ಏತ ನೀರಾವರಿ ಯೋಜನೆಗೆ ಹೋರಾಟ
•ಆಡಳಿತಾತ್ಮಕ-ಹಣಕಾಸು ನೆಪವೊಡ್ಡಿ ಪೂರ್ಣಗೊಳಿಸದೆ ವಿಳಂಬ ಧೋರಣೆ
Team Udayavani, Jul 8, 2019, 10:25 AM IST
ಗಜೇಂದ್ರಗಡ: ಬಲಕುಂದಿ ಗ್ರಾಮದ ಬಳಿ ಇರುವ ಕೃಷ್ಣಾ ಬಿಸ್ಕಿಂ ಯೋಜನೆ ಜಲ ವಿದ್ಯುತ್ತೀಕರಣ ಘಟಕ.
ಗಜೇಂದ್ರಗಡ: ಗಜೇಂದ್ರಗಡ ಮತ್ತು ರೋಣ ತಾಲೂಕಿಗೆ ದೊರೆಯಬೇಕಾದ ಕೊಪ್ಪಳ ಸೂಕ್ಷ್ಮ ಏತ ನೀರಾವರಿ ಯೋಜನೆ ತೀವ್ರಗತಿಯಲ್ಲಿ ಕೈಗೊಳ್ಳುವಲ್ಲಿ ಸಂಸದರು ಮತ್ತು ಶಾಸಕರು ಇಚ್ಚಾಶಕ್ತಿ ಪ್ರದರ್ಶಿಸದಿರುವುದನ್ನು ಖಂಡಿಸಿ ಪ್ರತಿ ಗ್ರಾಮಗಳಲ್ಲಿಯೂ ಜನಜಾಗೃತಿ ಮೂಡಿಸಿ ಶೀಘ್ರದಲ್ಲೇ ನಿರಂತರ ಬೃಹತ್ ಹೋರಾಟ ನಡೆಸಲು ಕೃಷ್ಣಾ ಮೇಲ್ದಂಡೆ 3ನೇ ಹಂತದ ಕೊಪ್ಪಳ ಸೂಕ್ಷ್ಮ ಏತ ನೀರಾವರಿ ತಾಲೂಕು ಹೋರಾಟ ಸಮಿತಿ ಚಿಂತನೆ ನಡೆಸಿದೆ ಎಂದು ಎಂ.ಎಸ್. ಹಡಪದ ಹಾಗೂ ರವೀಂದ್ರ ಹೊನವಾಡ ತಿಳಿಸಿದ್ದಾರೆ.
ಬಾಕಲಕೋಟೆ ಜಿಲ್ಲೆ ಹುನಗುಂದ ತಾಲೂಕು ಬಲಕುಂದಿ ಹತ್ತಿರದ ವಿದ್ಯುತ್ತಿಕರಣ ಘಟಕಕ್ಕೆ ಭೇಟಿ ನೀಡಿದ ನಂತರ ರವಿವಾರ ಪ್ರಕಟಣೆ ನೀಡಿರುವ ಅವರು, 3ನೇ ಹಂತದ ಕೊಪ್ಪಳ ಸೂಕ್ಷ್ಮ ಏತ ನೀರಾವರಿ ಯೋಜನೆ 2013ರಲ್ಲಿಯೇ ಪ್ರಾರಂಭವಾಗಿದೆ. 2016ಕ್ಕೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಆದರೆ ಆಡಳಿತಾತ್ಮಕ ಹಾಗೂ ಹಣಕಾಸಿನ ಸಮಸ್ಯೆ ನೆಪವೊಡ್ಡಿ ಸರ್ಕಾರಗಳು ಯೋಜನೆ ಪೂರ್ಣಗೊಳಿಸದೇ ವಿಳಂಬ ನೀತಿ ತೋರುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.ಉತ್ತರ ಕರ್ನಾಟಕ ಬಹುತೇಕ ಮಳೆ ಆಶ್ರಿತ ವ್ಯವಸಾಯ ಹೊಂದಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಸಮರ್ಪಕ ಮಳೆಯಾಗದೇ ಬರದ ಭೀಕರ ಎದುರಿತ್ತಿದ್ದಾರೆ. ಆದರೆ ಗಜೇಂದ್ರಗಡ, ರೋಣ, ಬಾದಾಮಿ, ಹುನಗುಂದ ಸೇರಿ ಕೊಪ್ಪಳ ಜಿಲ್ಲೆಯ ಮೂರು ತಾಲೂಕುಗಳು ಯೋಜನೆಗೊಳಪಟ್ಟಿವೆ. 12.815 ಟಿಎಂಸಿ ಅಡಿ ನೀರು ಬಳಕೆ ಮಾಡಿಕೊಂಡು ಒಟ್ಟು 2. 