ಶ್ರೀ ಕಾಲಕಾಲೇಶ್ವರ ಸ್ವಾಮಿ ಮಹಾ ರಥೋತ್ಸವ

ದಕ್ಷಿಣ ಕಾಶಿ ಖ್ಯಾತಿಯ ಶ್ರೀ ಕಾಲಕಾಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

Team Udayavani, Apr 17, 2022, 3:22 PM IST

21

ಗಜೇಂದ್ರಗಡ: ನಾಡಿನ ಅಸಂಖ್ಯಾತ ಭಕ್ತರ ಆರಾಧ್ಯ ದೈವ ದಕ್ಷಿಣ ಕಾಶಿ ಖ್ಯಾತಿಯ ಐತಿಹಾಸಿಕ ಶ್ರೀ ಕಾಲಕಾಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪುಷ್ಪಾಲಂಕೃತ ಮಹಾ ರಥೋತ್ಸವ ಶನಿವಾರ ಮುಗಿಲು ಮುಟ್ಟಿದ ಸದ್ಭಕ್ತರ ಹರ್ಷೋ ದ್ಘಾರಗಳ ಮಧ್ಯೆ ಸಂಭ್ರಮದಿಂದ ನಡೆಯಿತು.

ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಗ್ಗೆಯಿಂದಲೇ ಶ್ರೀ ಕಾಲಕಾಲೇಶ್ವರನಿಗೆ ವಿಶೇಷ ಪೂಜೆ, ಹೋಮ-ಹವನಗಳು ನಡೆದವು. ಕ್ಷೇತ್ರದ ಧರ್ಮದರ್ಶಿಗಳಾದ ಮಂಗಳಾದೇವಿ ದೇಶಮುಖ, ಕೀರ್ತಿಮಾಲಿನಿ ಘೋರ್ಪಡೆ ಅವರು ಬೆಳಿಗ್ಗೆ ಕುಶಾಲ ತೊಪುಗಳ ಭಕ್ತಿ ಗೌರವ ಸಮರ್ಪಣೆ ಮಾಡುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಂಜೆ ವಿಶೇಷ ಪೂಜೆಯ ಬಳಿಕ ದವನಾರ್ಪಣೆ ಸಲ್ಲಿಸಿ ಭಕ್ತ ಸಮೂಹ ಹರಹರ ಮಹಾದೇವ, ಶ್ರೀ ಕಾಲಕಾಲೇಶ್ವರ ಮಹರಾಜ ಕೀ ಜೈ ಎಂಬ ಜೈಕಾರ ಮೊಳಗಿಸುತ್ತ, ಭಜನೆ, ಝಾಂಜ ಮೇಳ, ಡೊಳ್ಳು, ನಾನಾ ಸಂಗೀತ ವಾದ್ಯವೈಭವಗಳೊಂದಿಗೆ ನಂದಿಕೊಲು ಛತ್ರ ಚಾಮರ ಸಹಿತ ಭಕ್ತಿಭಾವದಿಂದ ತೇರು ಎಳೆದು ಕೃತಾರ್ಥರಾದರು.

ಹರಿದು ಬಂದು ಭಕ್ತ ಸಮೂಹ: ಹತ್ತಾರು ಪವಾಡ ಸದೃಶ ವಿಶಿಷ್ಟತೆಗಳನ್ನು ಹೊಂದಿರುವ ಶ್ರೀ ಕಾಲಕಾಲೇಶ್ವರನ ಜಾತ್ರೆಯ ದಿನದಂದು ದೂರದೂರಿನಿಂದ ಭಕ್ತರು ದೇವರ ದರ್ಶನ ಭಾಗ್ಯ ಪಡೆಯಲು ಆಗಮಿಸಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ಶ್ರೀ ಕಾಲಕಾಲೇಶ್ವರ ಜಾತ್ರೆಯಂದು ನೀರಿಕ್ಷೆಗೂ ಮೀರಿ ರಾಜ್ಯ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯಗಳಿಂದ ಭಕ್ತ ಸಮೂಹದ ದಂಡೇ ಹರಿದು ಬಂದಿತ್ತು.

ಪೊಲೀಸ್‌ ಬಂದೋಬಸ್ತ್: ಕೋವಿಡ್‌ನಿಂದಾಗಿ ಎರಡು ವರ್ಷಗಳ ಕಾಲ ರಥೋತ್ಸವ ರದ್ದು ಮಾಡಿದ್ದರಿಂದ ಈ ಬಾರಿ ಅದ್ಧೂರಿಯಾಗಿ ಜಾತ್ರೆ ಆಚರಿಸಬೇಕು ಎನ್ನುವ ಭಕ್ತರ ಅಭಿಲಾಷೆಯಂತೆಯೇ, ಮಹಾರಥೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಠಾಣೆ ವತಿಯಿಂದ ಪೊಲೀಸ್‌ ಚೆಕ್‌ಪೋಸ್ಟ್‌ ತೆರೆದು ವಾಹನಗಳನ್ನು 2 ಕಿ.ಮೀ. ದೂರದಲ್ಲೇ ನಿಲ್ಲಿಸಿ, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್‌ ಅಧಿಕಾರಿಗಳು ಮಾಡಿದ್ದರು.

ವರುಣನ ಸಿಂಚನ: ಸ್ವಯಂಭು ಲಿಂಗ ಶ್ರೀ ಕಾಲಕಾಲೇಶ್ವರನ ಸನ್ನಿಧಾನದಲ್ಲಿ ಮಹಾರ ಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ವರುಣ ದೇವ ಸಿಂಚನಗೈಯುವ ಮೂಲಕ ರಥೋತ್ಸವಕ್ಕೆ ಶುಭ ಕೋರಿದಂತಾಯಿತು. ಜಾತ್ರಾ ಮಹೋತ್ಸವದಲ್ಲಿ ಸುರಿದ ಮಳೆ ಶುಭ ಸೂಚನೆಯಾಗಿದೆ ಎನ್ನುತ್ತಲೇ ಭಕ್ತರು ಹರಹರ ಮಹಾದೇವ ಉದ್ಘೋಷದೊಂದಿಗೆ ರಥೋತ್ಸವದಲ್ಲಿ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.