ಹತ್ತು ಮೆಟ್ಟಿಲು ಹತ್ತಲು ಹತ್ತು ಅಂಶ


Team Udayavani, Nov 25, 2019, 1:07 PM IST

gadaga-tdy-2

ಗದಗ: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಬರೋಬ್ಬರಿ ಒಂದು ದಶಕದಷ್ಟು ಹಿನ್ನಡೆದಿದೆ. 2013, 2014ರಲ್ಲಿ ಕ್ರಮವಾಗಿ ಗರಿಷ್ಠ ಶೇ.81.85ರಷ್ಟು ಅಂಕಗಳಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆ, ಕಳೆದ 2-3 ವರ್ಷಗಳಿಂದ ಪಾತಾಳದತ್ತ ಜಾರುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಗೊಂಡಾಗ ಕೇಳಿ ಬಂದ ಸುಧಾರಣೆಯ ಮಾತುಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಅದಕ್ಕೀಗ ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ಬಿಸಿ ಮುಟ್ಟಿಸಿದ್ದಾರೆ. ಜಿಪಂ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಫಲಿತಾಂಶವನ್ನು ಮೇಲೆತ್ತಲು ಹಲವು ಕಾರ್ಯಕ್ರಮಗಳ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಕಳೆದ ಏಪ್ರಿಲ್‌ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡು, ಶೇ.74.05ರಷ್ಟು ಅಂಕಗಳೊಂದಿಗೆ ರಾಜ್ಯಮಟ್ಟದ ಶ್ರೇಣಿಯಲ್ಲಿ 31ನೇ ಸ್ಥಾನಕ್ಕೆ ಕುಸಿದಿತ್ತು. ಫಲಿತಾಂಶ ಪ್ರಕಟಗೊಂಡ ದಿನವೇ ಡಿಡಿಪಿಐ ಎನ್‌.ಎಚ್‌. ನಾಗೂರು ಸುಮಾರು 20 ಅಂಶಗಳ ಕಾರ್ಯಕ್ರಮ ಪ್ರಕಟಿಸಿದ್ದರು. ಆರಂಭದಲ್ಲಿ ಅವು ಜಾರಿಗೊಂಡಂತೆ ಕಂಡು ಬಂದರೂ, ನಂತರದ ದಿನಗಳಲ್ಲಿ ಅದೇ ಹಾಡು, ಅದೇ ರಾಗ ಎನ್ನುವಂತಾಗಿದೆ ಎಂಬ ಮಾತು ಶಿಕ್ಷಕರ ವಲಯದಲ್ಲೇ ಕೇಳಿ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಶನಿವಾರ ಸಂಜೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಇಲಾಖೆ ಕಾರ್ಯವೈಖರಿಗೆ ಜಿ.ಪಂ. ಅಧ್ಯಕ್ಷ ಸಿದ್ದು ಪಾಟೀಲ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಧ್ಯಕ್ಷರ ಸಮ್ಮುಖದಲ್ಲೇ, ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ರೂಪರೇಷಗಳನ್ನು ಸಿದ್ಧಗೊಳಿಸಿದ್ದಾರೆ. ಈ ಮೂಲಕ ಪ್ರಾಥಮಿಕ ಶಿಕ್ಷಣವನ್ನೂ ಬಲ ಪಡಿಸುವ ನಿಟ್ಟಿನಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ.

ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮಗಳೇನು?: ಈಗ ನಡೆಯುತ್ತಿರುವ ಪಾಕ್ಷಿಕ ಪರೀಕ್ಷೆ, ಫೋನ್‌ ಇನ್‌ ಕಾರ್ಯಕ್ರಮ, ವಿಷಯವಾರು ಸೆಮಿನಾರ್‌, ರಸಪ್ರಶ್ನೆ ಕಾರ್ಯಕ್ರಮ ಮುಂದುವರಿಕೆ. ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಸಿಕ ತಮ್ಮ ವ್ಯಾಪ್ತಿಯ ಸರಕಾರಿ ಶಾಲೆಯೊಂದರಲ್ಲಿ ವಾಸ್ತವ್ಯ ಮಾಡುವುದು ಕಡ್ಡಾಯ. ಆಯಾ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಶಿಕ್ಷಣ ಮಟ್ಟವನ್ನು ಪರಿಶೀಲಿಸಿ, ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು. ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳು, ಪಾಲಕರಿಗೆ ಮನವರಿಕೆ ಮಾಡುವುದು.

ಪ್ರತಿದಿನ ವಿಶೇಷ ತರಗತಿಗಳು, ಗುಂಪು ಅಧ್ಯಯನ ನಡೆಸಬೇಕು. ಹೋಬಳಿ ಮಟ್ಟದಲ್ಲಿ ಮಕ್ಕಳ ಜೊತೆಗೆ ಸಂವಾದ ನಡೆಸಬೇಕು. 16-11-2019 ರಿಂದ ಆರಂಭಿಸಲಾದ ನಿಧಾನ ಗತಿಯ ಮಕ್ಕಳಿಗೆ ಪ್ರತಿದಿನ ಮಧ್ಯಾಹ್ನ 3.30 ರಿಂದ 5.30 ರ ವರೆಗೆ ಎರಡು ಗಂಟೆ ಅವ ಗೆ ಬರವಣಿಗೆ ಕಲೆ ರೂಢಿಸುವುದು. 16-12-2019 ರಂದು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪರೀಕ್ಷೆ ನಡೆಸಿ, ಪ್ರಗತಿ ಪರಿಶೀಲನೆ ಮಾಡಬೇಕು ಎಂದು ನಿರ್ದೇಶಿಸಿದರು. ಬಿಇಒ ಅವರು ಪ್ರತಿ ವಾರ ಫಲಿತಾಂಶದಲ್ಲಿ ಹಿಂದುಳಿದ ನಾಲ್ಕು ಹೈಸ್ಕೂಲ್‌ ಭೇಟಿ ನೀಡಿ, 10ನೇ ತರಗತಿ ಮಕ್ಕಳ ಕಲಿಕಾ ಪ್ರಗತಿ ಅವಲೋಕಿಸಿ ವರದಿ ನೀಡಬೇಕು.

ಪ್ರತಿ ತಿಂಗಳಿಗೊಮ್ಮೆ ಡಿಡಿಪಿಐ ಅವರು ಬಿಇಒ ಅವರ ಸಭೆ ನಡೆಸಿ, ಪ್ರಗತಿ ಅವಲೋಕಿಸಬೇಕು. ಫೆಬ್ರವರಿ-2020ರ ಮೊದಲ ವಾರದಲ್ಲಿ ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಒಂದು ಪರೀಕ್ಷೆ ನಡೆಸಿ, ಮಕ್ಕಳಲ್ಲಿರುವ ಪರೀಕ್ಷಾ ಭಯವನ್ನು ನಿವಾರಿಸಬೇಕು ಎಂದು ಸೂಚಿಸಿದೆ. ಡಿ.1 ರಿಂದ ಓದಿನ ಮನೆ ಸ್ಥಾಪಿಸಿ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಮನೆಗಳಲ್ಲಿ ಓದಲು ಅವಕಾಶ ಇಲ್ಲದವರು ಸಂಜೆ 6 ರಿಂದ ರಾತ್ರಿ 9 ಗಂಟೆ ವರೆಗೆ ಪ್ರತಿ ಗ್ರಾಮದ ಪ್ರಾಥಮಿಕ ಅಥವಾ ಪ್ರೌಢ ಶಾಲೆಯಲ್ಲಿ (ಬಾಲಕರು ಮಾತ್ರ) ಒಂದು ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ ಮಾಡಲಾಗುವುದು.

 

-ವಿಶೇಷ ವರದಿ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.