ವಿದ್ಯಾರ್ಥಿಯನ್ನು ಕೊಚ್ಚಿ ಕೊಲೆಗೈದು ನೇಣಿಗೆ ಶರಣಾದ
Team Udayavani, Apr 28, 2019, 11:45 AM IST
ಗದಗ: ವಿದ್ಯಾರ್ಥಿಯೊಬ್ಬನನ್ನುಬರ್ಬರವಾಗಿ ಕೊಚ್ಚಿ ಕೊಲೆಗೈದು ಇನ್ನೋರ್ವ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ರೋಣದ ಜಕ್ಕಲಿ ಗ್ರಾಮದಲ್ಲಿಭಾನುವಾರ ಬೆಳಗಿನಜಾವ ನಡೆದಿದೆ.
18 ವರ್ಷ ಪ್ರಾಯದ ವಿಕಾಸ್ ದೊಡ್ಡಮೇಟಿ ಹತ್ಯೆಗೀಡಾದ ವಿದ್ಯಾರ್ಥಿ. ಶೌಕತ್ ಅಲಿ ಎಂಬ ವಿದ್ಯಾರ್ಥಿ ಕೊಲೆ ಮಾಡಿದ್ದು, ಕೂಡಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಕಾಸ್ ಸೋಮವಾರ ಸಿಇಟಿ ಪರೀಕ್ಷೆ ಬರೆಯುವವನಿದ್ದ ಎಂದು ತಿಳಿದು ಬಂದಿದೆ.
ಬಹಿರ್ದೆಸೆಗೆ ತೆರಳಿದ ವೇಳೆ ಆರಂಭವಾದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ.
ಕುತ್ತಿಗೆಗೆ ಶೌಕತ್ ಬಲವಾಗಿ ಕಡಿದಿದ್ದು ವಿಕಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿಕ ಭಯದಿಂದ ಶೌಕತ್ ಅಲಿ ಮರಕ್ಕೆ ನೇಣು ಬಿಗಿದು ಕೊಂಡಿದ್ದಾನೆ.
ಶೌಕತ್ ಅಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.
ನರೇಗಲ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