗದಗಕರ ಇತರರು ಇದ್ದರು. ಎಚ್.ಕೆ. ಹಲವಾಗಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಡಿ. ಬುಡೇನಾಯ್ಕರ ಸ್ವಾಗತಿಸಿದರು. ಎಸ್.ಎಸ್. ನಾಯಕ, ರವಿ ದೇವರೆಡ್ಡಿ ನಿರೂಪಿಸಿದರು. ಎಚ್.ಎನ್. ಗೌಡರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು