ಶಿಕ್ಷಕ ಈಶ್ವರಪ್ಪ ರೇವಡಿಗೆ ರಾಜ್ಯ ಪ್ರಶಸ್ತಿ ಗರಿ

ಮಕ್ಕಳಿಗೆ ಜ್ಞಾನಾಮೃತ-ಕನ್ನಡ ನಾಡು-ನುಡಿ ಸೇವೆ ಜತೆ ಸಾಮಾಜಿಕ ಕಾರ್ಯದಲ್ಲೂ ಹಾಸುಹೊಕ್ಕಾದ ಸಾಧಕ

Team Udayavani, Sep 5, 2022, 1:00 PM IST

9

ಗಜೇಂದ್ರಗಡ: ಕೋಟೆ ನಾಡಿನ ಭಾಗದಲ್ಲಿ ಕನ್ನಡ ಕಟ್ಟುವಲ್ಲಿ ಅಹರ್ನಿಶಿ ಶ್ರಮಿಸುತ್ತ, ಸಾಮಾಜಿಕ ಜೀವನದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು, ಮಕ್ಕಳಿಗೆ ಜ್ಞಾನಾಮೃತ ನೀಡುತ್ತಿರುವ ಮಾದರಿ ಶಿಕ್ಷಕ ಈಶ್ವರಪ್ಪ ರೇವಡಿ ಅವರು ಈ ಬಾರಿಯ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹೌದು, ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ಏನೆಲ್ಲಾ ಮಾಡಬಹುದು ಎಂಬುದಕ್ಕೆ ಈಶ್ವರಪ್ಪ ರೇವಡಿ ಮಾದರಿಯಾಗಿ ನಿಲ್ಲುತ್ತಾರೆ. ರೋಣ-ಗಜೇಂದ್ರಗಡ ತಾಲೂಕಿನ ಪ್ರತಿ ನಗರ, ಗ್ರಾಮಗಳ ಮನೆ, ಮನೆಗಳಲ್ಲೂ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ.

ಇದಕ್ಕಷ್ಟೇ ಸೀಮಿತವಾಗದೇ, ಮಕ್ಕಳ ಮೆಚ್ಚಿನ ಮೇಸ್ಟ್ರೆ ಆಗಿ ಹೊರಹೊಮ್ಮುವ ಮೂಲಕ ಈ ಭಾಗದ ಮಾದರಿ ಶಿಕ್ಷಕರಾಗಿದ್ದಾರೆ. ತಾಲೂಕಿನ ಹಿರೇಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಈಶ್ವರಪ್ಪ ರೇವಡಿ ಅವರು, ಪಠ್ಯದ ಜತೆ ಹಲವಾರು ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಶಾಲೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಓದಿನ ಬೆಳವಣಿಗೆಗಷ್ಟೇ ಅಲ್ಲ, ಅವರಲ್ಲಿ ಸಮಾಜದ ಆಗು ಹೋಗುಗಳ ಬಗ್ಗೆಯೂ ಅರಿವು ಮೂಡಿಸುವುದಲ್ಲದೇ, ವೈಶಿಷ್ಟತೆಯಿಂದ ಶಿಕ್ಷಣ ನೀಡುತ್ತಿದ್ದಾರೆ.

ಶಿಕ್ಷಕ ಐ.ಎ. ರೇವಡಿ ಅವರು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷರಾಗಿಯೂ ಸವೆ ಸಲ್ಲಿಸುತ್ತಿದ್ದಾರೆ. ಶಾಲಾ ರಜೆ ದಿನಗಳಲ್ಲಿ ಬೇಸಿಗೆ ಶಿಬಿರಗಳಂತಹ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೊಸತನಕ್ಕೆ ಸಾಕ್ಷಿಯಾಗಿದ್ದಾರೆ. ಒಂದಿಲ್ಲೊಂದು ಸಾಮಾಜಿಕ ಸೇವೆಯಲ್ಲಿರುವ ಇವರು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ, ಸಹಕಾರ ಮಾಡುವುದಲ್ಲದೇ, ಇದು ನನ್ನದಲ್ಲ, ನಮ್ಮದು ಎಂಬ ಉದಾರ ಮನೋಭಾವ ಹೊಂದಿದವರದ್ದಾಗಿದೆ.

