ಸಮಸ್ಯೆಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ

ಗ್ರಾಮಗಳ ಅಭಿವೃದ್ಧಿಗೆ ಜನಪತ್ರಿನಿಧಿಗಳು-ಗ್ರಾಮಸ್ಥರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಸುಂದರೇಶ್‌ ಬಾಬು

Team Udayavani, Apr 17, 2022, 3:37 PM IST

22

ರೋಣ: ಗ್ರಾಮೀಣ ಜನರ ಬೇಡಿಕೆಗಳನ್ನು ಈಡೇರಿಸಲು, ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಹಕಾರ ಅಗತ್ಯವೆಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹೇಳಿದರು.

ರೋಣ ತಾಲೂಕಿನ ಮಲ್ಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರ ಅಹವಾಲು ಅರ್ಜಿಗಳ ಕುರಿತು ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಜನರ ನಿರೀಕ್ಷೆಗಳು ಅಪಾರವಾಗಿವೆ. ಅವುಗಳನ್ನು ಸರ್ಕಾರದ ಮಾರ್ಗಸೂಚಿಗಳ ಇತಿಮಿತಿಯಲ್ಲಿ ಪರಿಹರಿಸಲಾಗುವುದು. ಸಾರ್ವಜನಿಕರು ನೀಡಿದ ಎಲ್ಲ ಅರ್ಜಿಗಳನ್ನು ಎಷ್ಟು ಸಾಧ್ಯವೋ ಅಷ್ಟು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಹೆಚ್ಚಾಗಿ ಅರ್ಜಿಗಳು ನಿವೇಶನ, ಮನೆ ಹಾಗೂ ರಸ್ತೆ ಕಟ್ಟಡ ನಿರ್ಮಾಣ ಕುರಿತು ಸ್ವೀಕೃತವಾಗಿದ್ದು, ಅವುಗಳನ್ನು ಗ್ರಾಪಂ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಮೂಲಕ ಪರಿಹಾರ ನೀಡಬಹುದಾಗಿದೆ. ಗ್ರಾಮದ ರೈತರು ಜಮೀನು ನೀಡಲು ಮುಂದೆ ಬಂದಲ್ಲಿ ಸೂಕ್ತ ದರ ನೀಡಿ, ಅಲ್ಲಿ ನಿವೇಶನ ಮಾಡಿ ಹಂಚಿಕೆ ಮಾಡಲು ತಿಳಿಸಲಾಗಿದೆ ಎಂದರು.

ಗ್ರಾಮದ ರುದ್ರಭೂಮಿಗೆ ನಿಗದಿಪಡಿಸಿ 10 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿಪಡಿಸಲು ಚಾಲನೆ ನೀಡಲಾಗಿದೆ. ಸರ್ಕಾರದ ಯೋಜನೆಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಕಂದಾಯ ವಿಷಯಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾದ ಅರ್ಜಿಗಳಿಗೆ ಪರಿಹಾರ ಕಲ್ಪಿಸುವುದು ಇದರ ಮುಖ್ಯ ಉದ್ದೇಶ. ಆದರೂ, ಇಲ್ಲಿ ಎಲ್ಲ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಪಿಂಚಣಿ, ಆಧಾರ್‌ ತಿದ್ದುಪಡಿ, ಭೂ ದಾಖಲೆಗಳ, ಪಡಿತರ ಚೀಟಿ ಹಾಗೂ ಕೆರೆಗಳ ಜಮೀನು ಖರೀದಿ ಕುರಿತು ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಈ ಕಾರ್ಯಕ್ರಮದ ಚೌಕಟ್ಟಿನೊಳಗೆ ಸಾಧ್ಯವಾದಷ್ಟು ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇಂದು ಸ್ವೀಕರಿಸಲಾದ ಎಲ್ಲ ಅರ್ಜಿಗಳನ್ನು ಖುದ್ದಾಗಿ ಪರಿಶೀಲಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಯತ್ನಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಈ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವಾಗಿದೆ. ಈವರೆಗೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಆಯ್ದ 5 ತಾಲೂಕಿನ 5 ಗ್ರಾಮಗಳಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ಇದು 6ನೇ ಕಾರ್ಯಕ್ರಮ ಎಂದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಂದಾಜು 200 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 190 ಅರ್ಜಿಗಳಿಗೆ ಪರಿಹಾರ ನೀಡಿ ವಿಲೇವಾರಿ ಮಾಡಲಾಯಿತು. ಇನ್ನುಳಿದ 10 ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ಕ್ರಮಕ್ಕೆ ಕಳುಹಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ 200 ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಪಶು ಸಂಗೋಪಾನ ಇಲಾಖೆಯಿಂದ 100ಕ್ಕೂ ಹೆಚ್ಚು ಜಾನುವಾರುಗಳನ್ನು ತಪಾಸಣೆಗೆ ಒಳಪಡಿಸಲಾಯಿತು. 1500 ಕುರಿಗಳಿಗೆ ಜಂತು ನಾಶಕ ಔಷಧ ವಿತರಣೆ ಮಾಡಲಾಯಿತು. 900 ಕುರಿ ಆಡುಗಳಿಗೆ ಲಸಿಕೆ ನೀಡಲಾಗಿದೆ ಎಂದರು.

