ಬಲವಂತದ ಸಮೀಕ್ಷೆ ನಿಲ್ಲಿಸಿ
Team Udayavani, Jul 6, 2019, 11:05 AM IST
ಗದಗ: ನಗರಸಭೆ ಅಭಿಯಂತರ ಎಲ್.ಜಿ.ಪತ್ತಾರ್ ಅವರಿಗೆ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಮನವಿ ಸಲ್ಲಿಸಿತು.
ಗದಗ: ಸ್ಲಂ ಪ್ರದೇಶದಲ್ಲಿ ಬಲವಂತದ ಸಮೀಕ್ಷೆ ನಿಲ್ಲಿಸಿ, ವಸತಿ ರಹಿತ ಕುಟುಂಬಗಳಿಗೆ ಮನೆ ಕಲ್ಪಿಸಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸಮಿತಿ ಪದಾಧಿಕಾರಿಗಳು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ, ಅವಳಿ ನಗರದಲ್ಲಿ ಸರಿಸುಮಾರು 70ಕ್ಕೊ ಹೆಚ್ಚು ಕೊಳಚೆ ಪ್ರದೇಶಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳಿಲ್ಲದೇ, 60 ಸಾವಿರಕ್ಕೊ ಹೆಚ್ಚು ಸ್ಲಂ ನಿವಾಸಿಗಳು ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರದ ಗಂಗಿಮಡಿ ಆಶ್ರಯ ಕಾಲೋನಿ ಬಳಿ 3,630 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಪೌರಾಯುಕ್ತರ ಆದೇಶದ ಮೇರೆಗೆ ನಗರದ ಕೊಳಚೆ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸುತ್ತಿರುವ ನಗರಸಭೆ ಸಿಬ್ಬಂದಿಗಳು ಪುನರ್ವಸತಿ ನೆಪ್ಪದಲ್ಲಿ ಕೊಳಗೇರಿಗಳನ್ನು ಎತ್ತಂಗಡಿಗೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ನಗರದಲ್ಲಿ ಘೋಷಣೆಯಾಗಿರುವ ಕೊಳಚೆ ಪ್ರದೇಶಗಳಿಗೆ ನಗರಸಭೆಯಿಂದ ಫಾರ್ಮ ನಂ-3 ನೀಡಬೇಕೆಂದು ಒತ್ತಾಯಿಸಿ ಸುಮಾರು ವರ್ಷಗಳಿಂದ ಸಂಘಟನೆಯ ಮೂಲಕ ನಿರಂತರ ಹೋರಾಟ ನಡೆಸಿ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು. ಸಹ ನಗರಸಭೆ ಪೌರಾಯುಕ್ತರು ಮತ್ತು ಸಿಬ್ಬಂದಿಗಳು ಸ್ಲಂ ಜನರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕೊಡಲೇ ನಗರಸಭೆ ಪೌರಾಯುಕ್ತರು ಘೋಷಣೆಯಾಗಿರುವ ಕೊಳಚೆ ಪ್ರದೇಶಗಳನ್ನು ವಸತಿ ನೆಪ್ಪದಲ್ಲಿ ಸಮೀಕ್ಷೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಇಮ್ತಿಯಾಜ ಮಾನ್ವಿ, ರವಿಕುಮಾರ ಬೆಳಮಕರ, ಮೆಹರುನಿಸಾ ಢಾಲಾಯತ, ತಮನ್ನಾ ಧಾರವಾಡ, ಉಸ್ಮಾನ ಚಿತ್ತಾಪೂರ, ರಫೀಕ ಧಾರವಾಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು