ಬಿಂಕದಕಟ್ಟಿ ಸಣ್ಣ ಮೃಗಾಲಯದಲ್ಲಿ ಸ್ಪಿಂಕ್ಲರ್‌

ಸ್ಪಿಂಕ್ಲರ್‌ •37-38 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ •ಚಿಮ್ಮುವ ನೀರಿಗೆ ಮೈಯೊಡ್ಡುವ ವನ್ಯಜೀವಿಗಳು

Team Udayavani, Apr 29, 2019, 2:52 PM IST

gadaga-3-tdy

ಬಿಂಕದಕಟ್ಟಿ ಸಣ್ಣ ಮೃಗಾಲಯದಲ್ಲಿ ಜಿಂಕೆಗಳು ಸ್ಪಿಂಕ್ಲರ್‌ ನೀರಿನ ಕೆಳಗೆ ಮೈಯೊಡ್ಡುತ್ತಿರುವುದು

ಗದಗ: ದಿನ ಕಳೆದಂತೆ ಹೆಚ್ಚುತ್ತಿರುವ ತಾಪಮಾನದಿಂದ ವನ್ಯಜೀವಿಗಳು ಬಳಲುವುದನ್ನು ತಪ್ಪಿಸಲು ಬಿಂಕದಕಟ್ಟಿ ಸಣ್ಣ ಮೃಗಾಲಯ ಅಧಿಕಾರಿಗಳು ಹೊಸ ಉಪಾಯ ಕಂಡುಕೊಂಡಿದ್ದಾರೆ. ಮೃಗಾಲಯದ ಸೂಕ್ಷ್ಮ ಪ್ರಾಣಿ ಹಾಗೂ ಪಕ್ಷಿಗಳ ಪಂಜರಗಳಲ್ಲಿ ಸ್ಪಿಂಕ್ಲರ್‌ಗಳ ಮೂಲಕ ಕೃತಕ ಮಳೆ ಸೃಷ್ಟಿಸುವ ಮೂಲಕ ವನ್ಯಜೀವಿಗಳ ದೇಹ ತಣಿಸುವ ಪ್ರಯತ್ನ ನಡೆಸಿದ್ದಾರೆ.

ಹೌದು, ಸತತ ಬರ ಹಾಗೂ ಮಳೆ ಕೊರತೆಯಿಂದಾಗಿ ದಿನ ಕಳೆದಂತೆ ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದೊಂದು ವಾರದಿಂದ ಸರಾಸರಿ 37-38 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಬಿರು ಬಿಸಿಲಿನಿಂದಾಗಿ ಜನರೊಂದಿಗೆ ಜಾನುವಾರುಗಳು ಹಾಗೂ ವನ್ಯಜೀವಿಗಳೂ ಬಸವಳಿಯುತ್ತಿವೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಗಂಟೆಗಳ ಕಾಲ ಮರಗಳ ನೆರಳಿನ ಆಸರೆ ಪಡೆದರೂ, ಬಿಸಿಲಿನ ಬೇಗೆಯಿಂದ ಪರದಾಡುವಂತಾಗುತ್ತದೆ.

ತುಂತುರು ನೀರಾವರಿ ವ್ಯವಸ್ಥೆ:

ದಿನದಿಂದ ದಿನಕ್ಕೆ ಉಷ್ಣಾಂಶ ಏರುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ಗುಡ್ಡಗಾಡು ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಕೃತಕ ಹೊಂಡ ನಿರ್ಮಿಸಿ, ಅವುಗಳಿಗೆ ಟ್ಯಾಂಕರ್‌ ಮೂಲಕ ನೀರು ತುಂಬಿಸಲಾಗುತ್ತಿದೆ. ಇದಕ್ಕಿಂತ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಬಿಂಕದಕಟ್ಟಿ ಸಣ್ಣ ಮೃಗಾಲಯದ ಸಿಬ್ಬಂದಿ, ಬಿಸಿಲಿನ ತಾಪಕ್ಕೆ ತತ್ತರಿಸಿರುವ ಪ್ರಾಣಿ-ಪಕ್ಷಿ ರಕ್ಷಿಸಲು ತುಂತುರು ನೀರಾವರಿ ಮೊರೆ ಹೋಗಿದ್ದಾರೆ.

ಪ್ರತಿನಿತ್ಯ ಕೃತಕ ಮಳೆ: ಬಿಂಕದಕಟ್ಟಿ ಸಣ್ಣ ಮೃಗಾಲಯದಲ್ಲಿ ವಿವಿಧ ಜಾತಿಯ 350ಕ್ಕೂ ಹೆಚ್ಚು ಪ್ರಾಣಿ-ಪಕ್ಷಿಗಳಿವೆ. ಈ ಪೈಕಿ ಹುಲಿ, ಚಿರತೆ, ನರಿಗಳ ಬೋನ್‌ಗಳಲ್ಲಿ ಕೃತಕ ಹೊಂಡಗಳಿಗೆ ನೀರು ತುಂಬಿಸಲಾಗುತ್ತದೆ. ಇನ್ನುಳಿದಂತೆ ನೂರಾರು ಸಂಖ್ಯೆಯಲ್ಲಿರುವ ಜಿಂಕೆ, ಕಡಬೆ, ಆಸ್ಟ್ರಿಚ್ ಪಂಜರ ಹಾಗೂ ಪಕ್ಷಿಪಥದಲ್ಲಿ ಪ್ರತಿನಿತ್ಯ ಕೃತಕ ಮಳೆ ಸುರಿಸುತ್ತಿದ್ದಾರೆ. ಅದಕ್ಕಾಗಿ ಆಯಾ ಪ್ರಾಣಿ, ಪಕ್ಷಿಗಳ ಪಂಜರಗಳಲ್ಲಿ ಕೃಷಿಗೆ ಬಳಸುವ ಸ್ಪಿಂಕ್ಲರ್‌ ಅಳವಡಿಸಿದ್ದು, ಅದರ ಮೂಲಕ ದಿನ ನಿತ್ಯ ಮಧ್ಯಾಹ್ನ ಒಂದೆರಡು ಗಂಟೆಗಳ ಕಾಲ ಕೃತಕ ಮಳೆ ಸುರಿಸುತ್ತಿದ್ದಾರೆ. ಸ್ಪಿಂಕ್ಲರ್‌ಗಳ ಮೂಲಕ ಚಿಮ್ಮುವ ನೀರಿಗೆ ವನ್ಯಜೀವಿಗಳು ಮೈಯೊಡ್ಡಿ, ಆನಂದಿಸುತ್ತಿವೆ.

ಬಿಸಿಲೇರುತ್ತಿದ್ದಂತೆ ಪ್ರಾಣಿಗಳು ಸ್ಪಿಂಕ್ಲರ್‌ಗಳ ಕೆಳಗೆ ವಿಶ್ರಾಂತಿ ಪಡೆಯುತ್ತವೆ. ಹುಲಿಗಳ ಆವಾಸಕ್ಕೆ ಕಾಡಿನ ಸಹಜ ಪರಿಸರ ಹೋಲುವಂತೆ ಅಭಿವೃದ್ಧಿಪಡಿಸಿರುವ ‘ಟೈಗರ್‌ ಡೇಕ್ರಾಲ್’ನಲ್ಲಿ ಪುಟ್ಟ ಕೊಳ ನಿರ್ಮಿಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು ಹುಲಿ ದಿನದ ಬಹುತೇಕ ಸಮಯ ನೀರಿನಲ್ಲೇ ವಿರಮಿಸುತ್ತದೆ. ಇನ್ನು, ಚಿರತೆಗಳದ್ದೂ ಅದೇ ಪರಿಸ್ಥಿತಿ. ಎಮು ಪಕ್ಷಿಗಳಿಗಾಗಿ ಶೀಘ್ರದಲ್ಲೇ ‘ಕೆಸರಿನ ಹೊಂಡ’ ನಿರ್ಮಿಸಲಾಗುವುದು’ ಎಂದು ಮೃಗಾಲಯದ ಸಿಬ್ಬಂದಿ,ಎನ್ನುತ್ತಾರೆ

ಆಹಾರ ಕ್ರಮದಲ್ಲಿ ಅಲ್ಪ ಬದಲಾವಣೆ: ಬಿಸಿಲಿನ ತಾಪಮಾನ ಏರಿಕೆಯಾದ ಬೆನ್ನಲ್ಲೇ, ಮೃಗಾಲಯದ ಪ್ರಾಣಿಗಳ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಲಾಗಿ ದೆ. ಕರಡಿ, ಆಸ್ಟ್ರಿಚ್ ಮತ್ತು ಎಮು ಸೇರಿದಂತೆ ವಿವಿಧ ಪಕ್ಷಿಗಳಿಗೆ ಕಲ್ಲಂಗಡಿ ಸೇರಿದಂತೆ ಹೆಚ್ಚಿನ ನೀರಿನಂಶ ಇರುವ ಹಣ್ಣನ್ನು ಯಥೇಚ್ಛವಾಗಿ ನೀಡಲಾಗುತ್ತಿದೆ ಎನ್ನುತ್ತಾರೆ ಮೃಗಾಲಯದ ಸಿಬ್ಬಂದಿ.

 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.