ಒತ್ತಡ ನಿಗ್ರಹಕ್ಕೆ ಆಧ್ಯಾತ್ಮ ರಾಜಮಾರ್ಗ

ಆಧ್ಯಾತ್ಮ ಚಿಂತನೆಗಳಿಂದ ಸಾರ್ಥಕ ಬದುಕು ಸಾಕಾರಗೊಳ್ಳತ್ತದೆ

Team Udayavani, Dec 28, 2021, 6:11 PM IST

ಒತ್ತಡ ನಿಗ್ರಹಕ್ಕೆ ಆಧ್ಯಾತ್ಮ ರಾಜಮಾರ್ಗ

ಗದಗ: ಆಧುನಿಕತೆಯ ಇಂದಿನ ದಿನಗಳಲ್ಲಿ ಮನುಷ್ಯ ಅವಸರ, ಒತ್ತಡದಲ್ಲಿ ಬದುಕು ಸಾಗಿಸುತ್ತಿದ್ದಾನೆ. ಒತ್ತಡಗಳಿಂದಾಗಿ ಮಾನಸಿಕ ನೆಮ್ಮದಿ, ಕಾರ್ಯಕ್ಷಮತೆ ಕುಗ್ಗುತ್ತಿದೆ. ಅದನ್ನು ಸರಿಪಡಿಸಿಕೊಳ್ಳಲು ಅಧ್ಯಾತ್ಮ ದಾರಿಯೊಂದೇ ರಾಜಮಾರ್ಗ ಎಂದು ಆಧ್ಯಾತ್ಮ ವಿದ್ಯಾಶ್ರಮದ ಡಾ| ನೀಲಮ್ಮತಾಯಿ ಅಸುಂಡಿ ಹೇಳಿದರು.

ಗದುಗಿನ ಶ್ರೀ ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ನಡೆದ ಶ್ರೀ ಶಾರದಾ ದೇವಿಯ 169ನೇ ಜಯಂತ್ಯುತ್ಸವ ಹಾಗೂ ಜೀವಂತ ಶಾರದೆಯರ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ನಿತ್ಯ ಕಾಯಕದೊಂದಿಗೆ ಧಾರ್ಮಿಕ, ಆಧ್ಯಾತ್ಮ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಧಾರ್ಮಿಕ ಚಿಂತನ, ಧ್ಯಾನ, ಭಜನೆ, ಮನಸ್ಸಿಗೆ ಮುದ ನೀಡುವ ಲಘು ಸಂಗೀತ ಆಲಿಕೆ, ಯೋಗ, ವಾಯುವಿಹಾರ ಮುಂತಾದ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಅಂದಾಗ ಮಾತ್ರ ಒತ್ತಡ ನಿಗ್ರಹಗೊಂಡು, ಮನಸ್ಸು ನಿಯಂತ್ರಣ ಮತ್ತು ಶಾಂತಚಿತ್ತದಿಂದ ಇರುತ್ತದೆ. ಇದರಿಂದ ಮನಸ್ಸಿನಲ್ಲಿ ಚೈತನ್ಯ ಉಂಟಾಗಿ ನಮ್ಮ ಕಾಯಕದಲ್ಲಿ ಪ್ರಗತಿ ಸಾಧಿಸಲು
ಸಾಧ್ಯವಾಗುತ್ತದೆ. ಆಧ್ಯಾತ್ಮ ಚಿಂತನೆಗಳಿಂದ ಸಾರ್ಥಕ ಬದುಕು ಸಾಕಾರಗೊಳ್ಳತ್ತದೆ ಎಂದರು.

ಆಶ್ರಮದ ಪೂಜ್ಯ ಜಗನ್ನಾಥಾನಂದಜೀ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಶಾರದಾ ದೇವಿ ಅವರ ಜಯಂತಿ ಅಂಗವಾಗಿ ಬಡ ಮಹಿಳೆಯರಿಗೆ ಸೀರೆ, ಅಕ್ಕಿ, ಬೇಳೆ ನೀಡಿ ಆರತಿ ಮಾಡಿದ ಡಾ| ನೀಲಮ್ಮತಾಯಿ ಅಸುಂಡಿ ಹಾಗೂ ಜಗನ್ನಾಥಾನಂದಜೀ ಸ್ವಾಮೀಜಿ ಸಾಷ್ಟಾಂಗ ನಮಸ್ಕಾರ ಮಾಡಿ, ಅವರನ್ನೇ ಜೀವಂತ ಶಾರದೆ ಎಂದು ಭಕ್ತಿ ಸಮರ್ಪಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಜಗನ್ನಾಥಾನಂದಜೀ ಸ್ವಾಮೀಜಿ ನೇತೃತ್ವದಲ್ಲಿ ಶಾರದಾ ಪೂಜೆ, ಆರತಿ, ಪ್ರಾರ್ಥನೆ, ಹೋಮ, ಭಜನೆ ಇತರೆ ಕಾರ್ಯಕ್ರಮಗಳು ನಡೆದವು. ಮಹಾಪ್ರಸಾದದೊಂದಿಗೆ ಕಾರ್ಯಕ್ರಮಗಳು ಸಂಪನ್ನಗೊಂಡವು.

ಸಂಜೆ ಲಲಿತಾ ಸಹಸ್ರನಾಮ ನಾಮಾವಳಿ ಪಠಣ, ಕುಂಕುಮಾರ್ಚನೆ, ವಿಶೇಷ ಭಜನೆ, ಆರತಿ, ಡಾ| ನಾರಾಯಣ ಹಿರೇಕೊಳಚಿ, ಡಾ| ಹನುಮಂತ ಕೊಡಗಾನೂರ ಅವರಿಂದ ಸಂಗೀತ, ಉಪನ್ಯಾಸ, ಮಹಾಮಂಗಳಾರತಿ ಹಾಗೂ ಮಹಾಪ್ರಸಾದ ಜರುಗಿತು.

ಸಮಾರಂಭದಲ್ಲಿ ಬಾಗಮಾರ ದಂಪತಿ, ಪ್ರೊ| ಎಸ್‌.ವೈ. ಚಿಕ್ಕಟ್ಟಿ, ಶ್ರೀನಿವಾಸ ಹುಯಿಲಗೋಳ, ಡಾ| ರಾಧಿಕಾ ಕುಲಕರ್ಣಿ, ಡಾ| ಕುನಾಲ್‌ ಅಳ್ಳೊಳ್ಳಿ, ಡಾ|ಪುನೀತಕುಮಾರ ಬೆನಕನವಾರಿ, ರಂಗನಾಥ  ಹಟ್ಟಿ, ಕೇಶವರಾಮ ಕೊಳ್ಳಿ, ಮುಕುಂದ ಪೊತ್ನಿಸ್‌, ಈಶ್ವರಪ್ಪ ಹಂಚಿನಾಳ, ಡಾ| ಕೆ. ಯೋಗೇಶನ್‌ ಮತ್ತಿತರರುಪಾಲ್ಗೊಂಡಿದ್ದರು. ಎಸ್‌.ಎಚ್‌. ದೇಶಪ್ಪನವರ ನಿರೂಪಿಸಿದರು. ರಾಮಚಂದ್ರ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.