85 ಲಕ್ಷ ಎಕರೆ ನೀರಾವರಿ ಕ್ಷೇತ್ರ ಮಾಡಬೇಕು ಎನ್ನುವುದು ಇದರ ಉದ್ದೇಶವಾಗಿದೆ. ಯೋಜನೆ ಕಾಲಮಿತಿ ಕಡೆಗಣಿ, ಕಳೆದ 6 ವರ್ಷಗಳಿಂದ ಕುಂಟುತ್ತಾ ಸಾಗಿರುವ ಕಾಮಗಾರಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗಜೇಂದ್ರಗಡ ಮತ್ತು ರೋಣ ತಾಲೂಕಿನ ಬೇವಿನಕಟ್ಟಿ, ಅಮರಗಟ್ಟಿ, ಗುಳಗುಳಿ, ಪ್ಯಾಟಿ, ನೆಲ್ಲೂರ, ಕಲ್ಲಿಗನೂರ, ಮುಶಿಗೇರಿ, ರುದ್ರಾಪುರ, ಬಳಗೋಡ, ಸರ್ಜಾಪುರ, ದ್ಯಾಮುಣಸಿ, ಚಿಕ್ಕ ಅಳಗುಂಡಿ, ಹಿರೇ ಅಳಗುಂಡಿ, ಹೊನ್ನಿಗನೂರ, ಶಾಂತಗೇರಿ, ಬೊಮ್ಮಸಾಗರ ಸೇರಿ 17 ಗ್ರಾಮಗಳ ವ್ಯಾಪ್ತಿಯ 3372 ಹೆಕ್ಟೇರ್ ಜಮೀನು ಏತ ನೀರಾವರಿಗೆ ಒಳಪಟ್ಟಿದೆ. ಇದನ್ನು ತ್ವರಿತಗತಿಯಲ್ಲಿ ಕೈಗೊಳ್ಳುವ ನಿಟ್ಟಿನಲ್ಲಿ ಈ ಭಾಗದ ಜನಪ್ರತಿಧಿಗಳು ಆಸಕ್ತಿ ತೋರದೇ, ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ಜನವಿರೋ ನಡೆ ಅನುಸರಿಸುತ್ತಿರುವುದು ಖಂಡನೀಯ.
ಉತ್ತರ ಕರ್ನಾಟಕದ ಯಾವುದೇ ಯೋಜನೆಗಳು ಕಾಲ ಮಿತಿಯಲ್ಲಿ ಮುಗಿಯದೆ ಇರುವುದಕ್ಕೆ ಈ ಭಾಗದ ಜನಪ್ರತಿನಿಧಿಗಳ ರಾಜಕೀಯ ಇಚ್ಚಾಶಕ್ತಿ ಕೊರತೆ ಹಾಗೂ ಯೋಜನೆ ಜಾರಿಗೆ ಸಂಬಂಧಿಸಿ ಅವರಲ್ಲಿನ ಉದಾಸೀನ, ನಿರ್ಲಕ್ಷ್ಯ ಭಾವನೆ ಪ್ರಮುಖ ಕಾರಣವಾಗಿದೆ. ನಮ್ಮಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನ ವಿರೋಧಿ ನಿಲುವಿನವರಾಗಿದ್ದಾರೆ. ನಿದ್ರಾವಸ್ಥೆಯಲ್ಲಿರುವ ಆಡಳಿತಶಾಹಿಗಳನ್ನು ಬಡೆದೆಬ್ಬಿಸುವ ನಿಟ್ಟಿನಲ್ಲಿ ಕೃಷ್ಣಾ ಮೇಲ್ದಂಡೆ 3ನೇ ಹಂತದ ಕೊಪ್ಪಳ ಸೂಕ್ಷ್ಮ ಏತ ನೀರಾವರಿ ತಾಲೂಕು ಹೋರಾಟ ಸಮಿತಿ ಯೋಜನೆಗೆ ಒಳಪಡುವ ಪ್ರತಿ ಗ್ರಾಮಗಳಿಗೂ ತೆರಳಿ ಯೋಜನೆ ಉದ್ದೇಶವನ್ನು ಜನರಿಗೆ ತಿಳಿಸಿ ಗ್ರಾಮ ಮಟ್ಟದಿಂದಲೇ ಹೋರಾಟ ರೂಪಿಸುವ ಕಾರ್ಯಕ್ಕೆ ಅಣಿಯಾಗುತ್ತೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…