ಸದೃಢ ಯುವಕರಿಂದ ಬಲಿಷ್ಠ ಸಮಾಜ ನಿರ್ಮಾಣ
ಯಾವುದೇ ರೀತಿಯ ಉದ್ವೇಗಕ್ಕೆ ಒಳಗಾಗದೇ ಶಾಂತಿ, ಸಮಾಧಾನದಿಂದ ವರ್ತಿಸಬೇಕು
Team Udayavani, Dec 16, 2021, 6:18 PM IST
ಗದಗ: ಮಾದಕ ವಸ್ತುಗಳು, ಗುಟ್ಕಾ, ತಂಬಾಕು ಸೇವನೆಯಿಂದ ಯುವಜನರ ಆರೋಗ್ಯ ಕ್ಷೀಣಿಸುತ್ತಿದೆ. ಸದೃಢ ಯುವಕರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯವಾಗಬೇಕಾದರೆ ದುಶ್ಚಟಗಳಿಂದ ದೂರವಾಗಬೇಕು ಎಂದು ಡಾ|ಎಸ್.ಸಿ.ಮಲ್ಲಾಡದ ಹೇಳಿದರು.
ಡಾ|ಎಸ್.ಸಿ.ಮಲ್ಲಾಡದ ಅವರ ಅಭಿಮಾನಿಗಳು, ಸಮಾನ ಮನಸ್ಕರು ನಗರದ ಮಲ್ಲಾಡದ ಅವರ ಕಟ್ಟಡದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣದಲ್ಲಿ ವೈದ್ಯ ಹಾಗೂ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು, ಜನರ ಸೇವೆ ಸಲ್ಲಿಸಿರುವುದು ಸ್ಮರಣೀಯ ಎಂದರು.
ಕೊರೊನಾ ಅವ ಧಿಯಲ್ಲಿ ಹೆರಿಗೆ, ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಭಯಂಕರ ಕಾಯಿಲೆಗಳನ್ನೂ ಸಹ ವೈದ್ಯ ವೃಂದ ಸಲ್ಲಿಸಿದ ಸೇವೆ ಅಮೋಘ. ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಅನಾರೋಗ್ಯದ ಸಂದರ್ಭದಲ್ಲಿ ಯಾವುದೇ ರೀತಿಯ ಉದ್ವೇಗಕ್ಕೆ ಒಳಗಾಗದೇ ಶಾಂತಿ, ಸಮಾಧಾನದಿಂದ ವರ್ತಿಸಬೇಕು ಎಂದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಚಂದ್ರು ಬಾಳಿಹಳ್ಳಿಮಠ, ಡಾ|ಎಸ್.ಸಿ.ಮಲ್ಲಾಡದ ಅವರ ಬಗ್ಗೆ ಅಭಿನಂದನಾ ಪರ ಮಾತನಾಡಿದರು. ಇದೇ
ವೇಳೆ ಡಾ|ಮಲ್ಲಾಡದ, ಕುಸುಮಾ ದಂಪತಿಯನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ|ಶ್ರೀಧರ ಕುರಡಗಿ, ಡಾ|ಜಗದೀಶ ಭೂಮರಡ್ಡಿ, ಡಾ|ನಾರಾಯಣ ಬುರಬುರೆ, ಡಾ|ಉಮೇಶ ಹಾದಿ, ಪತ್ರಕರ್ತ ಮಂಜುನಾಥ ಅಬ್ಬಿಗೇರಿ, ಚನ್ನಯ್ಯ ಹಿರೇಮಠ, ಲೆಕ್ಕ ಪರಿಶೋಧಕ ಕೆ.ಎಸ್.ಚೆಟ್ಟಿ, ಎಸ್.ಎಸ್.ಚೆಟ್ಟಿ, ಚೆನ್ನವೀರಪ್ಪ ಸರ್ವಿ, ಎಸ್.ಆರ್.ನಂದಿವಾಡ, ಸ್ವರೂಪ ಮುದ್ದಳ್ಳಿ ಮತ್ತು ಮಲ್ಲಾಡದ ಬಂಧುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು