ರೋಣ ಪುರಸಭೆಯಲ್ಲಿ ವಿಶೇಷ ಸಾಮಾನ್ಯ ಸಭೆ
Team Udayavani, Jun 30, 2021, 2:42 PM IST
ರೋಣ: ಎಸ್ಸಿ, ಎಸ್ಟಿ, ವಿಕಲಚೇತನ ಹಾಗೂ ಇತರೆ ಜನಾಂಗದ 24 ಜನ ಬೀದಿ ಬದಿವ್ಯಾಪಾರಸ್ಥರಿಗೆ ಪಟ್ಟಣದ ಮಧ್ಯ ಭಾಗದಲ್ಲಿರುವಕೆರೆ ಮುಂಭಾಗದಲ್ಲಿ ಒಂದೇ ಮಾದರಿಯ ಡಬ್ಟಾಅಂಗಡಿ ನಿರ್ಮಿಸಿ, ಬಾಡಗಿ ನಿಗ ದಿಪಡಿಸುವಯೋಜನೆ ಕುರಿತು ಪಟ್ಟಣದ ಪುರಸಭೆ ಸಭಾಭವನದಲ್ಲಿ ಮಂಗಳವಾರ ವಿಶೇಷ ಸಾಮಾನ್ಯ ಸಭೆ ನಡೆಯಿತು.
ಸಭೆಯಲ್ಲಿ ಡಬ್ಟಾ ಅಂಗಡಿ ನಿರ್ಮಿಸಿ, ಬಾಡಗಿ ನಿಗದಿಪಡಿಸುವ ಕುರಿತು ಕೆಲ ಸದಸ್ಯರು ಒಪ್ಪಿಗೆಸೂಚಿಸಿದರೆ, ಇನ್ನು ಕೆಲ ಸದಸ್ಯರು ವಿರೋಧ ವ್ಯಕ್ತಪಡಿಸಿದರು.
ಮುಖ್ಯಾಧಿಕಾರಿ ಎಂ.ಎ.ನೂರುಲ್ಲಾಖಾನ ಮಾತನಾಡಿ, 44 ಲಕ್ಷ ರೂ. ಅನುದಾನಬಿಡುಗಡೆಯಾಗಿದೆ. ಇದರಲ್ಲಿ ಪೌರಕಾರ್ಮಿಕರಿಗೆ21.46 ಲಕ್ಷ ವೇತನಕ್ಕೆ, ಎಸ್ಸಿಪಿ ಟಿಎಸ್ಪಿಅಡಿ 10 ಲಕ್ಷ ರೂ.ಅನ್ನು ಪರಿಶಿಷ್ಟ ಜಾತಿಗೆ,3 ಲಕ್ಷ ರೂ.ಅನ್ನು ಪರಿಶಿಷ್ಟ ಪಂಗಡಕ್ಕೆ, 4.5ಲಕ್ಷ ರೂ. ಇತರೆ ಜನಾಂಗದ ಅಭಿವೃದ್ಧಿಗೆ ಕಾಯ್ದಿರಿಸಲಾಗಿದೆ. ಇದರಲ್ಲಿ ಉಳಿದ 7.97 ಲಕ್ಷ ರೂ.ಗೆ ಕ್ರಿಯಾಯೋಜನೆ ತಯಾರಿಸಲು ಸದಸ್ಯರು ಸೂಚನೆ ನೀಡಬೇಕು ಎಂದರು.
3.5 ಲಕ್ಷ ರೂ.ನಲ್ಲಿ ಎರೆಹುಳು ಗೊಬ್ಬರ ತಯಾರಿಸುವ ಘಟಕ ನಿರ್ಮಿಸಲಾಗವುದು. 3.27ಕಿ.ಮೀ. ರಾಜಕಾಲುವೆ ಪೈಕಿ 1.8 ಕಿ.ಮೀ. ಸ್ವಚ್ಛತೆ ಕೈಗೊಳ್ಳಲಾಗಿದೆ. ಜೆಸಿಬಿ, ಹಿಟಾಚಿ, ಟ್ರ್ಯಾಕ್ಟರ್,ಕೂಲಿ ಸೇರಿ ಒಟ್ಟು 2.59 ಲಕ್ಷ ರೂ. ಖರ್ಚುಮಾಡಲಾಗಿದೆ. ಇದಕ್ಕೆ ಸಾರ್ವಜನಿಕರಿಂದಮೆಚ್ಚುಗೆ ವ್ಯಕ್ತವಾಗಿದೆ. ಮಳೆಗಾಲದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲದೇ ಸರಾಗವಾಗಿ ಹರಿಯಲಿದೆ ಎಂದರು.
ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ವಿದ್ಯಾ ದೊಡ್ಡಮನಿ, ಉಪಾಧ್ಯಕ್ಷ ಮಿಥುನ ಪಾಟೀಲ, ಮುಖ್ಯಾಧಿಕಾರಿಎಂ.ಎ.ನೂರುಲ್ಲಾಖಾನ, ಸದಸ್ಯರಾದ ಮಲ್ಲಯ್ಯ ಮಹಾಪುರು ಮಠ, ಗದಿಗೆಪ್ಪ ಕಿರೇಸೂರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