ಸಾಮೂಹಿಕ ವಿವಾಹಗಳಿಂದ ಸಾಮಾಜಿಕ ಪರಿವರ್ತನೆ

ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯಗಳಿಗೆ ಜಯ ಖಂಡಿತ

Team Udayavani, Dec 20, 2021, 6:15 PM IST

ಸಾಮೂಹಿಕ ವಿವಾಹಗಳಿಂದ ಸಾಮಾಜಿಕ ಪರಿವರ್ತನೆ

ಗಜೇಂದ್ರಗಡ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳು ಸೌಹಾರ್ದ ಕೇಂದ್ರಗಳಾಗಿ ಪರಿವರ್ತನೆ ಯಾಗಬೇಕಾದರೆ ಸಾಮೂಹಿಕ ವಿವಾಹದಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ನಡೆಸಬೇಕೆಂದು ಹೂವಿನ ಹಡಗಲಿ ಗವಿಮಠದ ಶಾಂತವೀರ ಸ್ವಾಮೀಜಿ ಹೇಳಿದರು.

ಸಮೀಪದ ಜಿಗೇರಿ ಗ್ರಾಮದಲ್ಲಿ ಲಿ. ಶ್ರೀ ಗುರುಸಿದ್ದೇಶ್ವರ ಶ್ರೀಗಳ 36ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದರು. ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು ಕಂಡುಕೊಳ್ಳಬಹುದು. ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸುತ್ತದೆ. ‌ ಮನುಷ್ಯ ಜೀವನದಲ್ಲಿ ಸರಳತೆ ಪಾಲಿಸಬೇಕು. ಅಂದಾಗ ಮಾತ್ರ ಜಿವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ ಎಂದರು.

ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳೇನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯಗಳಿಗೆ ಜಯ ಖಂಡಿತ. ಇಂತಹ ಸಾಮಾಜಿಕ ಕಳಕಳಿಯಿಂದ ನಡೆಯುವ ಧರ್ಮ ಕಾರ್ಯಗಳು ಭಗವಂತನಿಗೆ ಇಷ್ಟ. ಜೊತೆಗೆ ಸಮಾಜವನ್ನು ಈಗಲೂ ಕಾಡುತ್ತಿರುವ ವರದಕ್ಷಿಣೆ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ತೊಡಬೇಕು ಎಂದರು.

ಜೀಗೇರಿ ಗುರುಸಿದ್ದೇಶ್ವರ ಮಠದ ಗುರುಸಿದ್ದೇಶ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವರ ‌ ಹಿತ ಕಾಯಲು ಹಾಗೂ ನೆಮ್ಮದಿ ಜೀವನ ನಡೆಸಲು ಸಾಮೂಹಿಕ ವಿವಾಹಗಳು ‌ಹೆಚ್ಚಾಗಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳ ಸಂಖ್ಯೆ ಕ್ಷೀಣಿಸುತ್ತಿವೆ. ಹೀಗಾಗಿ, ಬಡ ಹಾಗೂ ಕೂಲಿಕಾರರಿಗೆ ವಿವಾಹಗಳು ಭಾರವಾಗಿ ಪರಿಣಮಿಸುತ್ತಿವೆ.

ಆದ್ದರಿಂದ ಸಮಾಜದಲ್ಲಿನ ಉಳ್ಳವರು‌ ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಮೂಲಕ ಶ್ರೀಸಾಮಾನ್ಯರಕಲ್ಯಾಣಕ್ಕೆ ನೆರವಾಗಬೇಕು. ಅಂದಾಗ ಮಾತ್ರ ಸಮಾಜದ ‌ ಲ್ಲಿನ ಕೀಳರಿಮೆ ಕಣ್ಮರೆಯಾಗಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ 8 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಯಲಬುರ್ಗಾದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ, ಬೆಳದಟ್ಟಿ ಹಿರೇಮಠದ ಶಿವಸಂಗಮೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಒಪ್ಪತ್ತೇಶ್ವರ ಮಠದ ಒಪ್ಪತ್ತೇಶ್ವರ ‌ ಸ್ವಾಮೀಜಿ, ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮುಖಂಡರಾದ ಮಿಥುನ್‌ ಪಾಟೀಲ, ಶರಣಪ್ಪ ದೊಣ್ಣೆಗುಡ್ಡ, ಮುದಿಯಪ್ಪ ಕರಡಿ, ‌ ಬಸವರಾಜ ಮೂಲಿಮನಿ, ಆರ್‌.ಕೆ.ಚವ್ಹಾಣ, ಅಂದಪ್ಪ ಬಿಚೂರ, ಶಶಿಧರ ಹೂಗಾರ, ನೀಲಪ್ಪ ಗುರಿಕಾರ, ಮಹಾಂತೇಶ ಪೂಜಾರ, ಪರಶು‌ ರಾಮ ಚಿಲಝರಿ, ಮಲ್ಲಿಕಾರ್ಜುನ ಅವಾರಿ ಇತರರು ಇದ್ದರು.

ಟಾಪ್ ನ್ಯೂಸ್

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.