ಪ್ರವಾಹ ಸಂತ್ರಸ್ತರಿಗೆ ಶೀಘ್ರ ಪರಿಹಾರ: ಬಿಎಸ್ವೈ
•ಕೊಣ್ಣೂರ ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ•ಪರಿಹಾರ ಹೆಚ್ಚಳ ಭರವಸೆ
Team Udayavani, Aug 10, 2019, 10:31 AM IST
ನರಗುಂದ: ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಲಾವೃತಗೊಂಡ ಗ್ರಾಮವನ್ನು ವೀಕ್ಷಿಸಿದರು.ಶಾಸಕ ಸಿ.ಸಿ.ಪಾಟೀಲ ಇದ್ದರು.
ನರಗುಂದ: ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರು ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದ್ದೇನೆ. ನಾಳೆಯೇ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೂಡಲೇ ಯುದ್ಧೋಪಾದಿಯಲ್ಲಿ ನೊಂದವರಿಗೆ ಪರಿಹಾರ ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರೆ ಸಂತ್ರಸ್ತರಿಗೆ ಭರವಸೆ ನೀಡಿದರು.
ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ತೆರಳಿ ಅಲ್ಲಿನ ಮಲಪ್ರಭಾ ನದಿ ಪ್ರವಾಹದಿಂದ ಇಡೀ ಗ್ರಾಮ ಜಲಾವೃತಗೊಂಡಿದ್ದನ್ನು ವೀಕ್ಷಣೆ ಮಾಡಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರವಾಹ ತೀರಿದ ಬಳಿಕ ಮಳೆ ಹಾನಿ ಮತ್ತು ಬೆಳೆ ಹಾನಿ ಸಮಗ್ರವಾದ ಸಮೀಕ್ಷೆ ಕೈಗೊಂಡು ಪ್ರವಾಹ ಸ್ಥಿತಿಯಿಂದ ನಾಡಿನಲ್ಲಿ ಉಂಟಾದ ಪರಿಸ್ಥಿತಿಯ ಸಮಗ್ರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿ ಪರಿಹಾರ ಕಾರ್ಯಕ್ಕೆ ಅಗತ್ಯ ಅನುದಾನಕ್ಕೆ ಮನವಿ ಮಾಡಲಾಗುವುದು. ಈ ಹಿಂದೆ ನಾನು ಮುಖ್ಯಮಂತ್ರಿ ಇದ್ದಾಗ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ನೀಡಲಾದ ಬೆಳೆಹಾನಿ ಮತ್ತು ಮಳೆಹಾನಿ ಮೊತ್ತ ಹೆಚ್ಚಳ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪರಿಹಾರ ಒದಗಿಸಿಕೊಡುವ ಭರವಸೆ ನೀಡುತ್ತಿದ್ದೇನೆ. ಇದರೊಂದಿಗೆ ನಿರಾಶ್ರಿತ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಂಡು ಸಕಲ ನೆರವು, ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಶಾಸಕ ಸಿ.ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡ್ರ, ವಿಧಾನ ಪರಿಷತ್ ಸದಸ್ಯ ಪ್ರೊ| ಎಸ್.ವಿ. ಸಂಕನೂರ, ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಪಂ ಮುಖ್ಯ ಕಾರ್ಯದರ್ಶಿ ಮಂಜುನಾಥ ಚವ್ಹಾಣ ಮುಂತಾದವರು ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು