ಸಮಾಜ ಸೇವಕ ಆನಂದಗೌಡರಿಂದ ಸ್ಮಶಾನ ಸ್ವಚ್ಛತೆ

ಶ್ರೀ ಜ|ಅನ್ನದಾನೀಶ್ವರ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

Team Udayavani, Jul 1, 2022, 4:04 PM IST

11

ಮುಂಡರಗಿ: ಪಟ್ಟಣದ ಗದಗ ರಸ್ತೆಯಲ್ಲಿರುವ ಶ್ರೀ ಜ|ಅನ್ನದಾನೀಶ್ವರ ರುದ್ರಭೂಮಿ ಸ್ವತ್ಛತಾ ಕಾರ್ಯವನ್ನು ಸಮಾಜ ಸೇವಕ ಆನಂದಗೌಡ ಪಾಟೀಲ ಅವರು ಮಾಡುತ್ತಿರುವುದು ಶ್ಲಾಘನೀಯ ಎಂದು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಪಟ್ಟಣದ ವ್ಯಾಪ್ತಿಯಲ್ಲಿ ಹಲವು ಸಮುದಾಯಗಳ ಸ್ಮಶಾನಗಳು ಇದ್ದು, ಪುರಸಭೆ ಆಡಳಿತ ವತಿಯಿಂದ ಸ್ವತ್ಛತಾ ಕಾರ್ಯವನ್ನು ಪ್ರತಿ ವರ್ಷ ಮಾಡಬೇಕಿದೆ. ಆದರೆ, ಸ್ಮಶಾನದಲ್ಲಿ ಬೆಳೆದ ಕಸ, ಗಿಡಗಂಟಿಗಳು ಬೆಳೆದಿದ್ದರಿಂದ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬರುವ ಜನರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ವೃತ್ತಿಯಲ್ಲಿ ಗುತ್ತಿಗೆದಾರರಾದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆನಂದಗೌಡ ಪಾಟೀಲರು ಸ್ವಂತ ಖರ್ಚಿನಲ್ಲಿ ಸ್ಮಶಾನ ಸ್ವಚ್ಛತೆಗೆ ಮುಂದಾಗಿರುವುದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಎರಡು ದಿನಗಳಿಂದಲೂ ಜೆಸಿಬಿ ಯಂತ್ರದಿಂದ ಗಿಡಗಂಟಿಗಳನ್ನು ಕಿತ್ತು ಸ್ವಚ್ಛಗೊಳಿಸಿದ್ದಾರೆ. ಇದರಿಂದ ಅಂತೀಮ ಯಾತ್ರೆಯಲ್ಲಿ ಪಾಲ್ಗೊಳ್ಳುವ ಜನರಿಗೆ ಅನುಕೂಲವಾಗಲಿದೆ. ಸ್ಮಶಾನ ಪರಿವರ್ತನೆಗೊಂಡಿದೆ. ಸ್ಮಶಾನ ಸ್ವಚ್ಛತೆಯಿಂದ ಸಾರ್ವಜನಿಕರು, ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳುವ ಜನರು ನಿಟ್ಟಿಸಿರು ಬಿಡುವಂತೆ ಆಗಿರುವುದು ಸಮಾಧಾನ ತಂದಿದೆ. ಪಟ್ಟಣದ ವ್ಯಾಪ್ತಿಯ ಶಿರೋಳ, ರಾಮೇನಹಳ್ಳಿ, ಬ್ಯಾಲವಾಡಗಿ ಸೇರಿ ಇಸ್ಲಾಂ ಸಮಾಜದ ಈದಾಗ ಸ್ವಚ್ಛತೆಗೆ ಕೂಡಾ ಪುರಸಭೆ ಆಡಳಿತ ಮುಂದಾಗಬೇಕಿದೆ. ಈ ದಿಸೆಯಲ್ಲಿ ತ್ವರಿತವಾಗಿ ಪುರಸಭೆ ಅಧ್ಯಕ್ಷರು, ಸದಸ್ಯರು, ಮುಖ್ಯಾಧಿಕಾರಿಗಳು ಗಮನ ಹರಿಸಬೇಕಿದೆ.

