ಬಿತ್ತನೆ ಬೀಜ ವಿತರಣೆಗೆ ಚಾಲನೆ
Team Udayavani, May 21, 2020, 2:20 PM IST
ನರೇಗಲ್ಲ: ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ರಿಯಾಯ್ತಿದರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಜಿಪಂ ಉಪಾಧ್ಯಕ್ಷೆ ಮಲ್ಲಮ್ಮ ಬಿಚ್ಚಾರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೃಷಿ ಇಲಾಖೆಯಿಂದ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು ಎಂದರು. ರೋಣ ಕೃಷಿ ಇಲಾಖೆ ಅಧಿಕಾರಿ ರವೀಂದ್ರಗೌಡ ಪಾಟೀಲ ಮಾತನಾಡಿ, ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಇಲಾಖೆ ಸನ್ನದ್ಧವಾಗಿದೆ ಎಂದರು.
ನರೇಗಲ್ಲ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಗದೀಶ ಹಾದಿಮನಿ ಮಾತನಾಡಿ, ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 17 ಸಾವಿರ ಹೆಕ್ಟೇರ್ ಬಿತ್ತನೆ ಪ್ರದೇಶವಿದೆ. 9,514 ಹೆಕ್ಟೇರ್ ಹೆಸರು, 54 ಹೆಕ್ಟೇರ್ ಹೈಬ್ರಿಡ್ ಜೋಳ, 192 ಹೆಕ್ಟೇರ್ನಲ್ಲಿ ಗೋವಿನಜೋಳ, ಸಜ್ಜಿ , 384 ಹೆಕ್ಟೇರ್ನಲ್ಲಿ ತೊಗರಿ ಬಿತ್ತನೆ ಗುರಿ ಹೊಂದಲಾಗಿದೆ. ರೈತರು ಪಹಣಿ, ಆಧಾರ್ ಕಾಡ್ರ, ಬ್ಯಾಂಕ್ ಪಾಸ್ ಬುಕ್ನೊಂದಿಗೆ ಆಗಮಿಸಿ ಬಿತ್ತನೆ ಬೀಜ ಖರೀದಿಸಬೇಕು. ಸಾಮಾನ್ಯ ವರ್ಗದ ರೈತರಿಗೆ ಹೆಸರು 5 ಕೆಜಿಗೆ 362.5 ರೂ. ಎಸ್ಸಿ, ಎಸ್ಟಿ ವರ್ಗದವರಿಗೆ 5 ಕೆಜಿಗೆ 300 ರೂ., ಜೋಳ ಸಾಮಾನ್ಯ ಜನರಿಗೆ 3 ಕೆಜಿಗೆ 105 ರೂ. ಹಾಗೂ ಎಸ್ಸಿ,ಎಸ್ಟಿ ವರ್ಗದವರಿಗೆ 3 ಕೆಜಿಗೆ 60 ರೂ. ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುವುದು. ರೈತರು ಇದರ ಪ್ರಯೋಜನ ಪಡೆಯಬೇಕು ಎಂದರು.
ಎಪಿಎಂಸಿ ಉಪಾಧ್ಯಕ್ಷ ನಿಂಗನಗೌಡ ಲಕ್ಕನಗೌಡ್ರ, ಜಿಪಂ ಸದಸ್ಯೆ ರೂಪಾ ಅಂಗಡಿ, ಅಂದಪ್ಪ ಬಿಚ್ಚಾರ, ಫಕೀರಪ್ಪ ಬಿ., ಬಸವರಾಜ ಹಡಪದ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