ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು; 310 ಮಂದಿ ಗೈರು
ಸಿ.ಎಸ್. ಪಾಟೀಲ ಪ್ರೌಢಶಾಲಾ ಕೇಂದ್ರದಲ್ಲಿ ಹಿಜಾಬ್ ಸದ್ದು
Team Udayavani, Mar 29, 2022, 2:54 PM IST
ಗದಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಸೋಮವಾರದಿಂದ ಆರಂಭಗೊಂಡಿತು. ನಗರದ ಸಿ.ಎಸ್. ಪಾಟೀಲ ಪ್ರೌಢಶಾಲಾ ಪರೀಕ್ಷಾ ಕೇಂದ್ರ ಹೊರತುಪಡಿಸಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯಿತು.
ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಹೆಸರು ನೋಂದಾಯಿಸಿಕೊಂಡಿದ್ದ 16,476 ಪೈಕಿ 8048 ಗಂಡು, 8118 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 16166 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.
ಜಿಲ್ಲೆಯ 66 ಪರೀಕ್ಷಾ ಕೇಂದ್ರಗಳ ಪೈಕಿ ಗದಗ ಶಹರ ವಲಯದಲ್ಲಿ 121 ವಿದ್ಯಾರ್ಥಿಗಳು, ಗ್ರಾಮೀಣ ವ್ಯಾಪ್ತಿಯಲ್ಲಿ 37, ಮುಂಡರಗಿ ತಾಲೂಕಿನಲ್ಲಿ 50, ನರಗುಂದ ತಾಲೂಕಿನಲ್ಲಿ 9, ರೋಣ ತಾಲೂಕಿನಲ್ಲಿ 43 ಮತ್ತು ಶಿರಹಟ್ಟಿ ತಾಲೂಕಿನಲ್ಲಿ 48 ವಿದ್ಯಾರ್ಥಿಗಳು ಸೇರಿ ಒಟ್ಟು 310 ಗೈರಾಗಿದ್ದಾರೆ.
ಪರೀಕ್ಷಾ ಅಕ್ರಮಗಳ ತಡೆಗಾಗಿ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲಾದ್ಯಂತ ಬಿಗಿ ಭದ್ರತೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಯಿತು. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಡಿಬಾರ್ ಮತ್ತು ನಕಲು ಅವ್ಯವಹಾರ ನಡೆದಿಲ್ಲವೆಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ತೆಗೆದಿಟ್ಟ ವಿದ್ಯಾರ್ಥಿನಿಯರು: ನಗರದ ಸಿ.ಎಸ್. ಪಾಟೀಲ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬಂದು ಪರೀಕ್ಷೆ ಬರೆಯುತ್ತಿದ್ದರು ಎಂಬ ಆರೋಪ ಕೇಳಿ ಬಂದಿತು. ಆದರೆ, ಪರೀಕ್ಷೆ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಇರುವ ಮೇಜುಗಳಲ್ಲಿ ಕುಳಿತಿದ್ದರು. ಆ ವೇಳೆಗೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ವಿತರಿಸಲಾಗಿರಲಿಲ್ಲ. ಬೆಲ್ ಕೂಡಾ ಆಗಿರಲಿಲ್ಲ. ಬೆಲ್ ಆಗುವ ಮುನ್ನವೇ ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಲಾಯಿತು. ಹಿಜಾಬ್ ಧರಿಸಲು ಹಾಗೂ ತೆಗೆದಿರಿಸಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.
ಸಿ.ಎಸ್.ಪಾಟೀಲ ಶಾಲೆಯಲ್ಲಿ ಹಿಜಾಬ್ ಧರಿಸಿದ್ದ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಡಿಡಿಪಿಐ ಅವರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಸರಕಾರದ ನಿಯಮಗಳನ್ನು ಯಥಾವತ್ತಾಗಿ ಪಾಲಿಸಲಾಗಿದೆ.
-ಆರ್.ಎಲ್.ಮ್ಯಾಗೇರಿ, ಶಹರ ಬಿಇಒ
ಸಿ.ಎಸ್.ಪಾಟೀಲ ಪ್ರೌಢಶಾಲೆಯಲ್ಲಿ ಪರೀಕ್ಷೆ ಪೂರ್ವದಲ್ಲಿ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಬಂದಿದ್ದರು. ನಂತರ ಶಿಕ್ಷಕರು ಹಿಜಾಬ್ ತೆಗೆಸಿ ಪರೀಕ್ಷೆ ಬರೆಸಿದ್ದಾರೆ. ಶಾಲೆಯ ವಿಡಿಯೋಗಳ ಪರಿಶೀಲನೆ ಮಾಡಲಾಗಿದೆ. ವಿದ್ಯಾರ್ಥಿಗಳು ನಂತರ ಹಿಜಾಬ್ ತೆಗೆದು ಪರೀಕ್ಷೆ ಬರೆದಿದ್ದು ಕಂಡುಬಂದಿದೆ. ಸರಕಾರದ ಆದೇಶಕ್ಕೆ ಎಲ್ಲೂ ಧಕ್ಕೆಯಾಗಿಲ್ಲ.
-ಜಿ.ಎಂ. ಬಸವಲಿಂಗಪ್ಪ, ಡಿಡಿಪಿಐ
ಏಕಾಗ್ರತೆ ಹೆಚ್ಚಿಸಲು ಧ್ಯಾನ: ಭೂಮರೆಡ್ಡಿ ಸರ್ಕಲ್ ಸಮೀಪದ ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ಮೂರು ನಿಮಿಷಗಳ ಕಾಲ ಧ್ಯಾನ ಮಾಡಿಸಲಾಯಿತು. ಪರೀಕ್ಷೆ ಆರಂಭಕ್ಕೂ ಅರ್ಧ ಗಂಟೆ ಮುನ್ನವೇ ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಲು ಶಾಲೆಯ ಮುಖ್ಯಗುರು ಕೊಟ್ರೇಶ್ ಮೆಣಸಿನಕಾಯಿ ಹಾಗೂ ಸಹ ಶಿಕ್ಷಕರು ಪ್ರೇರಣಾದಾಯಕ ಮಾತುಗಳನ್ನಾಡಿದರು. ಯಾವುದೇ ಕಾರಣಕ್ಕೂ ವಿಚಿಲಿತರಾಗಬಾರದು. ಪ್ರತಿಯೊಂದು ಪ್ರಶ್ನೆಗಳಿಗೂ ಸಮಚಿತ್ತ ಉತ್ತರಿಸಬೇಕು. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್