ಸ್ಮಶಾನದ ಅಭಿವೃದ್ಧಿ ಆದರೆ ಗ್ರಾಮದ, ಪಟ್ಟಣದ ಅಭಿವೃದ್ಧಿಯಾದಂತೆ. ಹುಲಿಕೋಟಿ ಸ್ಮಶಾನದ ಮಾದ ರಿಯಲ್ಲಿ ಪಟ್ಟಣದ ಸ್ಮಶಾನವನ್ನು ಅಭಿವೃದ್ಧಿಗೊಳಿಸಿ, ಹೂವಿನಗಿಡಗಳನ್ನು ಬೆಳೆಸಲಾಗುವುದು. –ಆನಂದಗೌಡ ಎಚ್‌. ಪಾಟೀಲ

ಸಮಾಜ ಸೇವಕರು ಸ್ಮಶಾನದಲ್ಲಿ ಗಿಡಗಂಟಿಗಳು ಬೆಳೆದು ಸ್ವಚ್ಛತೆ ಇರಲಿಲ್ಲ. ಆದರೆ ಆನಂದಗೌಡ ಪಾಟೀಲರು ಸ್ವಚ್ಛತಾ ಕಾರ್ಯ ಕೈಕೊಂಡಿರುವುದು ಉತ್ತಮ ಕೆಲಸವಾಗಿದೆ. -ನಾಗರಾಜ ಹೊಂಬಳಗಟ್ಟಿ, ಪುರಸಭೆ ಸದಸ್ಯ

ಈಗಾಗಲೇ ಪಟ್ಟಣ ವ್ಯಾಪ್ತಿಯ ಸ್ಮಶಾನಗಳ ಸ್ವಚ್ಛತೆ ಕಾರ್ಯ ಕೈಕೊಳ್ಳಲು ಮುಂದಾಗಿದ್ದೆವು. ಆದರೆ ರಾಜಕೀಯ ಹೊಯ್ದಾಟಗಳ ಮಧ್ಯೆ ಕೆಲಸ ಸ್ಥಗಿತವಾಗಿದೆ. ಈಗ ನೀತಿ-ಸಂಹಿತೆ ಜಾರಿಯಲ್ಲಿದೆ. ನೀತಿ-ಸಂಹಿತೆ ಮುಗಿದ ತಕ್ಷಣ ಸ್ವಚ್ಛತಾ ಕಾರ್ಯಕ್ಕೆ ಮುಂದಾಗುತ್ತೇವೆ. –ಕವಿತಾ ಉಳ್ಳಾಗಡ್ಡಿ, ಪುರಸಭೆ ಅಧ್ಯಕ್ಷ

ಪುರಸಭೆ ವ್ಯಾಪ್ತಿಯ ಎಲ್ಲಾ ಸ್ಮಶಾನಗಳ ಸ್ವಚ್ಛತೆಗೆ ಒಂದು ವಾರದೊಳಗೆ ಕ್ರಮ ಕೈಕೊಳ್ಳಲಾಗುವುದು. ಏನಾದರೂ ದುರಸ್ತಿ ಕಾರ್ಯಗಳು ಇದ್ದರೆ, ಅವುಗಳನ್ನು ಕೂಡಾ ಮಾಡಲಾಗುವುದು. ಗದಗ ರಸ್ತೆ ಸ್ಮಶಾನದ ಗೋಡೆ ಬಿದ್ದಿದ್ದು, ಅದನ್ನು ಕೂಡಾ ದುರಸ್ತಿ ಮಾಡಿಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು. –ಆರ್‌.ಎಂ. ಪಾಟೀಲ, ಪುರಸಭೆ ಮುಖ್ಯಾಧಿಕಾರಿ

-ಹು.ಬಾ.ವಡ್ಡಟಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.