ರೇವಡಿ ಮೇಸ್ಟ್ರಿಗೆ ರಾಜ್ಯ ಪ್ರಶಸ್ತಿ ಗರಿ: ಶಿಕ್ಷಕ ಈಶ್ವರಪ್ಪ ರೇವಡಿ ಅವರ ಈ ಸೇವೆ ಇಂದು, ನೆನ್ನೆಯದಲ್ಲ. ಇದಕ್ಕೆ ಹಲವಾರು ವರ್ಷಗಳ ಇತಿಹಾಸವಿದೆ. ಸಂಕಷ್ಟದಲ್ಲಿರುವವರ ನೆರವಿಗೆ ಭಾಗ್ಯದಾತನಾಗಿ, ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾತನಾಗಿ, ಹಿಂದುಳಿದ ಸಮುದಾಗಳ ಪಾಲಿಗೆ ಭಾವೈಕ್ಯದಾತನಾಗಿ ನಿಸ್ವಾರ್ಥ ಸೇವೆಗೈಯುತ್ತಿರುವ ಇವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೌರವಾದರವಾಗಿದೆ. ಹೀಗಾಗಿ, ಶಿಕ್ಷಕ ಈಶ್ವರಪ್ಪ ರೇವಡಿ ಅವರ ಜ್ಞಾನ ದೀವಿಗೆಗೆ ಪ್ರಶಸ್ತಿಯ ಗರಿ ಮೂಡಿರುವುದು ಅಭಿಮಾನಿಗಳಲ್ಲಿ ಹರ್ಷ ಇಮ್ಮಡಿಗೊಳಿಸಿದೆ.

ಸನ್ನಡತೆಯ ಸಾಕಾರಮೂರ್ತಿ: ಯಾವುದೇ ವ್ಯಕ್ತಿಗೆ ನಿರಾಡಂಬರದ ಜೀವನ, ಸನ್ನಡತೆ, ಸಚ್ಚಾರಿತ್ರ್ಯದಿಂದ ಭೇದಭಾವವಿಲ್ಲದೆ ಸರ್ವರಲ್ಲೂ ಬೆರೆತು ಸೇವೆ ಮಾಡುವ ಮನೋಭಾವ ಅಗತ್ಯವಾಗಿರುತ್ತದೆ. ಇಂತಹ ಮನೋವೃತ್ತಿಯ ಮಹಾಚೇತನ ಶಿಕ್ಷಕ ಐ.ಎ. ರೇವಡಿ ಅವರ ಸರಳತೆ, ಸಜ್ಜನಿಕೆ, ಮಾನವ ಪ್ರೇಮ ಅಮೋಘವಾದದ್ದಾಗಿದೆ. ಬಡ ಮಕ್ಕಳಿಗೆ ಟ್ಯಾಬ್‌ ವಿತರಣೆ: ಕೋವಿಡ್‌ ಸಂಕಷ್ಟದಿಂದಾಗಿ ಮಕ್ಕಳಿಗೆ ಶಿಕ್ಷಣ ನೀಡಲು ಶಾಲೆಗಳು ಸ್ಥಗಿತಗೊಂಡಿದ್ದವು. ಆದರೆ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಆನ್‌ ಲೈನ್‌ ತರಗತಿ ನಡೆಸುತ್ತಿದ್ದ ಸಂದರ್ಭದಲ್ಲಿ ಬಡ ಮಕ್ಕಳಿಗೆ ತರಗತಿ ವೀಕ್ಷಣೆಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ತಾಲೂಕಿನ ಕಡು ಬಡ ಮಕ್ಕಳಿಗೆ 10 ಟ್ಯಾಬ್‌ ನೀಡಿ ಮಾನವೀಯತೆ ಮೆರೆದ ಹಿರಿಮೆ ರೇವಡಿ ಅವರದ್ದಾಗಿದೆ.

ಇಂದು ಪ್ರಶಸ್ತಿ ಪ್ರದಾನ

ಈಗಾಗಲೇ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಶಿಕ್ಷಕ ಈಶ್ವರಪ್ಪ ರೇವಡಿ ಅವರಿಗೆ ಸೆ. 5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಆಚಾರ ವಿಚಾರಗಳಲ್ಲಿ ಪರಿಶುದ್ಧತೆ, ಸರಳ ನಿಸ್ವಾರ್ಥ ಜೀವನ ತಮ್ಮದೆಲ್ಲವನ್ನು ಶಾಲೆಗೆ, ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ತನ್ನವರು, ತನ್ನದು ಎನ್ನುವುದು ಏನೂ ಇಲ್ಲ ಎಂಬ ತತ್ವದಡಿ ಶಿಕ್ಷಕ ಈಶ್ವರಪ್ಪ ರೇವಡಿ ಹಚ್ಚಿದ ಜ್ಞಾನದ ದೀವಿಗೆ ರಾಜ್ಯದ ತುಂಬೆಲ್ಲಾ ಪಸರಿಸಿದೆ. ಅವರಿಗೆ ದೊರೆತಿರುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಮೆ ಬಂದಂತಾಗಿದೆ.  –ಶ್ರೀ ವಿಜಯಮಹಾಂತ ಸ್ವಾಮೀಜಿ ಮೈಸೂರ ಸಂಸ್ಥಾನ ಮಠ

ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿದರೆ ಸುಂದರ ಸಮಾಜ ಕಟ್ಟಬಹುದು. ನನ್ನ ಅಳಿಲು ಸೇವೆಯನ್ನು ಸರ್ಕಾರ ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ.  -ಐ.ಎ. ರೇವಡಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕ

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.