ಸೌಲಭ್ಯ ವಿತರಣೆ: ವಿಕಲಚೇತನರ ಕಲ್ಯಾಣ ಇಲಾಖೆ ವತಿಯಿಂದ ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್‌ ಹಾಗೂ ಶ್ರವಣ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು. ರಾಷ್ಟ್ರ ಮಟ್ಟದ ಅಥ್ಲೆಟಿಕ್‌ನಲ್ಲಿ ಭಾಗವಹಿಸಿದ್ದ ವಿಕಲಚೇನತರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿದರು. ಆರೋಗ್ಯ ಇಲಾಖೆಯ ಸಂಜೀವಿನಿ ಒಕ್ಕೂಟದಿಂದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಕಿರು ಸಾಲ ಯೋಜನೆಯಡಿ 1.5 ಲಕ್ಷ ರೂ. ಚೆಕ್‌ ವಿತರಣೆ ಮಾಡಲಾಯಿತು. ಕೃಷಿ ಇಲಾಖೆಯಿಂದ ಫಲಾನುಭವಿಗಳಿಗೆ ಟ್ರ್ಯಾಕ್ಟರ್ ಹಾಗೂ ಕೃಷಿ ಉಪಕರಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸುಕನ್ಯಾ ಸಮೃದ್ಧಿ ಯೋಜನೆಯಡಿ ಪಾಸ್‌ಬುಕ್‌, ಕಂದಾಯ ಇಲಾಖೆಯಿಂದ ಮಾಸಾಶನ ಆದೇಶ ಪ್ರತಿ, ಚುನಾವಣಾ ಗುರುತಿನ ಚೀಟಿ, ಪಿಟಿ ಸಿಟ್‌ ಹಾಗೂ 11ಇ ನಕಾಶೆಗಳನ್ನು ವಿತರಿಸಲಾಯಿತು. ತಾ‌ಪಂ ವತಿಯಿಂದ ವಿವಿಧ ಯೋಜನೆಗಳ ಕಾಮಗಾರಿಗಳ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಲ್ಲಾಪುರ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಹಟ್ಟಿ, ಉಪಾಧ್ಯಕ್ಷ ಹನುಮಂತಗೌಡ ಹುಲ್ಲೂರ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್‌ ಜಿ.ಬಿ. ಜಕ್ಕನಗೌಡರ್‌, ಜಿಪಂ ಉಪ ಕಾರ್ಯದರ್ಶಿ ಕಲ್ಲೇಶ್‌ ಬಿ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಶಾಂತ ವರಗಪ್ಪನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ ಎ., ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ರವಿಕುಮಾರ, ಜಿಲ್ಲಾಧಿ ಕಾರಿಗಳ ಕಚೇರಿಯ ತಹಶೀಲ್ದಾರ್‌ ಪರಸಪ್ಪ ಕಲಾಲ, ವಾರ್ತಾಧಿಕಾರಿ ವಸಂತ ಮಡ್ಲೂರ, ಪಿಡಿಒ ಲೋಹಿತ್‌ ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿ ಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.